ಪರಶುರಾಮ ಥೀಂ ಪಾರ್ಕ್ಗೆ ಡಿಸಿ ಕೂರ್ಮಾ ರಾವ್ ಭೇಟಿ
Team Udayavani, Jan 6, 2023, 6:12 AM IST
ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮನ ಕಂಚಿನ ಪ್ರತಿಮೆಯ ಥೀಂ ಪಾರ್ಕ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಗುಡ್ಡದ ಮೇಲೆ ವಸ್ತುಗಳ ಸಾಗಾಟಕ್ಕೆ ಅನಾನುಕೂಲತೆ ನಡುವೆಯೂ ತ್ವರಿತಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ನಿರ್ಮಿತಿ ಕೇಂದ್ರದ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಕೋಟಿ ಚೆನ್ನಯ ಥೀಂ ಪಾರ್ಕ್ಗೆ ತೆರಳಿ ತುಳುನಾಡ ವೈಭವಗಳ ಕಲಾಕೃತಿ ಹಾಗೂ ಯಕ್ಷರಂಗಾಯಣ ಕೇಂದ್ರಕ್ಕೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ತಹಶೀಲ್ದಾರ್ ಪ್ರದೀಪ ಕುರ್ಡೆಕರ್, ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ಅರುಣ್ ಕುಮಾರ್, ಸಹಾಯಕ ಯೋಜನ ನಿರ್ದೇಶಕರಾದ ಪವನ್ ಪೆರುಮುಂಡ, ಸಚಿನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಂದಾಯ ನಿರೀಕ್ಷಕ ಶಿವಪ್ರಸಾದ್, ಆರ್ಕಿಟೆಕ್ ಸಂಪ್ರಿತ್, ಪಿಎಂಎಸ್ಜಿವೈ ಕಾರ್ಯಪಾಲಕ ಎಂಜಿನಿಯರ್ ಸಹಿತ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.