Padubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ


Team Udayavani, Aug 31, 2024, 6:55 AM IST

paPadubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

ಪಡುಬಿದ್ರಿ: ಇಲ್ಲಿನ ಬೀಚ್‌ನಲ್ಲಿ 4 ದಿನಗಳ ಹಿಂದೆ ಮುಂಬಯಿಯ ಯೂಟ್ಯೂಬರ್‌ ಓರ್ವಳು ಅಸಹ್ಯವಾಗಿ ಫೋಟೋ ಶೂಟ್‌ ನಡೆಸುತ್ತಿದ್ದುದಕ್ಕೆ ಸ್ಥಳೀಯರು ಆಕ್ಷೇಪಿಸಿದ ವಿಷಯ ಈಗ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದು, ಯುವತಿಯ ನಡೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಲ್ಲಿ ಸಂಸ್ಕೃತಿಯ ಎಲ್ಲೆ ಮೀರದಿರಲಿ ಎಂದು ಸ್ಥಳೀಯ ಮೀನುಗಾರರು ಎಚ್ಚರಿಸಿದ್ದಾರೆ.

ಯೂಟ್ಯೂಬರ್‌ ಖ್ಯಾತಿಶ್ರೀ ಎನ್ನುವಾಕೆ ಪೊಲೀಸರ ವಿರುದ್ಧವೇ ಆರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಾನು ಪತಿಯ ಜತೆ ಬಂದು ಫೋಟೋ ಚಿತ್ರೀಕರಿಸುತ್ತಿದ್ದಾಗ ಪೊಲೀಸರೇ ಬಂದು ಎಚ್ಚರಿಸಿದ್ದಾರೆ. ಪಡುಬಿದ್ರಿಯಂಥ ಸುರಕ್ಷಿತ ಬೀಚ್‌ನಲ್ಲಿ ತನಗೆ ಹೀಗಾಗಿದೆ ಎಂದು ಆಕೆ ಆರೋಪಿಸಿದ್ದಾಳೆ.

ಇನ್ಸ್ಟಾಗ್ರಾಂನಲ್ಲಿ ಯುವತಿ ಅಸಮಾಧಾನ
ಬಿಕಿನಿ ಫೋಟೊಶೂಟ್‌ ಪ್ರಕರಣಕ್ಕೆ ಸಂಬಂಧಿಸಿ ಯುವತಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಸ್ಥಳೀಯರು ಹಾಗೂ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಡಲ ತೀರದಲ್ಲಿ ಪತಿಯೇ ನನ್ನ ಫೋಟೋ ತೆಗೆಯುತ್ತಿದ್ದಾಗ ಸ್ಥಳೀಯರು ಮತ್ತು ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ಯುವತಿಯ ಪೋಸ್ಟ್‌ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹಿತಕರ ಘಟನೆ ವರದಿಯಾಗಿಲ್ಲ: ಎಸ್‌ಪಿ
ಒಬ್ಬ ಯುವತಿ ಮತ್ತು ಯುವಕ ಪಡುಬಿದ್ರಿ ಬ್ಲೂಫ್ಲಾಗ್‌ ಬೀಚ್‌ನಲ್ಲಿ ಅಸಭ್ಯವಾಗಿ ವರ್ತಿಸುತಿದ್ದಾರೆಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದು, ಬೀಟ್‌ ಕರ್ತವ್ಯದಲ್ಲಿದ್ದ ಎಎಸ್‌ಐ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲಿರುವ ಯುವಕ ಮತ್ತು ಯುವತಿಯನ್ನು ಕರೆದು ಬ್ಲೂಫ್ಲಾಗ್‌ ಬೀಚ್‌ ಮತ್ತು ವಸತಿ ಪ್ರದೇಶದ ಬಗ್ಗೆ ತಿಳಿವಳಿಕೆ ನೀಡಿ ಅವರನ್ನು ಅಲ್ಲಿಂದ ಕಳುಹಿಸಲಾಗಿದೆ. ಇಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಗ್ಗೆ ಯುವತಿಯನ್ನು ಸಂಪರ್ಕಿಸಿದ್ದು, ಅವರಿಗೆ ಯಾವುದೇ ದೂರುಗಳಿದ್ದಲ್ಲಿ ಮುಕ್ತವಾಗಿ ನೀಡಬಹುದಾಗಿ ಸೂಚಿಸಲಾಗಿದೆ. ಯುವತಿಯಿಂದ ದೂರು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಡಾ| ಕೆ. ಆರುಣ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕರು, ಉಡುಪಿ

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

11

Padubidri: ಸ್ಕೂಟಿಗೆ ವ್ಯಾಗನಾರ್‌ ಕಾರು ಢಿಕ್ಕಿ: ಸವಾರನಿಗೆ ಗಾಯ

10

Udupi: ಟಿಕೆಟ್‌ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ವಶಕ್ಕೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

20-shirva

Shirva ಹಿಂದೂ ಜೂನಿಯರ್‌ ಕಾಲೇಜು; ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ವಿತರಣೆ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.