ನ.17, 18: ಶತಮಾನೋತ್ತರ ರಜತ ಮಹೋತ್ಸವ; ಉಡುಪಿ ನ್ಯಾಯಾಲಯ, ವಕೀಲರ ಸಂಘ


Team Udayavani, Sep 6, 2024, 11:25 PM IST

Courtನ.17, 18: ಶತಮಾನೋತ್ತರ ರಜತ ಮಹೋತ್ಸವ; ಉಡುಪಿ ನ್ಯಾಯಾಲಯ, ವಕೀಲರ ಸಂಘ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ 125 ವರ್ಷಗಳು ತುಂಬಿದ್ದು, ಈ ಶತಮಾನೋತ್ತರ ರಜತ ಮಹೋತ್ಸವ ಸಮಾರಂಭವನ್ನು ನ.17 ಮತ್ತು 18ರಂದು ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್‌ ಪ್ರವೀಣ್‌ ಕುಮಾರ್‌ ತಿಳಿಸಿದರು.

ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಹೋತ್ಸವದ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.

ನ.17ರ ಬೆಳಗ್ಗೆ ಜೋಡುಕಟ್ಟೆಯಿಂದ ನ್ಯಾಯಾಲಯದ ಆವರಣದ ವರೆಗೆ ಮೆರವಣಿಗೆ ಇರಲಿದೆ. ಬೆಳಗ್ಗೆ 10ಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್‌ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ| ಎಸ್‌.ಅಬ್ದುಲ್‌ ನಝೀರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾರ್‌, ಟಿ.ವೆಂಕಟೇಶ್‌ ನಾಯ್ಕ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌.ಭರತ್‌ ಕುಮಾರ್‌ ಮತ್ತು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌.ಗಂಗಣ್ಣನವರ್‌ ಭಾಗವಹಿಸಲಿದ್ದಾರೆ.

ನ.18ರಂದು ಸಂಜೆ 5ಕ್ಕೆ ಸಮಾರೋಪ ನಡೆಯಲಿದೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಸಮಾರೋಪ ಭಾಷಣ ಮಾಡಲಿದ್ದು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶಿವಶಂಕರ ಬಿ.ಅಮರಣ್ಣವರ್‌, ಸಿಎಂ ಜೋಷಿ, ಟಿ.ಜಿ.ಶಿವಶಂಕರೇ ಗೌಡ, ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌.ಗಂಗಣ್ಣವರ್‌ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾದ್ಯಂತ ಸುಮಾರು 1,300 ನ್ಯಾಯವಾದಿಗಳು ಭಾಗವಹಿಸಲಿದ್ದು, ದ.ಕ., ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ನ್ಯಾಯವಾದಿಗಳನ್ನೂ ಆಹ್ವಾನಿಸಲಾಗುವುದು ಎಂದು ರೆನೋಲ್ಡ್‌ ಪ್ರವೀಣ್‌ ಕುಮಾರ್‌ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ರಾಜೇಶ್‌ ಎ.ಆರ್‌., ರಜತ ಮಹೋತ್ಸವ ಸಮಿತಿ ಖಜಾಂಚಿ ವಿಲ್ಫೆ†ಡ್‌ ಓಸ್ವಾಲ್ಡ್‌ ಡಿ’ಮೆಲ್ಲೋ, ಉಡುಪಿ ವಕೀಲರ ಸಂಘದ ಪದಾಧಿಕಾರಿಗಳಾದ ಮಿತ್ರ ಕುಮಾರ್‌ ಶೆಟ್ಟಿ, ಬೈಲೂರು ರವೀಂದ್ರ ದೇವಾಡಿಗ, ಸಂತೋಷ್‌ ಕುಮಾರ್‌ ಮೂಡುಬೆಳ್ಳೆ, ಗಂಗಾಧರ ಎಚ್‌.ಎಂ., ಆರೂರು ಸುಕೇಶ್‌ ಶೆಟ್ಟಿ, ವಿವಿಧ ಸಮಿತಿಗಳ ಸಂಯೋಜಕರಾದ ಸಂಜೀವ ಎ., ಎಂ.ಶಾಂತಾರಾಮ ಶೆಟ್ಟಿ, ಎನ್‌.ಕೆ.ಆಚಾರ್ಯ, ಬಿ.ನಾಗರಾಜ, ದಿನೇಶ್‌ ಬಿ.ಶೆಟ್ಟಿ, ಆನಂದ ಮಡಿವಾಳ, ಸತೀಶ್‌ ಪೂಜಾರಿ, ಅಸದುಲ್ಲಾ ಕಟಪಾಡಿ, ಅಮೃತಕಲಾ, ಸ್ಮರಣ ಸಂಚಿಕೆಯ ಸಂಪಾದಕ ಶಶೀಂದ್ರ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

 

ಟಾಪ್ ನ್ಯೂಸ್

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.