ದೇವರ ಹೆಸರಿನಲ್ಲಿ ಕೇರಳ ಉದ್ವಿಗ್ನ: ಪಂದಳ ರಾಜರ ಕಳವಳ


Team Udayavani, Nov 2, 2018, 9:45 AM IST

shabri.jpg

ಉಡುಪಿ: ಕೇರಳದಲ್ಲಿಇದೇ ಪ್ರಥಮ ಬಾರಿಗೆ ದೇವರ ಹೆಸರಿನಲ್ಲಿ ಉದ್ವಿಗ್ನತೆ ಕಂಡುಬಂದಿದೆ ಎಂದು ಶಬರಿಮಲೆ ಕ್ಷೇತ್ರದ ಆಡಳಿತದಾರರಾದ ಪಂದಳ ರಾಜ ಶಶಿಕುಮಾರ ವರ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜ ಉಡುಪಿ ಜಿಲ್ಲೆ, ಧರ್ಮ ಫೌಂಡೇಶನ್‌ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಗುರುವಾರ ನಡೆದ “ಧರ್ಮ’ ಮಹಾಸಹಸ್ರಾರ್ಚನ ಪೂಜೆ ಮತ್ತು ಧರ್ಮ ಜಾಗೃತಿ ಅಭಿಯಾನದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇವಾಲಯದ ಪದ್ಧತಿ ಆಡಳಿತಗಾರರಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದರ ಅರ್ಥ ಎಂದು ಪ್ರಶ್ನಿಸಿದರು.

ಭಕ್ತರ ತೀರ್ಮಾನವೇ ಅಂತಿಮ
ಧಾರ್ಮಿಕ ಕ್ಷೇತ್ರದಲ್ಲಿ ಬದಲಾವಣೆ ಭಕ್ತರು ಮಾಡಬೇಕೇ ವಿನಾ ನ್ಯಾಯಾಲಯವಲ್ಲ. ಧರ್ಮದ ವಿಷಯದಲ್ಲಿ ಅದು ಹಸ್ತಕ್ಷೇಪ ಮಾಡಬಾರದು ಎಂದು ಆಶೀರ್ವಚನ ನೀಡಿದ ಶ್ರೀ ಪೇಜಾವರ ಶ್ರೀಪಾದರು ಹೇಳಿದರು. ಶಬರಿಮಲೆ ವಿಷಯದಲ್ಲಿ ಸರಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಪ್ರಜೆಗಳ ಮೇಲೆ ಧರ್ಮದ ಹೆಸರಿನಲ್ಲಿ ಸರಕಾರ ಹಸ್ತಕ್ಷೇಪ ಮಾಡ ಬಾರದು. ಆದ್ದರಿಂದ ತೀರ್ಪನ್ನು ಮರು ಪರಿಶೀಲಿಸಬೇಕಾಗಿದೆ ಎಂದರು.
ಉತ್ತರಕಾಶಿ ಕಪಿಲಾಶ್ರಮದ ಶ್ರೀ ರಾಮಚಂದ್ರ ಸ್ವಾಮೀಜಿ ಭವ್ಯ ಸಂಸ್ಕೃತಿ ಹೊಂದಿದ ಧರ್ಮದ ವಿಷಯದಲ್ಲಿ ಮೂಗು ತೂರಿಸುವ ಹಕ್ಕು ನ್ಯಾಯಾಲಯಗಳಿಗೆ ಇಲ್ಲ ಎಂದರು.

ಅಯ್ಯಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಮ್ಯುನಿಸ್ಟರು ಈಗ ಅಯ್ಯಪ್ಪ ಭಕ್ತರಿಗೆ ವಿರುದ್ಧವಾಗಿದ್ದಾರೆ ಎಂದು ಕಾಸರಗೋಡಿನ ಕುಂಟಾರು ರವೀಶ ತಂತ್ರಿ ಹೇಳಿದರು. ಅಯ್ಯಪ್ಪ ಸೇವಾ ಸಮಾಜದ ರಾಜ್ಯಾಧ್ಯಕ್ಷ, ನಟ ಶಿವರಾಮ್‌ ಮಾತ ನಾಡಿ, ಭಕ್ತರ ಭಾವನೆಗೆ  ವಿರುದ್ಧವಾಗಿ ರುವ ತೀರ್ಪನ್ನು ಮರುಪರಿಶೀಲಿಸ ಬೇಕು ಎಂದರು.  ಹರಿಯಪ್ಪ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಗಿರೀಶ್‌ ಜಿ.ಎನ್‌. ಸ್ವಾಗತಿಸಿ, ಬೈಕಾಡಿ ಸುಪ್ರಸಾದ ಶೆಟ್ಟಿ ಪ್ರಸ್ತಾವನೆಗೈದರು. ಪಂದಳ ರಾಜರ ಪತ್ನಿ ಮೀರಾ ವರ್ಮ, ಬಾಲಕೃಷ್ಣ ಹೆಗ್ಡೆ, ರಂಜಿತ್‌ ಶೆಟ್ಟಿ, ಪ್ರಕಾಶ ಶೆಟ್ಟಿ, ವಿಜಯ ಕೊಡವೂರು, ರಾಧಾಕೃಷ್ಣ ಮೆಂಡನ್‌, ಕಿಶೋರ್‌ ಡಿ. ಸುವರ್ಣ, ಭೋಜರಾಜ ಕಿದಿಯೂರು, ಬಾಲಕೃಷ್ಣ ಅಮೀನ್‌ ಮಲ್ಪೆ, ಮಹಾಬಲ ಗುರುಸ್ವಾಮಿ, ಉದಯ ಶೆಟ್ಟಿ, ಗೋಪಾಲ ಪೂಜಾರಿ, ರಘುಚಂದ್ರ, ಬಾಬು ಶೆಟ್ಟಿ, ರಾಜು ಗುರುಸ್ವಾಮಿ ಉಪಸ್ಥಿತರಿದ್ದರು. ದಾಮೋದರ ಶರ್ಮ ನಿರ್ವಹಿಸಿದರು.

ಶಬರಿಮಲೆ ಜಗತ್ತಿನಾದ್ಯಂತ ಭಕ್ತರನ್ನು ಹೊಂದಿರುವ ಕ್ಷೇತ್ರ. ಕೇರಳದ ಮಹಿಳೆಯರೂ ಸೇರಿದಂತೆ ಅಸಂಖ್ಯಾಕ ಭಕ್ತರು ಪ್ರತಿಭಟನೆ, ಕಳವಳ ವ್ಯಕ್ತಪಡಿಸುತ್ತಿದ್ದಾರೆ. ದೇವಸ್ವಂ ಮಂಡಳಿ, ಸರಕಾರ ಏನು ಮಾಡುತ್ತದೋ ಗೊತ್ತಿಲ್ಲ. ಮಣಿಕಂಠ ನಮ್ಮ ಮನೆ ಮಗು. ಅನ್ಯಾಯವಾಗಲು ನಾವು ಬಿಡುವುದಿಲ್ಲ.
ಪಂದಳ ರಾಜ ಶಶಿಕುಮಾರ ವರ್ಮ

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.