ಪಡುಬಿದ್ರಿ: ವಿಳಾಸ ಕೇಳುವ ನೆಪದಲ್ಲಿ ಶಿಕ್ಷಕಿಯ ಕರಿಮಣಿ ಸರ ಸೆಳೆದು ಪರಾರಿ
Team Udayavani, Nov 9, 2022, 12:24 AM IST
ಪಡುಬಿದ್ರಿ: ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿನ ಹಾಡಿಯ ದಾರಿಯಲ್ಲಿ ನ. 8ರಂದು ಬೆಳಗ್ಗೆ ಅಂಗನವಾಡಿ ಕೆಲಸಕ್ಕೆ ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದ ಕುರ್ಕಿಲ್ಬೆಟ್ಟು ಅಂಗನವಾಡಿ ಶಿಕ್ಷಕಿ ರೇಖಾ (40) ಅವರ ಕುತ್ತಿಗೆಯಲ್ಲಿದ್ದ ಸುಮಾರು 32ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ವಿಳಾಸ ಕೇಳುವ ನೆಪದಲ್ಲಿ ಮೋಟಾರು ಬೈಕಲ್ಲಿ ಬಂದಿದ್ದ ಅಪರಿಚಿತರಿಬ್ಬರು ಸೆಳೆದು ಪರಾರಿಯಾಗಿದ್ದಾರೆ. ಚಿನ್ನದ ಸರದ ಮೌಲ್ಯ 1.44 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ಧನಾಗಿ ಬೈಕಲ್ಲಿಯೇ ಕುಳಿತಿದ್ದ. ಹಿಂಬದಿ ಸವಾರನು ರೇಖಾ ಅವರನ್ನು ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ಈ ಕೃತ್ಯವೆಸಗಿದ್ದು ಆ ಬಳಿಕ ಇಬ್ಬರೂ ಮೋಟಾರು ಬೈಕ್ನಲ್ಲಿಯೇ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.