ಮಟ್ಕಾ ಕೇಂದ್ರಕ್ಕೆ ಪಡುಬಿದ್ರಿ ಪೊಲೀಸರ ದಾಳಿ: ಇಬ್ಬರು ವಶಕ್ಕೆ


Team Udayavani, Mar 21, 2023, 6:25 AM IST

ಮಟ್ಕಾ ಕೇಂದ್ರಕ್ಕೆ ಪಡುಬಿದ್ರಿ ಪೊಲೀಸರ ದಾಳಿ: ಇಬ್ಬರು ವಶಕ್ಕೆ

ಪಡುಬಿದ್ರಿ: ಪಡುಬಿದ್ರಿ ಮಾರುಕಟ್ಟೆ ಪ್ರದೇಶದ ಫ್ಯಾನ್ಸಿ ಸ್ಟೋರ್‌ ಪಕ್ಕದಲ್ಲಿ ವ್ಯವಸ್ಥಿತವಾಗಿ ಹಲವಾರು ತಿಂಗಳುಗಳಿಂದ ನಡೆಸಲಾಗುತ್ತಿದ್ದ ಮಟ್ಕಾ ಚೀಟಿ ವ್ಯವಹಾರದ ಸ್ಥಳಕ್ಕೆ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸ್‌ ಠಾಣೆಯ ತನಿಖಾ ಎಸ್‌ಐ ಎಸ್‌. ಶಿವರುದ್ರಮ್ಮ ಅವರು ಮಾ. 19ರಂದು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಡಿಪಟ್ಣ ನಿವಾಸಿ ಮಾಧವ ಕೋಟ್ಯಾನ್‌ (45)ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ತಾನು ಪಣಿಯೂರಿನ ಮನೋಜ್‌ ಕೋಟ್ಯಾನ್‌ (44) ಪರವಾಗಿ ಹಣ ಸಂಗ್ರಹಿಸುತ್ತಿರುವುದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. 1,150 ರೂ. ನಗದು, ಪರಿಕರಗಳು ಮತ್ತು ಒಂದು ಮೊಬೈಲ್‌ ಫೋನನ್ನು ಸ್ವಾಧೀನಪಡಿಸಿಕೊಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲವು ಕಡೆ ನಿರಂತರ ಮಟ್ಕಾ ಜುಗಾರಿ
ಪೇಟೆ ಭಾಗ ಮಾತ್ರವಲ್ಲದೆ ಪಡುಬಿದ್ರಿಯ ಇನ್ನೂ ಹಲವು ಕಡೆಗಳಲ್ಲಿ ಟೇಬಲ್‌, ಚಯರ್‌ ಹಾಕಿ ಚಾರ್ಟ್‌ಗಳನ್ನೂ ಗೋಡೆಗಳಿಗೆ ಅಂಟಿಸಿ ಒಂದೇ ಕಡೆಗಳಲ್ಲಿ ನಾಲ್ಕೈದು ಜನ ಸೇರಿಕೊಂಡು ಮಟ್ಕಾ ಜುಗಾರಿಯನ್ನು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಡಿಸಿಐಬಿ ತಂಡಗಳು ರೇಡ್‌ಗಳನ್ನು ನಡೆಸಿ ಮಟ್ಕಾ ಜುಗಾರಿಯನ್ನು ತಹಬಂದಿಗೆ ತಂದಿದ್ದರು. ಇತ್ತೀಚಿನ ಸಮಯಗಳಲ್ಲಿ ಕಾಟಾಚಾರಕ್ಕೆ “ಫಿಕ್ಸ್‌’ ರೇಡ್‌ಗಳು ನಡೆಯುತ್ತಿವೆ. ಈ ಕಾರಣದಿಂದ ಒಂದೆರಡು ದಿನ ಬಂದ್‌ ಆಗಿ ಮತ್ತೆ ಈ ಜುಗಾರಿ ತಲೆಯೆತ್ತುತ್ತಿವೆ. ಪಡುಬಿದ್ರಿ ಐದಾರು ಕಡೆಗಳಲ್ಲಿ ಮಟ್ಕಾ ನಿರಂತರವಾಗಿ ನಡೆಯುತ್ತಿದೆ. ಅಲ್ಲಲ್ಲಿ ಅವರ ಗೂಂಡಾ ಪ್ರವೃತ್ತಿಯೂ ಹೆಚ್ಚುತ್ತಲಿದೆ. ಪೊಲೀಸ್‌ ಅಧಿಕಾರಿಗಳು, ಗುಪ್ತಚರ ಅಧಿಕಾರಿಗಳಿಗೆ ಕೂಡ ಈ ಬಗ್ಗೆ ಮಾಹಿತಿ ಇದ್ದರೂ ಸುಮ್ಮನಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.