ಪಲಿಮಾರು ಮೂಲ ಮಠದಲ್ಲಿ ಹನುಮಜ್ಜಯಂತಿ ಮಹೋತ್ಸವ


Team Udayavani, Apr 13, 2017, 3:40 PM IST

1204ra1e.jpg

ಪಡುಬಿದ್ರಿ: ಜ್ಯೋತಿಷ ಶಾಸ್ತ್ರ ಹೇಳುವವರ ಹಾವಳಿಯಿಂದಾಗಿ ಜ್ಯೋತಿಷ ಶಾಸ್ತ್ರವು ಮೌಲ್ಯ ಕಳಕೊಳ್ಳುತ್ತಿದೆ. ಯಾವುದನ್ನೂ ಅರ್ಧ ಕಲಿತು ವಿದ್ಯೆಗೆ ಅಪಚಾರವೆಸಗಬಾರದು. ಈ ನಿಟ್ಟಿನಲ್ಲಿ ಮುಂದಿನ ಪರ್ಯಾಯ ಕಾಲದಲ್ಲಿ ಪಲಿಮಾರು ಮಠದಿಂದ 16ತಿಂಗಳುಗಳ ಕಾಲ ಏಕಾದಶಿಯಂದು ನಾಡಿನ ಎಲ್ಲ ಪುರೋಹಿತರ ಸಹಕಾರದಿಂದ ಶ್ರೀಕೃಷ್ಣ ಮಠದಲ್ಲಿ ಪುರೋಹಿತ ಗೋಷ್ಠಿಗಳನ್ನು ನಡೆಸುವ ಮೂಲಕ ಹೆಚ್ಚಿನ ಸಂದೇಹಗಳನ್ನು ಪರಿಹರಿಸುವ ತಮ್ಮ ಯೋಜನೆಯನ್ನು ಶ್ರೀ ಪಲಿಮಾರು ಮಠ ಯೋಗದೀಪಿಕಾ ವಿದ್ಯಾಪೀಠ ಕುಲಪತಿ, ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.

ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀ ಪಲಿಮಾರು ಮೂಲ ಮಠದಲ್ಲಿನ ಶ್ರೀ ಹನುಮಜ್ಜಯಂತಿ ಮಹೋತ್ಸವದಲ್ಲಿ ಉಡುಪಿ ಶಿವಳ್ಳಿ ಬ್ರಾಹ್ಮಣಪುರೋಹಿತ ಸಂಘ ಇದರ ಸಹಯೋಗದೊಂದಿಗೆ ಷೋಡಶ ಸಂಸ್ಕಾರ ವಿಷಯಾಧಾರಿತ ಪುರೋಹಿತ ಗೋಷ್ಠಿಯ ಕಾರ್ಯಕ್ರಮದಲ್ಲಿ ತಮಿಳುನಾಡು ಶ್ರೀರಂಗಮ್‌ ಅವದಾನಿ ವೇ | ಮೂ | ಭೀಮಾಚಾರ್ಯ ಅವರಿಗೆ ಶ್ರೀರಾಜರಾಜೇಶ್ವರ ತೀರ್ಥ ಪ್ರಶಸ್ತಿಯನ್ನಿತ್ತು ಅನುಗ್ರಹಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆವಹಿಸಿದ್ದ ಶ್ರೀ ಸೋದೆ ವಾದಿರಾಜ ಮಠ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮಠ, ದೇವಸ್ಥಾನಗಳಂತಹ ಧಾರ್ಮಿಕ  ಕೇಂದ್ರಗಳಲ್ಲಿ ಆಯೋಜಿಸುವ ಪುರೋಹಿತ ಘೋಷ್ಠಿಗಳ ಮೂಲಕ ಹುಟ್ಟಿನ ಹಿಂದಿನ  ಸಂಸ್ಕಾರಗಳ ಬಗ್ಗೆ ಅರಿವು ನೀಡುವ ಹಾಗೂ ಷೋಡಶ ಸಂಸ್ಕಾರಗಳ ಬಗ್ಗೆ ಜಾಗƒತಿ  ಮೂಡುವಂತಾಗಲಿ ಎಂದರು.

ಭಗವಂತನನ್ನು ಕಾಣುವಲ್ಲಿ ಸಹಕಾರಿಯಾಗುವ ಸಂಸ್ಕಾರಯುತ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೆಕು. ಪರಂಪರೆಯನ್ನು ಉಳಿಸುವ ಕೆಲಸವಾಗಲಿ. ನಮ್ಮ ವರ್ಗ ಮುಂದೆಯೂ ಸಮಜಕ್ಕೆ ಮಾರ್ಗದರ್ಶಕರಾಗುವಂತಾಗಲಿ ಎಂದು ಅದಮಾರು ಮಠ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಪುರೋಹಿತ ಗೋಷ್ಠಿಯ ನಿರ್ವಾಹಕ ಅಧ್ಯಕ್ಷತೆಯನ್ನು ಉಡುಪಿಯ ವಿ| ಜಿ.ಸುಬ್ರಹ್ಮಣ್ಯ ಭಟ್‌ ಅವಧಾನಿಗಳು ವಹಿಸಿದ್ದರು.ಶಿವಳ್ಳಿ ಬ್ರಾಹ್ಮಣಪುರೋಹಿತ ಸಂಘ ಅಧ್ಯಕ್ಷ ವಿ| ಅಗ್ರಹಾರ ಲಕ್ಷ್ಮೀನಾರಾಯಣ ತಂತ್ರಿ ಸ್ವಾಗತಿಸಿದರು. ವಿ| ರವೀಂದ್ರ ಹೆರ್ಗ ಪ್ರಬಂಧ ಮಂಡಿಸಿದರು. ತತ್ವ ಸಂಶೋಧನ ಸಂಸತ್‌ ನಿರ್ದೇಶಕ ಡಾ| ವಂಶೀಕೃಷ್ಣಾಚಾರ್ಯ ಪುರೋಹಿತ್‌ ನಿರೂಪಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.