ಕುಂಜೂರು: ರಸ್ತೆಗೆ ಉರುಳಿ ಬಿದ್ದ ವಿದ್ಯುತ್‌ ಕಂಬಗಳು; ತಪ್ಪಿದ ಭಾರೀ ದುರಂತ


Team Udayavani, Apr 24, 2022, 1:08 PM IST

pole

ಕಾಪು: ಗಾಳಿ- ಮಳೆಯಿಂದಾಗಿ ಉಚ್ಚಿಲ ಪಣಿಯೂರು ರಸ್ತೆಯಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿದ ಘಟನೆ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ರಸ್ತೆ ಬದಿಯ ಆರು ವಿದ್ಯುತ್‌ ಕಂಬಗಳು ಉರುಳಿ ಬಿದ್ದು ವಿದ್ಯುತ್‌ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಮೆಸ್ಕಾಂಗೆ ಭಾರೀ ನಷ್ಟವುಂಟಾಗಿದೆ.

ಪಣಿಯೂರು ರೈಲ್ವೇ ಬ್ರಿಡ್ಜ್ ಬಳಿಯಿಂದ ಈಸ್ಟ್‌ ವೆಸ್ಟ್‌ ನರ್ಸರಿಯವರೆಗೆ ಉರುಳಿ ಬಿದ್ದ ವಿದ್ಯುತ್‌ ಕಂಬಗಳ ಜತೆಗೆ ವಯರ್‌ಗಳು ಕೂಡ ತುಂಡಾಗಿ ನೆಲಕ್ಕೆ ಬಿದ್ದಿದ್ದು, ಮಧ್ಯ ರಾತ್ರಿ ಘಟನೆ ಸಂಭವಿಸಿದ ಪರಿಣಾಮ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ವಿದ್ಯುತ್‌ ಕಂಬಗಳು ಹಗಲು ಹೊತ್ತಿನಲ್ಲಿ ಬೀಳುತ್ತಿದ್ದರೆ ಭಾರೀ ಪ್ರಮಾಣದ ನಷ್ಟ ಉಂಟಾಗುವ ಸಾಧ್ಯತೆಗಳಿದ್ದವು.

ಸ್ಥಳೀಯ ಯುವಕರ ಮೆಚ್ಚುವ ಕಾರ್ಯ

ಮಧ್ಯರಾತ್ರಿ ದೊಡ್ಡ ಸದ್ದಿನೊಂದಿಗೆ ವಿದ್ಯುತ್‌ ಕಂಬಗಳು ರಸ್ತೆಗೆ ಉರುಳಿ ಬಿದ್ದಿದ್ದು ಸ್ಥಳೀಯರಲ್ಲಿ ಭಾರೀ ಆತಂಕವುಂಟಾಗಿತ್ತು. ಕೆಲವು ಹೊತ್ತಿನ ಬಳಿಕ ಸ್ಥಳೀಯ ನಿವಾಸಿಗಳಾದ ಮಂಜುನಾಥ ಆಚಾರ್ಯ ಮತ್ತು ರತ್ನಾಕರ ಆಚಾರ್ಯ ಅವರು ಮನೆಯಿಂದ ಹೊರಗೆ ಬಂದು ನೋಡಿದಾಗ ವಿದ್ಯುತ್‌ ಕಂಬಗಳು ಉರುಳಿ ಬಿದ್ದಿರುವ ದೃಶ್ಯ ಕಂಡು ಬಂದಿತ್ತು. ಈ ಬಗ್ಗೆ ಸ್ಥಳೀಯ ಉದ್ಯಮಿ ನಯೇಶ್‌ ಶೆಟ್ಟಿ ಅವರ ಮೂಲಕವಾಗಿ ಮೆಸ್ಕಾಂ ಸಿಬಂದಿಗೆ ಮಾಹಿತಿ ನೀಡಿದ್ದು, ಮೆಸ್ಕಾಂ ಸಿಬಂದಿ ಸ್ಥಳಕ್ಕೆ ಆಗಮಿಸುವವರೆಗೆ ರಸ್ತೆಯ ಇಕ್ಕೆಲಗಳಲ್ಲಿ ನಿಂತು ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಮೆಸ್ಕಾಂ ಸಿಬಂದಿ

ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಲೇ ಮೆಸ್ಕಾಂನ ಅಧಿಕಾರಿಗಳು ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿ, ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿ ಬಳಿಕ ಕಂಬಗಳನ್ನು ರಸ್ತೆಯಿಂದ ಬದಿಗೆ ಸರಿಸುವ ಪ್ರಯತ್ನ ಮಾಡಿದ್ದಾರೆ.

ಮುಂಜಾನೆಯವರೆಗೂ ಶಿಫ್ಟಿಂಗ್‌ ಕೆಲಸ ಮಾಡಿದ್ದು, ಬೆಳಗ್ಗೆಯಿಂದ ವಿದ್ಯುತ್‌ ಕಂಬಗಳನ್ನು ನಿಲ್ಲಿಸಿ, ಕರೆಂಟ್‌ ಪೂರೈಸುವ ಕಾಮಗಾರಿ ನಡೆಸುತ್ತಿದ್ದಾರೆ. ವಿದ್ಯುತ್‌ ಕಂಬಗಳು ಉರುಳಿ ಬಿದ್ದ ಪರಿಣಾಮ ಪಣಿಯೂರು-ಕುಂಜೂರು ಮತ್ತು ಬೆಳಪು ಪರಿಸರದಲ್ಲಿ ಶನಿವಾರ ಸಂಜೆಯವರೆಗೂ ಕರೆಂಟ್‌ ಕೈ ಕೊಟ್ಟಿದೆ.

ಕಳಪೆ ಕಾಮಗಾರಿ ಕಾರಣ?

ಉಚ್ಚಿಲ – ಪಣಿಯೂರು ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಗಳನ್ನು ರಸ್ತೆಗಿಂತ ದೂರಕ್ಕೆ ಹಾಕಲಾಗಿತ್ತು, ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕಂಬಗಳ ಬುಡದಲ್ಲೇ ಅಲ್ಲಲ್ಲಿ ಚರಂಡಿ ತೆಗೆಯಲಾಗಿತ್ತು. ನೆಲಕ್ಕಿಂತ ಕನಿಷ್ಠ ಅಂತರದ ಹೊಂಡ ತೆಗೆದು ವಿದ್ಯುತ್‌ ಕಂಬಗಳನ್ನು ನೆಟ್ಟಿದ್ದು ಗಾಳಿ-ಮಳೆ ಒಟ್ಟಿಗೆ ಸುರಿದ ಪರಿಣಾಮ ವಿದ್ಯುತ್‌ ಕಂಬಗಳು ಧರಾಶಾಯಿಯಾಗಿರುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ದೂರಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.