ದಾರಿದೀಪ ನಿರ್ವಹಣೆ ಅವ್ಯವಸ್ಥೆ  ನಗರ ಸಭೆಯ ತಪ್ಪು ನಿರ್ಧಾರಗಳ ಫ‌ಲ


Team Udayavani, Jun 29, 2018, 6:20 AM IST

bjp.jpg

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ದಾರಿದೀಪಗಳ ಅಸಮರ್ಪಕ ನಿರ್ವಹಣೆಯಿಂದ ಎಲ್ಲ ಕಡೆ ದೂರುಗಳು ಕೇಳಿ ಬರುತ್ತಿದೆ. ಇದಕ್ಕೆ ನಗರಸಭೆಯ ತಪ್ಪು ನಿರ್ಧಾರ ಕಾರಣ ಎಂದು ಶಾಸಕ ಕೆ.ರಘುಪತಿ ಭಟ್‌ ಹೇಳಿದರು. 

ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಗರ ಪದಾಧಿಕಾರಿಗಳ ಪೇಜ್‌ ಪ್ರಮುಖರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡು ತಿದ್ದ ಅವರು, ಒಂದು ದೀಪ ದುರಸ್ತಿ ಮಾಡಲು ದೂರು ನೀಡಿದ ನಾಗರಿಕ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ನಗರಾಡಳಿತ ನೇರ ಹೊಣೆಯಾಗಿದ್ದು ಇದರ ನಿರ್ವಹಣೆಗೆ   ಸ್ಥಳೀಯ ಮಾಹಿತಿಯಿಲ್ಲದ ದೂರದ ಶಿವಮೊಗ್ಗದ ಗುತ್ತಿಗೆದಾರರನ್ನು ನೇಮಕ ಮಾಡಿರುವುದು ಮತ್ತು ಇದರಲ್ಲಿ ಅಪಾರ ಭ್ರಷ್ಟಾಚಾರ ನಡೆಸಿರುವುದರ ಬಗ್ಗೆ ಗುಮಾನಿಗಳಿವೆ ಎಂದರು. 

ಹಿಂದೆ ಬಿಜೆಪಿ ಆಡಳಿತದ ಸಮಯದಲ್ಲಿ ದಾರಿದೀಪ ನಿರ್ವಹಣೆ ಮಾಡುತಿದ್ದ ರಮೇಶ್‌ ಎಲೆಕ್ಟ್ರಿಕಲ್ಸ… ಅವರು ಉತ್ತಮ ಸೇವೆ ಸಲ್ಲಿಸಿದ ಅನುಭವ ಮತ್ತು ದಾಖಲೆ ಹೊಂದಿದ್ದರು. ಅವರನ್ನು ಬದಲಾಯಿಸಿದ್ದರ ಉದ್ದೇಶವೇನು ಎಂದು ನಗರಸಭಾ ಕಾಮಗಾರಿಗಳ ಅಭಿವೃದ್ಧಿ ಪರಿಶೀಲನ ಸಭೆಯಲ್ಲಿ ತಾನು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ದೊರೆತಿಲ್ಲ  ಭಟ್‌ ಹೇಳಿದರು. 

ಮಲ್ಪೆ ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆದಷ್ಟು ಬೇಗನೆ ಆರಂಭವಾಗಲಿದೆ. ಪ್ರಕ್ರಿಯೆಗಳು ನಡೆಯುತ್ತಿವೆ ಮತ್ತು ತಾತ್ಕಾಲಿಕವಾಗಿ ಹೊಂಡ ಗುಂಡಿಗಳನ್ನು ಕಾಂಕ್ರೆಟ್‌ ಹಾಕಿ ಮುಚ್ಚಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
 
ನಗರ ಅಧ್ಯಕ್ಷ ಪ್ರಭಾಕರ ಪೂಜಾರಿ ಯವರು ಮಾತನಾಡಿ, ನಗರಸಭಾ ಚುನಾವಣಾ ಪೂರ್ವಭಾವಿಯಾಗಿ ಮತದಾರರ ಸೇರ್ಪಡೆ ಮತ್ತು ಪರಿಷ್ಕರಣೆಯ ಪ್ರಕ್ರಿಯೆ ನಡೆಯುತ್ತಿದ್ದು ಕಾರ್ಯಕರ್ತರು ಮತ್ತೆ ಸಕ್ರಿಯರಾಗಿ ತಮ್ಮ ತಮ್ಮ ವಾರ್ಡ್‌ ವ್ಯಾಪ್ತಿಯಲ್ಲಿ ಅಭಿಯಾನಗಳನ್ನು ಮುಂದುವರಿಸಿ ಎಂದು ಮನವಿ ಮಾಡಿದರು.  ವಿಜಯ ಕೊಡವೂರು ರವಿವಾರ ಚಿಟಾ³ಡಿಯಲ್ಲಿ ನಡೆಯಲಿರುವ ಪೇಜ್‌ ಪ್ರಮುಖರ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು. ನಗರ ಪ್ರ. ಕಾರ್ಯದರ್ಶಿ ಜಗದೀಶ್‌ ಆಚಾರ್ಯ ನಿರೂಪಣೆ ಮಾಡಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾರಮೇಶ್‌, ನಗರ ಉಪಾಧ್ಯಕ್ಷ ಟಿ. ಜಿ. ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.