![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Mar 26, 2022, 8:45 AM IST
ಉಡುಪಿ: ನಗರಸಭೆ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ನಗರದ ಹೃದಯ ಭಾಗದಲ್ಲಿರುವ ಜಾಮಿಯಾ ಮಸೀದಿ ಎದುರಿದ್ದ ಅನಧಿಕೃತ ಎರಡು ಹೊಟೇಲ್ ಗಳಿದ್ದ (ಝಾರ ಮತ್ತು ಝೈತೂನ್) ಕಟ್ಟಡವನ್ನು ತೆರವುಗೊಳಿಸಿದ್ದಾರೆ.
ಈ ಹಿಂದೆ ನಗರಸಭೆ ಸಾಮಾನ್ಯ ಸಭೆಯಲ್ಲಿ ನ್ಯಾಯಾಲಯದ ಆದೇಶವಿದ್ದರೂ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳದ ಕುರಿತು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಕಾಪು ತಾಲೂಕಿನಲ್ಲೇ ಉಡುಪಿ ಮಲ್ಲಿಗೆ ಕ್ಲಸ್ಟರ್: ಜಿ.ಪಂ. ಸಿಇಒ
ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ತಹಶೀಲ್ದಾರ್ ಮತ್ತು ಪೌರಾಯುಕ್ತರು ಮೊಕ್ಕಾಂ ಹೂಡಿದ್ದಾರೆ.
ಜಾಮಿಯಾ ಮಸೀದಿ ಎದುರು ಈ ಮೊದಲು ಗುಜರಿ ಅಂಗಡಿಯಿತ್ತು. ಮಸೀದಿಯಿಂದ ಜಾಗವನ್ನು ಲೀಸ್ ಗೆ ಪಡೆದು ನಿಯಮಗಳನ್ನು ಗಾಳಿಗೆ ತೂರಿ ಹೊಟೇಲ್ ನಿರ್ಮಿಸಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹಲವು ತಿಂಗಳ ಹಿಂದೆಯೇ ಕಟ್ಟಡ ತೆರವುಗೊಳಿಸಲು ನ್ಯಾಯಾಲಯ ಸೂಚಿಸಿದೆ. ರಾತ್ರಿಯಿಂದಲೇ ತೆರವು ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ ನಗರಸಭೆ ಆಡಳಿತ ಶನಿವಾರ ಬೆಳಗ್ಗೆಯೇ ನೂರಾರು ಪೊಲೀಸರ ಭದ್ರತೆಯೊಂದಿಗೆ ಕಾರ್ಯಚರಣೆಗೆ ಇಳಿದಿದೆ.
ಹೊಟೇಲ್ ಮಾಲಕರ ತಾವೇ ತೆರವು ಮಾಡುತ್ತೇವೆ ಎಂಬ ಮನವಿಗೆ ನಗರಸಭೆ ಅಧಿಕಾರಿಗಳು ಪುರಸ್ಕರಿಸಿದ್ದು, ಅದರಂತೆ ತೆರವು ಕಾರ್ಯ ಮುಂದುವರಿದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.