ನಂದಳಿಕೆ-ಗೋಳಿಕಟ್ಟೆ ರಸ್ತೆ: ಘನ ವಾಹನ ಸಂಚಾರದಿಂದ ತೊಂದರೆ


Team Udayavani, Dec 23, 2022, 5:40 AM IST

ನಂದಳಿಕೆ-ಗೋಳಿಕಟ್ಟೆ ರಸ್ತೆ: ಘನ ವಾಹನ ಸಂಚಾರದಿಂದ ತೊಂದರೆ

ಬೆಳ್ಮಣ್‌ : ಇತ್ತೀಚೆಗೆ ನಂದಳಿಕೆ ಗ್ರಾ.ಪಂ.ನ ಮಹಿಳಾ, ಮಕ್ಕಳ ಗ್ರಾಮಸಭೆಯಲ್ಲಿ ಗೋಳಿಕಟ್ಟೆಯಲ್ಲಿ ಘನ ವಾಹನ ಸಂಚಾರ ನಿಷೆೇಧಕ್ಕೆ ನಡೆಸಿದ್ದ ಆಗ್ರಹ ಹೊಸ ರೂಪ ಪಡೆದಿದ್ದು ಅಕ್ರಮ ಕಲ್ಲಿನ ಕೋರೆಗಳ ಬಗ್ಗೆ ಜನಾಕ್ರೋಶ ವ್ಯಕ್ತವಾಗಿದೆ.

ನಂದಳಿಕೆ, ಸೂಡ ಗ್ರಾಮದ ಸುತ್ತಮುತ್ತಲಿನಲ್ಲಿ ಅನಧಿಕೃತ ಕಲ್ಲು ಕೋರೆಗಳಲ್ಲಿ ಹಗಲು ರಾತ್ರಿಯೆನ್ನದೆ ನಿತ್ಯ ಗಣಿಗಾರಿಕೆ ನಡೆಯುತ್ತಿದ್ದು ಇಲ್ಲಿಂದ ಭಾರೀ ಗಾತ್ರದ ಕಲ್ಲಿನ ಲೋಡು ತುಂಬಿದ ಲಾರಿ, ಟಿಪ್ಪರ್‌ಗಳು ಕಾಮಗಾರಿ ಹಂತದಲ್ಲಿರುವ ಗೋಳಿಕಟ್ಟೆ ರಸ್ತೆಯಲ್ಲಿ ಸಂಚರಿಸುತ್ತಿವೆ. ನಿತ್ಯ ಸುಮಾರು 300ಕ್ಕೂ ಅಧಿಕ ಬƒಹತ್‌ ಗಾತ್ರದ ಟಿಪ್ಪರ್‌ಗಳು ಇಲ್ಲಿ ಸಂಚರಿಸುತ್ತಿವೆ. ಒಂದೆಡೆ
ಧೂಳಿನ ಸಮಸ್ಯೆ, ಮತ್ತೂಂದೆಡೆ ಜಲ್ಲಿ, ಕಲ್ಲುಗಳು ರಸ್ತೆಗೆ ಬೀಳುವುದರಿಂದ ವಾಹನ ಸವಾರರಿಗೆ ಅಡಚಣೆಯಾಗಿದೆ.

ಹದಗೆಡುವ ಭೀತಿಯಲ್ಲಿ ಹೊಸ ರಸ್ತೆ
ಇಲ್ಲಿನ ಗೋಳಿಕಟ್ಟೆ ಕೊಪ್ಪಳ ರಸ್ತೆ “ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿಯಲ್ಲಿ ಸಂಪೂರ್ಣ ಕಾಂಕ್ರೀಟ್‌ ರಸ್ತೆ ನಿರ್ಮಾಣ ಹಂತದಲ್ಲಿದೆ. ಸುಮಾರು ಶೇ. 75ರಷ್ಟು ಕಾಮಗಾರಿ ಮಾತ್ರ ಪೂರ್ಣಗೊಂಡಿದ್ದು ಕ್ಯೂರಿಂಗ್‌ ನಡೆಯುವ ಮುನ್ನವೇ ಈ ರಸ್ತೆಯಲ್ಲೇ ನಿತ್ಯ ಘನ ವಾಹನ ಸಂಚರಿಸುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.ಅಧಿಕಾರಿಗಳ ಮೌನ ನಂದಳಿಕೆ, ಸೂಡ ಗ್ರಾಮದಲ್ಲಿ ಅನೇಕ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿದ್ದು 1-2 ಎಕರೆಗೆ ಪರವಾನಿಗೆ ಪಡೆದು ಸುಮಾರು 5-6 ಎಕರೆ ಜಾಗದಲ್ಲಿ ಅಕ್ರಮ
ವಾಗಿ ಕೆಲವೊಂದು ಕೋರೆಗಳಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಅಲ್ಲದೆ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆ ಇಲ್ಲಿ ಸ್ಫೋಟಕ ಬಳಸಿ ಬಂಡೆಗಳನ್ನು ಅಪಾಯಕಾರಿಯಾಗಿ ನ್ಪೋಟಿಸುತ್ತಿದ್ದಾರೆ ಎಂದು ಸ್ಥಳೀಯರ ಆರೋಪಿಸಿದ್ದಾರೆ.

ಪ್ರತಿಭಟನೆಗೆ ನಿರ್ಧಾರ
ಈಗಾಗಲೇ ಸ್ಥಳೀಯಾಡಳಿತಕ್ಕೆ ಮೌಖೀಕ, ಲಿಖೀತವಾಗಿಯೂ ದೂರು ನೀಡಿದ್ದು ಜಿಲ್ಲಾಧಿಕಾರಿಗಳಿಗೂ ಗ್ರಾ.ಪಂ. ಮೂಲಕ ದೂರು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ರೀತಿಯಲ್ಲಿ ಹೋರಾಟ ನಡೆಸಲಾಗು ವುದು ಎಂದು ಇಲ್ಲಿನ ಸಾಮಾಜಿಕ ಹೋರಾಟಗಾರರು ತಿಳಿಸಿದ್ದಾರೆ.

ಆದೇಶದ ನಿರೀಕ್ಷೆಯಲ್ಲಿದ್ದೇವೆ
ಈ ಬಗ್ಗೆ ಜಿಲ್ಲಾಧಿಕಾರಿಯವರಿಗೂ ಪತ್ರ ಬರೆಯಲಾಗಿದೆ. ಮುಂದಿನ ಜಿಲ್ಲಾಧಿಕಾರಿಗಳ ಆದೇಶದ ನಿರೀಕ್ಷೆ ಯಲ್ಲಿದ್ದೇವೆ. -ಸಂದೇಶ, ಗ್ರಾಮಸ್ಥರು.

ಅನಾಹುತ ತಪ್ಪಿಸಿ
ಈ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಅದೇ ರಸ್ತೆಯಲ್ಲಿ ಸಾಲಾಗಿ ಬೃಹತ್‌ ಘನ ವಾಹನ ಸಂಚರಿಸುತ್ತಿದೆ. ಸಂಬಂಧಪಟ್ಟವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು
-ನಿತ್ಯಾನಂದ ಅಮೀನ್‌, ನಂದಳಿಕೆ, ಗ್ರಾ.ಪಂ. ಅಧ್ಯಕ್ಷ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.