Narayana Guru ಶ್ರೇಷ್ಠ ಸಂತರು: ಶಾಸಕ ಯಶ್ಪಾಲ್ ಸುವರ್ಣ
ಗುರು ಸಂದೇಶದ ಸಾಮರಸ್ಯ ಜಾಥಾಕ್ಕೆ ಚಾಲನೆ
Team Udayavani, Aug 26, 2024, 12:11 AM IST
ಉಡುಪಿ: ಸಮಾಜ ಸುಧಾರಣೆಯ ಸಂತ ಬ್ರಹ್ಮಶ್ರೀ ನಾರಾಯಣಗುರುಗಳು ಸಾರಿದ ಸಂದೇಶವನ್ನು ಜನಸಾಮಾನ್ಯರಿಗೆ ತಿಳಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುಗಳ 170ನೇ ಜನ್ಮದಿನದ ಪ್ರಯುಕ್ತ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ “ಗುರು ಸಂದೇಶದ ಸಾಮರಸ್ಯ ಜಾಥಾ’ಕ್ಕೆ ರವಿವಾರ ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಚಾಲನೆ ನೀಡಲಾಯಿತು.
ಶಾಸಕ ಯಶ್ಪಾಲ್ ಎ.ಸುವರ್ಣ ಮಾತನಾಡಿ, ನಾರಾಯಣ ಗುರು ದೇಶ ಕಂಡ ಶ್ರೇಷ್ಠ ಸಂತರು. ಕರಾವಳಿಯ ಉದ್ದಗಲಕ್ಕೂ ಪ್ರವಾಸ ಕೈಗೊಂಡು ಧಾರ್ಮಿಕ ವಿಚಾರಗಳನ್ನು ಪಸರಿದ್ದರು. ಕೇರಳದಲ್ಲೂ ಹಿಂದೂ ಸಮಾಜವನ್ನು ಒಗ್ಗೂಡಿಸಿದ್ದರು. ಅವರ ವಿಚಾರ, ತ್ಯಾಗ, ಮನೋಭಾವವನ್ನು ಯುವಜನತೆಗೆ ತಿಳಿಸಬೇಕು. ವಿಧಾನಸೌಧದ ಎದುರು ನಾರಾಯಣ ಗುರು ಪುತ್ಥಳಿ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸರಕಾರದಿಂದ ನಾರಾಯಣ ಗುರು ಜಯಂತಿ ಮಾಡಿದರೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಮತ್ತಷ್ಟು ಜಾಗೃತಿ ಮೂಡಬೇಕು. ಮುಂದಿನ ಪೀಳಿಗೆಗೆ ನಾರಾಯಣ ಗುರುಗಳ ಸಂದೇಶಗಳು ತಿಳಿಯಬೇಕು. ಹಿಂದೂ ಸಮಾಜ ಉಳಿಯಲು ಗುರುಗಳ ಕೊಡುಗೆ ಅಪಾರವಾಗಿದೆ. ಬಿಲ್ಲವ ಸಮುದಾಯದ ವಿವಿಧ ಬೇಡಿಕೆಗಳು ಇನ್ನೂ ಈಡೇರಿಕೆಗೆ ಬಾಕಿ ಉಳಿದಿವೆ. ಸಮುದಾಯದವರು ಮತ್ತಷ್ಟು ಗಟ್ಟಿಯಾಗಿ ತಮ್ಮ ಬೇಡಿಕೆಗಳನ್ನು ಪ್ರತಿಪಾದಿಸಿದರೆ ತ್ವರಿತಗತಿಯಲ್ಲಿ ಈಡೇರಲು ಸಾಧ್ಯ. ಸಂತೆಕಟ್ಟೆಯಲ್ಲಿ ಕೋಟಿ ಚೆನ್ನಯ ಸರ್ಕಲ್ ಮಾಡಲು ಸಿದ್ಧತೆಯಾಗಿದ್ದು, ಇದಕ್ಕೆ ನಗರಸಭೆ ಸಹಕರಿಸಬೇಕು ಎಂದರು.
ಉದ್ಯಮಿ ಪ್ರಸಾದ್ರಾಜ್ ಕಾಂಚನ್ ಮಾತನಾಡಿ, ನಾರಾಯಣ ಗುರುಗಳ ಸಂದೇಶವನ್ನು ಪ್ರಸಾರ ಮಾಡಲು ಮತ್ತಷ್ಟು ಒತ್ತು ನೀಡುವ ಅಗತ್ಯವಿದೆ. ಜಾತಿ ರಾಜಕಾರಣ ದೂರ ಮಾಡಲು ನಾರಾಯಣ ಗುರು ತತ್ತಾ$Ìದರ್ಶ ಅಗತ್ಯ ಎಂದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ನಾರಾಯಣ ಗುರುಗಳ ಸರ್ಕಲ್ ನಿರ್ಮಾಣಕ್ಕೆ ನಗರಸಭೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು. ಜಾಥಾವು ಬನ್ನಂಜೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ, ಕೋರ್ಟ್ ರೋಡ್, ಜೋಡುಕಟ್ಟೆ, ಬ್ರಹ್ಮಗಿರಿ, ಅಂಬಲಪಾಡಿ ಬೈಪಾಸ್, ಕರಾವಳಿ ಬೈಪಾಸ್, ಅಂಬಾಗಿಲು, ಗುಂಡಿಬೈಲು, ಕಲ್ಸಂಕ ಮಾರ್ಗವಾಗಿ ಬನ್ನಂಜೆ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.