![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
1,455 ರೂ. ಕೊಟ್ಟು 2,20,100 ರೂ. ದೋಚಿದರು!
Team Udayavani, Jul 4, 2024, 7:05 AM IST
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-620x349.jpg)
ಮಣಿಪಾಲ: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಬಂದ ಸಂದೇಶ ವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂ ತರ ರೂ. ಕಳೆದುಕೊಂಡಿದ್ದಾರೆೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್ ಜೂ. 23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿರುವ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ.ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎrಟuಟ 827ಠಿಜ ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು.
ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಯು “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂಬ ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದಾದ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
![Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ](https://www.udayavani.com/wp-content/uploads/2024/07/22-150x90.jpg)
Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ
![ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ](https://www.udayavani.com/wp-content/uploads/2024/07/car-2-150x102.jpg)
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.