ನ್ಯೂ ಕಾರ್ಕಡ ಶಾಲೆ: ಶೈಕ್ಷಣಿಕ ಸೌಲಭ್ಯ ಸಮರ್ಪಣೆ
Team Udayavani, Aug 12, 2017, 7:00 AM IST
ಕೋಟ: ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಗಳಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಸುವ ತಂತ್ರಗಾರಿಕೆ ರೂಪುಗೊಳ್ಳುತ್ತಿದೆ. ಈ ಕಾಲಘಟ್ಟದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಭಾಗ್ಯವಂತರು ಎಂದು ಮಣಿಪಾಲ ಟೆಕ್ನಾ ಲಜೀಸ್ ಲಿ.ನ ಆಡಳಿತ ನಿರ್ದೇಶಕ ಟಿ. ಗೌತಮ್ ಎಸ್. ಪೈ. ಹೇಳಿದರು.
ಅವರು ಸಾಲಿಗ್ರಾಮ ನ್ಯೂ ಕಾರ್ಕಡ ಹಿ.ಪ್ರಾ. ಶಾಲೆಗೆ ದಾನಿಗಳು ಕೊಡ ಮಾಡಿದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.ಸ್ಮಾರ್ಟ್ ಕ್ಲಾಸ್ ಉಪಕರಣ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿ ಯಾಗುತ್ತದೆ, ಬದ ಲಾವಣೆಗೆ ತೊಡಗಿಸಿಕೊಳ್ಳುವಂತೆ ಮಾಡು ತ್ತದೆ ಎಂದರು.
ಅಧ್ಯಕ್ಷತೆ ವಹಿ ಸಿದ್ದ ಡಾ| ಟಿ.ಎಂ.ಎ. ಪೈ ಶಿಕ್ಷಣ ಮಹಾ ವಿದ್ಯಾಲಯದ ಉಪನ್ಯಾಸಕ ಡಾ| ಮಹಾಬಲೇಶ್ವರ ರಾವ್ ಮಾತನಾಡಿ, ಆಂಗ್ಲಮಾಧ್ಯಮದ ಹೊಡೆತಕ್ಕೆ ಸಿಲುಕಿ ಕನ್ನಡ ಶಾಲೆಗಳು ತತ್ತರಗೊಂಡಿವೆ. ಆದರೆ ಕನ್ನಡ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗಿಂತ ಸಮಗ್ರ ಜ್ಞಾನವನ್ನು ಹೊಂದಿರುತ್ತಾರೆ ಎಂದರು.
ಈ ಸಂದರ್ಭ ದಾನಿಗಳಾದ ವಂಡಾರು ಚಿತ್ತಾರ ಕ್ಯಾಶ್ಯೂಸ್ ಮಾಲಕ, ಉದ್ಯಮಿ ಡಿ. ಗೋಪಿನಾಥ ಕಾಮತ್ ಅವರು ಗಣಕ ವಿಜ್ಞಾನ ಕೊಠಡಿ ಉದ್ಘಾ ಟನೆ ಗೈದರು ಹಾಗೂ ದಾನಿ ಗಳು ಕೊಡ ಮಾಡಿದ ಸಮವಸ್ತ್ರ ವಿತರಣೆ, ಶಾಲಾ ದಿನಚರಿ ಪುಸ್ತಕ ಬಿಡು ಗಡೆ, ಗುರುತು ಚೀಟಿ ಹಂಚಿಕೆ ನಡೆ ಯಿತು. ಸೆಲ್ಕೋ ಸೋಲಾರ್ ಹಾಗೂ ಮೆಂಡೋ ಫೌಂಡೇಶನ್ ಸ್ಮಾರ್ಟ್ ಕ್ಲಾಸ್ ಅಳವಡಿಕೆಗೆ ಸಹಕಾರ ನೀಡಿತು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಉಡುಪಿ ಜಿಲ್ಲಾ ಅಕ್ಷರದಾಸೋಹ ನಿರ್ದೇ ಶಕ ರಾದ ಬಿ. ನಾಗೇಶ ಶ್ಯಾನು ಭಾಗ್, ಉಡುಪಿ ಬಾಳಿಗ ಫಿಶ್ನೆಟ್ನ ಶಶಿಧರ ಕೆ. ಬಾಳಿಗ, ಬ್ರಹ್ಮಾವರ ಮಹೇಶ ಆಸ್ಪತ್ರೆಯ ಮುಖ್ಯಸ್ಥ ಡಾ| ರಾಕೇಶ ಅಡಿಗ, ಸಿ.ಆರ್.ಪಿ. ಪದ್ಮಾಜಾ, ರೋಟರಿಕ್ಲಬ್ ಕೋಟ- ಸಾಲಿಗ್ರಾಮದ ಅಧ್ಯಕ್ಷ ವ್ಯಾಸರಾಯ್ ಆಚಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ.ಶೇಖರ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಕಾಮತ್, ಸಾಲಿಗ್ರಾಮ ಪ.ಪಂ. ಸದಸ್ಯ ಸಂಜೀವ ದೇವಾಡಿಗ, ಶಾಲಾ ನಾಯಕಿ ತ್ರಿಷಾ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್ ಸ್ವಾಗತಿಸಿ, ಶಿಕ್ಷಕ ನಾರಾಯಣ ಆಚಾರ್ ಕಾರ್ಯಕ್ರಮ ನಿರೂಪಿಸಿ, ರತ್ನಾಕರ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…
Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.