ಪಾದಚಾರಿಗಳಿಗೆ ಚೂರಿ ಇರಿತ; ಆರೋಪಿಗಳ ಸೆರೆ


Team Udayavani, Jul 29, 2023, 12:14 AM IST

police siren

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಜೈಹಿಂದ್‌ ಜಂಕ್ಷನ್‌ ಬಳಿ ಕುಡಿತದ ಅಮಲಿನಲ್ಲಿದ್ದ ಸ್ಕೂಟರ್‌ ಸವಾರರು ಪಾದಚಾರಿಗಳಿಬ್ಬರ ಜತೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ಇರಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಉದ್ಯಾವರ ಗ್ರಾಮದ ಬೊಳ್ವೆ ಮಠದಕುದ್ರು ನಿವಾಸಿಗಳಾದ ಜಯರಾಮ ತಿಂಗಳಾಯ ಮತ್ತು ಸಂದೀಪ್‌ ಇರಿತಕ್ಕೊಳಗಾಗಿದ್ದು, ಆರೋಪಿಗಳಾದ ಕುರ್ಕಾಲು ಸುಭಾಸ್‌ ನಗರದ ನಿವಾಸಿಗಳಾದ ಪ್ರೇಮನಾಥ್‌, ಸಂಪತ್‌ ಚೂರಿಯಿಂದ ಇರಿದ ಆರೋಪಿಗಳು. ಗೆಳೆಯರಾಗಿದ್ದ ಜಯರಾಮ ತಿಂಗಳಾಯ ಮತ್ತು ಸಂದೀಪ್‌ ಬುಧವಾರ ರಾತ್ರಿ ಬೊಳ್ವೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಉದ್ಯಾವರ ಜೈಹಿಂದ್‌ ಜಂಕ್ಷನ್‌ ಎದುರಿನ ರಾ.ಹೆ. 66ರ ಉಡುಪಿ-ಮಂಗಳೂರು ರಸ್ತೆಯ ಪೂರ್ವದ ಅಂಚಿನಲ್ಲಿರುವಾಗ ರಸ್ತೆಯ ಎದುರಿನಿಂದ ಹೆಡ್‌ಲೈಟ್‌ ಹಾಕದೆ ಸ್ಕೂಟರ್‌ವೊಂದರಲ್ಲಿ ಬಂದ ಆರೋಪಿಗಳು ರಸ್ತೆ ದಾಟಲು ನಿಂತಿದ್ದವರಿಗೆ ಢಿಕ್ಕಿ ಹೊಡೆಯುವ ರೀತಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದರು.

ಈ ವೇಳೆ ಜಯರಾಮ ತಿಂಗಳಾಯ ಅವರು ಹೆಡ್‌ಲೈಟ್‌ ಇಲ್ಲದೆ ಬಂದು ನಮ್ಮನ್ನು ಕೊಲ್ಲುತ್ತೀರಾ ಎಂದು ಸ್ಕೂಟರ್‌ ಸವಾರರನನ್ನು ಪ್ರಶ್ನಿಸಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಸ್ಕೂಟರ್‌ನ ಹಿಂಬದಿ ಸವಾರ ತನ್ನ ಕೈಯಲ್ಲಿದ್ದ ಹರಿತವಾದ ಚೂರಿಯಿಂದ ಜಯರಾಮ ಅವರ ಎಡಗೈ ಭುಜದ ಕೆಳಗೆ, ಬಲಭುಜದ ಬಳಿ ಹಾಗೂ ಹಣೆಗೆ ಚೂರಿಯಿಂದ ಚುಚ್ಚಿದ್ದಾನೆ. ಈ ವೇಳೆ ತಪ್ಪಿಸಲು ಹೋದ ಸಂದೀಪ್‌ ಅವರಿಗೂ ಚೂರಿಯಿಂದ ಬೆನ್ನಿಗೆ ಚುಚ್ಚಿದ್ದಾನೆ. ಗಲಾಟೆ ಕೇಳಿದ ಸಮೀಪದ ಗೂಡಂಗಡಿಯವರು ಬರುವುದನ್ನು ಕಂಡು ಇಬ್ಬರು ಕೂಡಾ ಸ್ಕೂಟರ್‌ ಸಮೇತ ಪರಾರಿಯಾಗಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದ ಸಾಯಿನಾಥ್‌ ಅವರು ಇರಿತಕ್ಕೊಳಗಾದವರನ್ನು ವಾಹನವೊಂದರಲ್ಲಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದು ಕೊಂಡು ಹೋಗಿ ದಾಖಲಿಸಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನ್ಯಾಯಾಂಗ ಬಂಧನ
ಆರೋಪಿಗಳನ್ನು ಕಾಪು ಪೊಲೀ ಸರು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.