ದೇವರ ಅನುಗ್ರಹ ದೊರೆತರೆ ಮಾತ್ರ ಸೇವೆಯ ಅವಕಾಶ: ಪುತ್ತಿಗೆ ಶ್ರೀ 


Team Udayavani, Apr 15, 2017, 2:56 PM IST

13-Yelooru-1.jpg

ಕಾಪು: ಮನುಷ್ಯನ ಜೀವನದಲ್ಲಿ ದೇವರ ಸೇವೆ ಅವಕಾಶ ಲಭಿಸುವುದೇ ಅತ್ಯಂತ ಶ್ರೇಷ್ಠ ಅನುಭವ ವಾಗಿದ್ದು, ದೇವರ ಅನುಗ್ರಹವಿದ್ದಲ್ಲಿ ದೇವರ ಸೇವೆಗೈಯ್ಯುವ ಬಾಗಿಲು ತೆರೆದುಕೊಳ್ಳುತ್ತದೆ. ಸಿಕ್ಕಿದ ಅವಕಾಶವನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಪೂರ್ಣ ದೇವತಾನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.ಎ. 13ರಂದು ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಜರಗಿದ ನೂತನ ವ್ಯವಸ್ಥಾಪನ ಸಮಿತಿ ಪದಗ್ರಹಣ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಮಾತನಾಡಿ, ಧಾರ್ಮಿಕ ಪರಿಷ‌ತ್‌ ನೇತೃತ್ವದಲ್ಲಿ ದೇಗುಲಗಳ ಅಭಿವೃದ್ಧಿ/ ವ್ಯವಸ್ಥಾಪನ ಸಮಿತಿ ರಚನಾ ಪ್ರಕ್ರಿಯೆಗಳು ನಡೆಯು ತ್ತಿದ್ದು, ದೇಗುಲಗಳ ಸಮಗ್ರ ಅಭಿವೃದ್ಧಿಯೇ ಅದರ  ಹಿಂದಿನ ಉದ್ದೇಶ ವಾಗಿದೆ. ಸಮಿತಿ
ಸದಸ್ಯರು ಜನರಿಗೆ ಪರಿಚಿತರಾಗಿರಬೇಕೆಂಬ ಚಿಂತನೆ ಯೊಂದಿಗೆ ಪದಗ್ರಹಣ ಸಮಾರಂಭ ಆಯೋಜಿಸಲಾಗುತ್ತಿದೆ ವಿನಃ ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದರು.

ಅದಾನಿ-ಯುಪಿಸಿಎಲ್‌ನ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಮಾತನಾಡಿ, ಎಲ್ಲೂರು ವಿಶ್ವನಾಥ ದೇವರ ಅನುಗ್ರಹದಿಂದ ಕಂಪೆನಿ ಹಲವು ಜನಪರಕಾರ್ಯಕ್ರಮಗಳನ್ನು ಹಮ್ಮಿಕೊಳ್ಳು ತ್ತಿದೆ. ದೇಗುಲದ ವತಿಯಿಂದ ಸಮು ದಾಯ ಭವನ ನಿರ್ಮಾಣಕ್ಕೆ 1.10 ಕೋ. ರೂ. ಅನುದಾನವನ್ನು ಕಂಪೆನಿ ವತಿಯಿಂದ ಒದಗಿಸಲಾಗುವುದು ಎಂದರು.

ವಿವಿಧ ಯೋಜನೆಗೆ ಚಾಲನೆ 
ಎಲ್ಲೂರು ದೇವಸ್ಥಾನದ ವ್ಯಾಪ್ತಿ ಯಲ್ಲಿ ಅದಾನಿ-ಯುಪಿಸಿಎಲ್‌ ವತಿ ಯಿಂದ ನಿರ್ಮಿಸಲು ಉದ್ದೇಶಿಸಿ ರುವ ಮಹಾದ್ವಾರ, ದೇಗುಲದ ಗಾರ್ಡನ್‌ ರಚನೆ ಮತ್ತು ರಂಗ ಮಂಟಪ ರಚನೆಯ ನೀಲ ನಕ್ಷೆ ಬಿಡುಗಡೆಗೊಳಿಸಲಾಯಿತು. ಕಾಪು ಕ್ಷೇತ್ರದ 61 ದೇವಸ್ಥಾನಗಳಿಗೆ 21.96 ಲಕ್ಷ ರೂ. ತಸ್ತೀಕು ಭತ್ಯೆ ವಿತರಿಸಲಾಯಿತು.

ಎಲ್ಲೂರು ಶ್ರೀ ವಿಶ್ವೇಶ್ವರ ದೇವ ಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಚಿತ್ರಾಪುರ ಮಠದ ಕಿರಿಯ ಯತಿಗಳಾದ ವಿದ್ಯೆàಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಜಾನಪದ ಸಂಶೋಧಕ ಕೆ.ಎಲ್‌. ಕುಂಡಂತಾಯ ಧಾರ್ಮಿಕ ಭಾಷಣ ಮಾಡಿದರು.
ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ, ಎಲ್ಲೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆವಸಂತಿ ಮಧ್ವರಾಜ್‌, ತಾಲೂಕು ಪಂಚಾಯತ್‌ ಸದಸ್ಯ ಕೇಶವ ಮೊಲಿ, ಮುಂಬಯಿ ಉದ್ಯಮಿಗಳಾದ ಪ್ರವೀಣ್‌ ಬಿ. ಶೆಟ್ಟಿ ಮಲ್ಲೆಟ್ಟು, ನಾರಾಯಣ ಕೆ. ಶೆಟ್ಟಿ ಎರ್ಮಾಳು, ಅಶೋಕ್‌ ಎನ್‌. ಶೆಟ್ಟಿ, ಕೊಂಡೆಟ್ಟು ಸುಕುಮಾರ್‌ ಶೆಟ್ಟಿ,ಕೃಷ್ಣ ವೈ. ಶೆಟ್ಟಿ, ಚಲನಚಿತ್ರ ನಟ ರಾಜಶೇಖರ ಕೋಟ್ಯಾನ್‌ ಮುದರಂಗಡಿ ಅತಿಥಿಗಳಾಗಿ ಭಾಗವಹಿಸಿದ್ದರು.

ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೇಖರ ಡಿ. ಶೆಟ್ಟಿ ಮಾಣಿಯೂರು ಬರ್ಪಾಣಿ, ನಿರಂಜನ್‌ ಶೆಟ್ಟಿ ಎಲ್ಲೂರು ಕಿನ್ನೋಡಿಗುತ್ತು, ನರಸಿಂಹ ಜೆನ್ನಿ ಪಣಿಯೂರು, ಸೋಮನಾಥ ಪೂಜಾರಿ ಸಾಂತೂರು, ಜಯಲಕೀÒ$¾ ಆಳ್ವ ಪಾದೂರುಗುತ್ತು, ವಿಜಯಲಕೀÒ$¾ ದೇವಾಡಿಗ ಬೆಳಪು, ಬಾಲಕೃಷ್ಣ ಪಣಿ ಯೂರು ಮೊದಲಾದವರು ಉಪಸ್ಥಿತರಿದ್ದರು.ಬೆಳಪು ಸಿ.ಎ. ಬ್ಯಾಂಕ್‌ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಸ್ವಾಗತಿಸಿ ದರು. ಎಲ್ಲೂರು ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ ವಂದಿಸಿದರು. ಎಲ್ಲೂರು ಗ್ರಾಮಪಂಚಾಯತ್‌ ಸದಸ್ಯ ಸತೀಶ್‌ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.