ಮರಳಿ ಬರಲಿಲ್ಲ ಉತ್ತರ ಕರ್ನಾಟಕ ಮಂದಿ; ಪಿಯುಸಿ ದಾಖಲಾತಿಯಲ್ಲಿ ಇಳಿಮುಖ


Team Udayavani, Nov 9, 2020, 5:40 AM IST

ಮರಳಿ ಬರಲಿಲ್ಲ ಉತ್ತರ ಕರ್ನಾಟಕ ಮಂದಿ; ಪಿಯುಸಿ ದಾಖಲಾತಿಯಲ್ಲಿ ಇಳಿಮುಖ

ಉಡುಪಿ: ಲಾಕ್‌ಡೌನ್‌ ಸಂದರ್ಭ ತಮ್ಮ ಊರಿಗೆ ತೆರಳಿದ್ದ ಉತ್ತರ ಕರ್ನಾಟಕ ಸಹಿತ ಅನ್ಯ ಜಿಲ್ಲೆಗಳ ಬಹುತೇಕ ಕಾರ್ಮಿಕರು ಮರಳಿ ಬಾರದೆ ಇರುವುದರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಪಿಯುಸಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಇಳಿಮುಖವಾಗಿದೆ.

ಉದ್ಯೋಗ ಅರಸಿಕೊಂಡು ಕರಾವಳಿಗೆ ಬಂದ ಉತ್ತರ ಕರ್ನಾಟಕದ ವಿವಿಧ ಭಾಗಗಳ ಜನರು ಇಲ್ಲಿಯೇ ಜೀವನ ಸಾಗಿಸುತ್ತಿದ್ದರು. ಅವರ ಮಕ್ಕಳು ಕೂಡ ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದರು. ಆದರೆ ಕೊರೊನಾ ಬಂದಾಗ ಊರಿಗೆ ತೆರಳಿದವರು ಮರಳಲು ಮನಮಾಡುತ್ತಿಲ್ಲ.

ಉಡುಪಿ ಶೇ. 40, ದ.ಕ.: ಶೇ. 25ರಷ್ಟು ಇಳಿಮುಖ
ಉಡುಪಿ ಮತ್ತು ದ.ಕ. ಜಿಲ್ಲೆಯ ಕಾಲೇಜುಗಳಲ್ಲಿ ಉತ್ತರ ಕರ್ನಾಟಕ ಕಾರ್ಮಿಕರ ಮಕ್ಕಳ ದಾಖಲಾತಿ ಪ್ರಮಾಣ ಅನುಕ್ರಮವಾಗಿ ಶೇ. 40 ಮತ್ತು ಶೇ. 25ರಷ್ಟು ಕಡಿಮೆಯಾಗಿದೆ. ಉಡುಪಿಯ ಎರಡು ಮೊರಾರ್ಜಿ ದೇಸಾಯಿ ವಸತಿ ಪಿ.ಯು. ಕಾಲೇಜು

ಸಹಿತ 44 ಸರಕಾರಿ ಪ.ಪೂ. ಕಾಲೇಜು
ಗಳಿದ್ದರೆ 18 ಅನುದಾನಿತ ಪ.ಪೂ. ಕಾಲೇಜುಗಳಿವೆ. ದ.ಕ.ದಲ್ಲಿ 2 ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಸಹಿತ 54 ಸರಕಾರಿ ಪ.ಪೂ. ಕಾಲೇಜುಗಳಿವೆ. 42 ಅನುದಾನಿತ ಪ.ಪೂ. ಕಾಲೇಜುಗಳಿವೆ. ಎಲ್ಲ ಕಡೆ ಇದರ ಪರಿಣಾಮ ಕಂಡುಬರುತ್ತಿದೆ ಎನ್ನುತ್ತಾರೆ ಶಿಕ್ಷಣ ಅಧಿಕಾರಿಗಳು.

2 ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ!
ಅವಿಭಜಿತ ದ.ಕ. ಜಿ ಪುನೀತ್‌ ಸಾಲ್ಯಾನ್‌ಯ ಖಾಸಗಿ ಪ.ಪೂ. ಕಾಲೇಜುಗಳಲ್ಲಿ ಪ್ರವೇಶಕ್ಕೆ ಮಿಶ್ರ ಪ್ರತಿಕ್ರಿಯೆ ಇದೆ. ಲಭ್ಯ ಮಾಹಿತಿ ಪ್ರಕಾರ ಉಡುಪಿ ಎರಡು ಖಾಸಗಿ ಕಾಲೇಜುಗಳಲ್ಲಿ ಯಾವುದೇ ದಾಖಲಾತಿ ಆಗಿಲ್ಲ. ದ.ಕ.ದಲ್ಲಿಯೂ ಕೆಲವು ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಶೇ. 50ರಷ್ಟು ಮಾತ್ರ ದಾಖಲಾತಿಯಾಗಿದೆ. ದ್ವಿತೀಯ ಪಿಯುಸಿಗೆ ಸೇರ್ಪಡೆಯೂ ಕುಸಿತ ಅನ್ಯ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತೇರ್ಗಡೆಯಾಗಿದ್ದರೂ ಕೊರೊನಾ ಕಾರಣದಿಂದಾಗಿ ಊರಿಗೆ ಹೋದವರು ಅಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸಲು ಬಯಸಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಗೂ ವಿದ್ಯಾರ್ಥಿಗಳ ಸಂಖ್ಯೆ ಕುಸಿದಿದೆ.

ಹೊರಜಿಲ್ಲೆಗಳ ವಿದ್ಯಾರ್ಥಿಗಳು ಅಲ್ಲಿಯೇ ಶಿಕ್ಷಣ ಮುಂದುವರಿಸಲು ನಿರ್ಧರಿಸಿರುವುದು ಕರಾವಳಿಯ ಕಾಲೇಜುಗಳಿಗೆ ಹೊಡೆತ ನೀಡಿದೆ. ಕೆಲವು ಪಿಯು ಕಾಲೇಜುಗಳಲ್ಲಿ ಶೂನ್ಯ ದಾಖಲಾತಿಯ ಬಗ್ಗೆ ಪ.ಪೂ. ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ವರದಿ ಮಾಡಿ ಮುಂದಿನ ಕ್ರಮಕ್ಕಾಗಿ ಸಲಹೆ ಪಡೆದುಕೊಳ್ಳುತ್ತೇವೆ.
– ಭಗವಂತ ಕಟ್ಟೇಮನಿ, ಮೊಹಮ್ಮದ್‌ ಇಮ್ತಿಯಾಜ್,  ಉಡುಪಿ, ದ.ಕ., ಡಿಡಿಪಿಯು

 ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

1-sadasd

OCA ಅಧ್ಯಕ್ಷರಾಗಿ ರಣಧೀರ್‌ ಸಿಂಗ್‌ ಅವಿರೋಧ ಆಯ್ಕೆ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

MUDA ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ: ಸಚಿವ ಬೈರತಿ ಸುರೇಶ್‌

MUDA ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ: ಸಚಿವ ಬೈರತಿ ಸುರೇಶ್‌

Karnataka Govt., ಅಗ್ನಿಶಾಮಕ ಇಲಾಖೆ 68 ಚಾಲಕರ ಹುದ್ದೆ ಅಂತಿಮ

Karnataka Govt., ಅಗ್ನಿಶಾಮಕ ಇಲಾಖೆ 68 ಚಾಲಕರ ಹುದ್ದೆ ಅಂತಿಮ

Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !

Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

7-shirva

Monti Fest: ಶಿರ್ವ ಆರೋಗ್ಯ ಮಾತಾ ದೇವಾಲಯದಲ್ಲಿ ಸಂಭ್ರಮದ ತೆನೆ ಹಬ್ಬ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

Road Mishap ಮೂಳೂರಿನಲ್ಲಿ ಸರಣಿ ಅಪಘಾತ: ಮೂರು ಕಾರು ಜಖಂ

1-sadasd

OCA ಅಧ್ಯಕ್ಷರಾಗಿ ರಣಧೀರ್‌ ಸಿಂಗ್‌ ಅವಿರೋಧ ಆಯ್ಕೆ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಅಧಿಕ ಲಾಭಾಂಶ ಆಮಿಷ: ಲಕ್ಷಾಂತರ ರೂ. ವಂಚನೆ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್‌ ದಾಳಿ

1-bhat-bg

Bhatkal;ಗಣಪತಿ ವಿಸರ್ಜನೆ ವೇಳೆ ಸಮುದ್ರದಲ್ಲಿ ಕೊಚ್ಚಿಹೋದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.