ಮಣಿಪಾಲ: 69 ವರ್ಷ ಸೇವೆ ಸಲ್ಲಿಸಿದ್ದ ಎನ್.ವಿ. ಬಲ್ಲಾಳ್ ನಿಧನ
Manipal: NV who served for 69 years. Ballal passed away
Team Udayavani, Aug 27, 2022, 10:12 PM IST
ಮಣಿಪಾಲ: ಮಣಿಪಾಲ ಮಾಹೆ ವಿ.ವಿ. ಕುಲಾಧಿಪತಿ ಡಾ| ರಾಮದಾಸ್ ಪೈಯವರ ಸೆಕ್ರೆಟೇರಿಯಲ್ ಕೋ ಆರ್ಡಿನೇಟರ್, ಕುಂಜಿಬೆಟ್ಟು ನಿವಾಸಿ ಎನ್.ವಿ. ಬಲ್ಲಾಳ್ (ನಿಡಂಬೂರು ವೆಂಕಟರಮಣ ಬಲ್ಲಾಳ್-91) ಅವರು ಆ. 27ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಮತ್ತು ಪುತ್ರ, ಮಣಿಪಾಲ ದಂತ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ| ವಾಸುದೇವ ಬಲ್ಲಾಳ್ ಹಾಗೂ ಪ್ರಾಧ್ಯಾಪಕಿ ಡಾ| ವಿನುತಾ ಭಟ್ ಸಹಿತ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮಣಿಪಾಲದಲ್ಲಿ ಕೆಎಂಸಿ ಆರಂಭವಾಗುವ ಹಿಂದಿನ ದಿನ ಸ್ಥಾಪಕ ಡಾ| ಟಿ.ಎಂ.ಎ. ಪೈಯವರ ಆಪ್ತ ಕಾರ್ಯದರ್ಶಿಯಾಗಿ ಕೆಲಸಕ್ಕೆ ಸೇರಿದ್ದ ಬಲ್ಲಾಳರು ಇದೇ ಆಗಸ್ಟ್ 4ರ ವರೆಗೂ ಸುದೀರ್ಘ 69 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಆಂಗ್ಲ ಭಾಷಾ ಜ್ಞಾನ ಹೊಂದಿದ್ದ ಬಲ್ಲಾಳರು ಶೀಘ್ರ ಲಿಪಿಕಾರರೂ (ಶಾರ್ಟ್ಹ್ಯಾಂಡ್ ಎಕ್ಸ್ಪರ್ಟ್) ಆಗಿದ್ದರು. ಸರಳ ವ್ಯಕ್ತಿತ್ವದ ಬಲ್ಲಾಳ್ ಸಂಸ್ಥೆಗೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು.
ಗಣ್ಯರ ಸಂತಾಪ
ಮಾಹೆ ವಿ.ವಿ. ಕುಲಾಧಿಪತಿ ಡಾ| ರಾಮದಾಸ್ ಎಂ. ಪೈ, ಎಂಇಎಂಜಿ ಅಧ್ಯಕ್ಷ ಡಾ| ಟಿ. ರಂಜನ್ ಪೈ, ಸಹಕುಲಾಧಿಪತಿ ಡಾ| ಎಚ್.ಎಸ್.ಬಲ್ಲಾಳ್, ಕುಲಪತಿ ಲೆ|ಜ| ಡಾ| ಎಂ.ಡಿ.ವೆಂಕಟೇಶ್, ಕುಲಸಚಿವ ಡಾ| ನಾರಾಯಣ ಸಭಾಹಿತ್ ಅವರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.