ರೈಲ್ವೇ ಟ್ರ್ಯಾಕ್‌ನಲ್ಲೇ ಜನರ ಓಡಾಟ


Team Udayavani, Aug 12, 2021, 4:20 AM IST

ರೈಲ್ವೇ ಟ್ರ್ಯಾಕ್‌ನಲ್ಲೇ ಜನರ ಓಡಾಟ

ಕಾಪು: ಹಲವು ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಮತ್ತು ಕೊಂಕಣ ರೈಲ್ವೇ ಮಾರ್ಗಗಳ ನಡುವೆಯೇ ಇದ್ದರೂ, ಬೆಳಪು ಗ್ರಾಮದ ಪಣಿಯೂರು (ಪಡುಬಿದ್ರಿ) ರೈಲ್ವೇ ನಿಲ್ದಾಣದ ಬಳಿಯ ಪಡುಬೈಲು ತೋಟ ಪರಿಸರ‌ದ ಜನತೆ ಮಾತ್ರ ಮೂಲ ಸೌಕರ್ಯಗಳ ಸೌಲಭ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಇಂದಿನ ಆಧುನಿಕ ಯುಗದಲ್ಲೂ ರಸ್ತೆ, ನೀರು, ಸಂಪರ್ಕದ ವ್ಯವಸ್ಥೆಯಿಂದ ದೂರವೇ ಉಳಿದಿರುವ ಈ ಭಾಗದಲ್ಲಿ ಕೇಬಲ್‌ ಕನೆಕ್ಷನ್‌ ಮತ್ತು ಬಿಎಸ್ಸೆನ್ನೆಲ್‌ ಲೈನ್‌ ಮರೀಚಿಕೆಯಾಗಿದೆ.

ಬೆಳಪು ಗ್ರಾಮದ ಪಣಿಯೂರು ರೈಲ್ವೇ ನಿಲ್ದಾಣ ಸಮೀಪದಲ್ಲಿ ಇರುವ ಪಡುಬೈಲು ತೋಟ ಪರಿಸರದಲ್ಲಿ ವಾಸಿಸುತ್ತಿರುವ 13 ಕುಟುಂಬಗಳ ಪರಿಸ್ಥಿತಿ ದಯನೀಯವಾಗಿದ್ದು, ರೈಲ್ವೇ ಮಾರ್ಗ ನಿರ್ಮಾಣಗೊಂಡು 3 ದಶಕಗಳು ಕಳೆದರೂ ಸಮಸ್ಯೆ ಮಾತ್ರ  ಹಾಗೆಯೇ ಉಳಿದಿದೆ. ಬೈಲು ತೋಟದ ಪೂರ್ವಕ್ಕೆ ಕೊಂಕಣ ರೈಲ್ವೇ ಮಾರ್ಗ, ಪಶ್ಚಿಮಕ್ಕೆ ಬೆಳಪು – ಉಚ್ಚಿಲ ಸಂಪರ್ಕ ರಸ್ತೆ, ದಕ್ಷಿಣಕ್ಕೆ ಪಣಿಯೂರು-ಉಚ್ಚಿಲ ರಸ್ತೆ, ಉತ್ತರಕ್ಕೆ ಬೆಳಪು-ಮೂಳೂರು ಸಂಪರ್ಕ ರಸ್ತೆಗಳಿದ್ದರೂ ಬೆಳಪು ಗ್ರಾಮದ ಪಣಿಯೂರು ಪಡುಬೈಲು ತೋಟದ ನಿವಾಸಿಗಳ ಜೀವನ ದ್ವೀಪದೊಳಗಿನ ಜೀವನದಂತಾಗಿದೆ.

ಕೊಂಕಣ ರೈಲ್ವೇ ಮಾರ್ಗ ನಿರ್ಮಾಣ ಕಾಲದಲ್ಲಿ ಇಲಾಖೆ ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಿಸುವುದಾಗಿ ಭರವಸೆ ನೀಡಿದೆಯಾದರೂ, ರೈಲ್ವೇ ಮಾರ್ಗ ರಚನೆಯಾಗಿ 3 ದಶಕಗಳು ಕಳೆದರೂ ಅವರು ನೀಡಿದ ಆಶ್ವಾಸನೆ ಈಡೇರಿಲ್ಲ. ಕೊಂಕಣ ರೈಲ್ವೇ ಇಲಾಖೆಯು ಮೇಲ್ಸೇತುವೆ ನಿರ್ಮಿಸಿ ಕೊಟ್ಟಲ್ಲಿ ಉಳಿದ ವ್ಯವಸ್ಥೆಗಳನ್ನು ಜೋಡಿಸಿ ಕೊಡಲು ಗ್ರಾ.ಪಂ. ಸಿದ್ಧವಾಗಿದೆ. ಇವೆಲ್ಲವೂ ಖಾಸಗಿ ಕೃಷಿ ಭೂಮಿ ಆಗಿರುವುದರಿಂದ ಅವರು ಗ್ರಾ.ಪಂ.ನೊಂದಿಗೆ ಕೈ ಜೋಡಿಸಿದಲ್ಲಿ ಪರ್ಯಾಯ ರಸ್ತೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದು ಬೆಳಪು ಗ್ರಾ.ಪಂ. ಸದಸ್ಯ ದೇವಿಪ್ರಸಾದ್‌ ಶೆಟ್ಟಿ ಹೇಳಿದ್ದಾರೆ.

ಸಮಸ್ಯೆಗಳೇನು? :

  • ಯಾವುದೇ ಕೆಲಸ ಕಾರ್ಯಗಳಿಗೂ ರೈಲ್ವೇ ಹಳಿ ದಾಟಬೇಕಿರುವುದರಿಂದ ಜನರು ಪ್ರಾಣ ಭಯ ದಿಂದಲೇ ಓಡಾಡಬೇಕಿದೆ. ಜಾನುವಾರುಗಳನ್ನು ಅತ್ತಿಂದಿತ್ತ ಸಾಗಿಸಲೂ ತೊಂದರೆಯಾಗುತ್ತಿದೆ.
  • ಆಧುನಿಕ ಯುಗದಲ್ಲಿ ಕೇಬಲ್‌ ಕನೆಕ್ಷನ್‌, ಬಿಎಸ್‌ಎನ್‌ಎಲ್‌ ಲ್ಯಾಂಡ್‌ ಲೈನ್‌ ಸೌಕರ್ಯದಿಂದ ವಂಚಿತರಾಗಿದ್ದಾರೆ.
  • ಸಮರ್ಪಕ ರಸ್ತೆ ವ್ಯವಸ್ಥೆಯಿಲ್ಲದೇ ಎಲ್ಲ ವಸ್ತುಗಳನ್ನೂ ತಲೆ ಹೊರೆಯಲ್ಲೇ ಮನೆಗೆ ತಲುಪಿಸಬೇಕಾದ ಅನಿವಾರ್ಯತೆ.
  • ಹೆಚ್ಚಿನ ರೈತ ಕುಟುಂಬಗಳೇ ಇಲ್ಲಿರುವುದರಿಂದ ಕೃಷಿ ಕಾರ್ಯಗಳನ್ನು ನಡೆಸಲು ಮತ್ತು ಟ್ರ್ಯಾಕ್ಟರ್‌ ಸುತ್ತು ಬಳಸಿ ಬರುವ ಅನಿವಾರ್ಯತೆಯಿದೆ. ಇದರಿಂದಾಗಿ ಎಕರೆಗಟ್ಟಲೆ ಕೃಷಿ ಭೂಮಿ ಹಡಿಲು ಬಿದ್ದಿವೆ.
  • ತೋಡಿನಲ್ಲಿ ಮಳೆ ನೀರು ತುಂಬಿ ಕೃಷಿ ಬೆಳೆ ನಾಶದ ಭೀತಿ, ಮಳೆಗಾಲದಲ್ಲಿ ನೀರು ಹರಿದು ಹೋಗಲು ವ್ಯವಸ್ಥಿತ ನಾಲೆ ಇಲ್ಲದೆ ಕೃತಕ ನೆರೆ ಭೀತಿಯೂ ಇದೆ.
  • ಸಮರ್ಪಕ ರಸ್ತೆ ಸೌಲಭ್ಯವಿಲ್ಲದೆ ಗ್ರಾ.ಪಂ.ನ ನೀರು ಪೂರೈಸುತ್ತಿಲ್ಲ, ಕಸ ತ್ಯಾಜ್ಯ ವಿಲೇವಾರಿಗೆ ತೊಂದರೆಯಾಗುತ್ತಿದೆ.
  • ಗಿಡ-ಮರಗಳು ಒತ್ತೂತ್ತಾಗಿ ಬೆಳೆದಿರುವುದರಿಂದ ವಿಷ ಪೂರಿತ ಹಾವುಗಳ ಭೀತಿಯೂ ಇದೆ.
  • ಮನೆ ನಿರ್ಮಾಣ, ತುರ್ತು ಸಾಗಾಟ ವ್ಯವಸ್ಥೆಗೆ ತೊಂದರೆ, ಬ್ಯಾಂಕ್‌ ಸಾಲ ವ್ಯವಸ್ಥೆಯಿಂದ ದೂರ.

ಕೃತಕ ನೆರೆಯ ಭೀತಿ :

ಬೆಳಪು ಗ್ರಾಮದಲ್ಲಿ ಹಾದು ಹೋಗಿರುವ ಕೊಂಕಣ ರೈಲ್ವೇ ಮಾರ್ಗ ಮತ್ತು ರೈಲ್ವೇ ನಿಲ್ದಾಣದ ರಚನೆಗಾಗಿ ಕೃಷಿ ಭೂಮಿಯನ್ನು ಬಿಟ್ಟು ಕೊಟ್ಟಿರುವ ಸ್ಥಳೀಯರ ಬೇಡಿಕೆಗೆ ಇಲಾಖೆ ಸ್ವಲ್ಪವೂ ಸ್ಪಂದಿಸುತ್ತಿಲ್ಲ. ಇಲ್ಲಿ ಕ್ರಾಸಿಂಗ್‌ ರಸ್ತೆ / ಅಂಡರ್‌ ಪಾಸ್‌ / ಮೇಲ್ಸೇತುವೆ ನಿರ್ಮಿಸಿ ಕೊಡುವುದಾಗಿ ಇಲಾಖೆಯು 1990ರಲ್ಲೇ ಭರವಸೆ ನೀಡಿತ್ತಾದರೂ ಅದು ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಅಲ್ಲದೆ ಮಳೆಗಾಲದಲ್ಲಿ ಕೃತಕ ನೆರೆಯ ಭೀತಿ ಎದುರಾಗುತ್ತಿದೆ. ಕೃಷಿ ಭೂಮಿಯೂ ನಾಶವಾಗುತ್ತಿದೆ.ರವೀಂದ್ರ ಪೂಜಾರಿ, ಬೈಲುತೋಟ

ಪ್ರಸ್ತಾವನೆ ಬಂದಿಲ್ಲ :  ಪಡುಬಿದ್ರಿ (ಪಣಿಯೂರು) ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಇರುವ ಮನೆಗಳಲ್ಲಿ ವಾಸಿಸುತ್ತಿರುವ ಜನರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಬಗ್ಗೆ ಮತ್ತು ಮೂಲ ಸೌಕರ್ಯಗಳ ಜೋಡಣೆಗೆ ರೈಲ್ವೇ ಟ್ರ್ಯಾಕ್‌ ಅಡ್ಡಿಯಾಗುತ್ತಿರುವ ಬಗ್ಗೆ ಹಾಗೂ ಅಲ್ಲಿನ ಸಮಸ್ಯೆ ಬಗೆಹರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಗಳು ಕೊಂಕಣ ರೈಲ್ವೇಗೆ ಇದುವರೆಗೆ ಬಂದಿಲ್ಲ . ಆದರೂ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ. –ಸುಧಾಕೃಷ್ಣಮೂರ್ತಿ,  ಸಾರ್ವಜನಿಕ ಸಂಪರ್ಕಾಧಿಕಾರಿ, ಕೊಂಕಣ ರೈಲ್ವೇ ಮಂಗಳೂರು ವಿಭಾಗ

 

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.