ಪಡುಬಿದ್ರಿ ಕೆಪಿಎಸ್: ಮಕ್ಕಳಿದ್ದಾರೆ, ಬೆಂಬಲ ಬೇಕಾಗಿದೆ
Team Udayavani, Jun 12, 2024, 4:18 PM IST
ಪಡುಬಿದ್ರಿ: ಕೆಲವು ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆಯನ್ನು ಅನುಭವಿಸಿದ್ದ ಪಡುಬಿದ್ರಿ ಸರಕಾರಿ ಹಿ.ಪ್ರಾ. ಶಾಲೆ ಇದೀಗ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಹೊಸ ರಂಗಿನೊಂದಿಗೆ ಪುಟಿದೆದ್ದಿದೆ. ಎಲ್ಕೆಜಿ, ಯುಕೆಜಿಯಿದ ಪದವಿಪೂರ್ವ ಶಿಕ್ಷಣ ತನಕವೂ ಇಲ್ಲಿ ಶಿಕ್ಷಣ ದೊರೆಯುತ್ತಿದೆ.480ರಷ್ಟು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆದರೆ, ಹಲವು ಬೇಡಿಕೆ, ಕೊರತೆಗಳಿಂದ ಈ ಶಾಲೆ ಬಳ ಲುತ್ತಿದೆ. ಪ್ರಾಥಮಿಕ ಶಾಲೆ ವಿಭಾಗಕ್ಕೆ ಮುಖ್ಯ ಶಿಕ್ಷಕ ಕೃಷ್ಣಯ್ಯ ಅವರ ಜತೆ ಐದು ಮಂದಿ ಅಧ್ಯಾಪಕರಿದ್ದಾರೆ. ಕನ್ನಡ- ಇಂಗ್ಲಿ ಷ್ ದ್ವಿಭಾಷಾ ಮಾಧ್ಯಮದೊಂದಿಗೆ ಮುಂದು ವ ರಿಯುತ್ತಿದೆ. ಆದರೆ, ಶಾಲೆಗೆ ಶಿಕ್ಷ ಕರು, ಕಟ್ಟಡ ಸೇರಿ ಮೂಲ ಸೌಕರ್ಯದ ಕೊರತೆ ಇದೆ. ಹಿಂದೆ ಲಾಲಾಜಿ ಮೆಂಡನ್ ಅವರು ಶಾಸಕರಾಗಿದ್ದಾಗ 2 ಕೋಟಿ ರೂ. ಅನುದಾನ ಬಿಡುಗಡೆಯಾಗುವ ಹಂತ ತಲುಪಿತ್ತು. ಅದನ್ನು ಈಗ ಮರಳಿ ಪ್ರಯತ್ನಿಸಿ ಪಡೆಯಬೇಕಿದೆ ಎನ್ನುವುದು ಪಡುಬಿದ್ರಿಯ ಶಿಕ್ಷಣಪ್ರೇಮಿಗಳ ಆಶಯ.
ಆಟದ ಮೈದಾನಕ್ಕೆ ಆವರಣಬೇಕು
ಶಾಲೆಗೆ ವಿಶಾಲವಾದ ಆಟದ ಮೈದಾನವೂ ಇದೆ. ಆದರೆ, ಆವರಣ ಗೋಡೆ ಇಲ್ಲ. ಬಡಗು ಬದಿಯಲ್ಲಿ ಸ್ಥಳೀಯ ಮುಸ್ಲಿಮ್ ಸಹೋದರರು ಶಾಲಾ ಗೇಟ್ ನಿರ್ಮಾಣ ಮಾಡಿ ದ್ದಾರೆ. ಪಡುಬಿದ್ರಿ ಗ್ರಾ.ಪಂ. ನೆರವಿನಿಂದ ನರೇಗಾ ಯೋಜನೆಯ ಸುಮಾರು 5ಲಕ್ಷ ರೂ. ಬಳಸಿ ಬದಿಯ ಆವರಣ ಗೋಡೆಯನ್ನು ನಿರ್ಮಿಸಲಾಗುವುದೆಂದು ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಪೂಜಾರಿ ಹೇಳಿದ್ದಾರೆ.
ಸರಕಾರಕ್ಕೆ ಒತ್ತಾಯ
ಕೆಪಿಎಸ್ ಶಾಲಾ ಅಭಿವೃದ್ಧಿಗಾಗಿ ಅನುದಾನದ ಬೇಡಿಕೆ ಯಿದೆ. ಆದರೆ, ಅನುದಾನ ಬಿಡುಗಡೆಗೆ ಪದೇಪದೆ ಸರಕಾರವನ್ನು ಒತ್ತಾಯಿಸಿದ್ದೇನೆ. ಶಾಸಕನ ನೆಲೆಯಲ್ಲಿ ಕೆಪಿಎಸ್ ಶಾಲೆಗೆ ಅನುದಾನ ಒದಗಿಸುವುದೂ ನನ್ನ ಜವಾಬ್ದಾರಿಯಾಗಿದೆ. ಅದಕ್ಕಾಗಿ ಶಕ್ತಿಮೀರಿ ಪ್ರಯತ್ನಿಸುತ್ತೇನೆ.
*ಗುರ್ಮೆ ಸುರೇಶ್ ಶೆಟ್ಟಿ, ಶಾಸಕರು, ಕಾಪು
*ಆರಾಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.