ಜಿಲ್ಲೆಯಲ್ಲಿ ಎಸೆಸೆಲ್ಸಿ  ಪರೀಕ್ಷೆ ಎದುರಿಸಲು ಸರ್ವ ತಯಾರಿ


Team Udayavani, Jun 11, 2021, 5:50 AM IST

ಜಿಲ್ಲೆಯಲ್ಲಿ ಎಸೆಸೆಲ್ಸಿ  ಪರೀಕ್ಷೆ ಎದುರಿಸಲು ಸರ್ವ ತಯಾರಿ

ಸಾಂದರ್ಭಿಕ ಚಿತ್ರ

ಉಡುಪಿ: ಲಾಕ್‌ಡೌನ್‌ ಹಾಗೂ ಕೋವಿಡ್‌ ನಡುವೆ ಎಸೆಸೆಲ್ಸಿ ಪರೀಕ್ಷೆ ಎದುರಿಸಲು ಜಿಲ್ಲೆಯ ವಿದ್ಯಾರ್ಥಿಗಳು ಸರ್ವ ತಯಾರಿ ನಡೆಸುತ್ತಿದ್ದಾರೆ.

ಬದಲಾದ ಪರೀಕ್ಷಾ ಪದ್ಧತಿಯಲ್ಲಿ ಜಿಲ್ಲೆಯಲ್ಲಿ 77 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಈ ಮೊದಲು 51 ಕೇಂದ್ರಗಳಿದ್ದವು. ಈಗ 26 ಹೊಸ ಕೇಂದ್ರಗಳನ್ನು ರಚನೆ ಮಾಡಿದೆ. 289 ಪ್ರೌಢ ಶಾಲೆಗಳಿಂದ ಒಟ್ಟು 14,380 ಮಕ್ಕಳು ಬರೆಯಲಿದ್ದಾರೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತೀ ಕೇಂದ್ರದಲ್ಲಿ ಒಂದು ಮೀಸಲು ಕೊಠಡಿ ಇರುತ್ತದೆ.

ಹಮ್ಮಿಕೊಳ್ಳಲಾಗಿರುವ ಶೈಕ್ಷಣಿಕ ಕಾರ್ಯಕ್ರಮಗಳು :

ಶಾಲಾವಾರು, ವಿಷಯವಾರು ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳನ್ನು ಬದಲಾಗಿರುವ ಪರೀಕ್ಷಾ ಪದ್ಧತಿಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗುತ್ತಿದೆ. ಈ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಪ್ರಾಕ್ಟೀಸ್‌ ಮಾಡಿಸಲಾಗುತ್ತಿದೆ. ಬದಲಾಗಿರುವ ಪರೀಕ್ಷಾ ಪದ್ಧತಿ ಆಧರಿಸಿ ಆನ್‌ಲೈನ್‌ ಮೂಲಕ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿ ನಡೆಸಲಾಗುತ್ತದೆ. ಪ್ರತೀ ಎರಡು ದಿನಕ್ಕೆ ಒಂದು ದಿನ ವಿಷಯವಾರು ಗೂಗಲ್‌ ಮೀಟ್‌ ಮಾಡಿ ಅವರ ಕಲಿಕಾ ಪ್ರಗತಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ತಾಲೂಕು ಹಂತದಲ್ಲಿ ಗೂಗಲ್‌ ಮೀಟ್‌ ಮೂಲಕ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಬದಲಾಗಿರುವ ಪರೀಕ್ಷಾ ಪದ್ಧತಿ ಕುರಿತು ತಿಳಿಸಲಾಗುತ್ತಿದೆ. ಜಿಲ್ಲಾ ಹಂತದಲ್ಲಿ ಡಿಡಿಪಿಐ ಹಾಗೂ ಎಲ್ಲ ಬಿಇಒ ಮತ್ತು ಮೇಲ್ವಿಚಾರಕ ಅಧಿಕಾರಿಗಳ ಗೂಗಲ್‌ ಮೀಟ್‌ ಮಾಡಿ ಬದಲಾಗಿರುವ ಪರೀûಾ ಪದ್ಧತಿ ಬಗ್ಗೆ ತಿಳಿಸಲಾಗಿದೆ.

ಫೋನ್‌ ಇನ್‌ ಕಾರ್ಯಕ್ರಮ :

ಜೂ. 1ರಿಂದ 14ರ ವರೆಗೆ ತಾಲೂಕು ಹಂತದ ಮುಖ್ಯ ಶಿಕ್ಷಕರ ಗೂಗಲ್‌ ಮೀಟ್‌ ಅನ್ನು ಡಿಡಿಪಿಐ, ಬಿಇಒ ನಡೆಸುತ್ತಿದ್ದಾರೆ. ಪ್ರತೀ ಶಾಲೆಯ ವಿಷಯ ಶಿಕ್ಷಕರು  ತಮ್ಮ ಶಾಲೆಯ ಮಕ್ಕಳಿಗೆ ಬದಲಾದ ಪರೀಕ್ಷಾ ಪದ್ಧತಿಯ ಕುರಿತು ಹಾಗೂ ಕಲಿಕಾ ವಿಧಾನದ ಬಗ್ಗೆ ತಿಳಿಸುತ್ತಿದ್ದಾರೆ. ಜೂ. 15ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಡಿಡಿಪಿಐ ಅಧ್ಯಕ್ಷತೆಯಲ್ಲಿ ಫೋನ್‌ ಇನ್‌ ಕಾರ್ಯಕ್ರಮ ನಡೆಸಿ ಪಾಲಕರಿಗೆ, ಮಕ್ಕಳಿಗೆ ಈ ಪರೀಕ್ಷೆಯ ಬಗ್ಗೆ ತಿಳಿಸಿಕೊಡಲಾಗುತ್ತದೆ.

ಆನ್‌ಲೈನ್‌ ಕಲಿಕೆ :

2021-22ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಯಿಂದ 10ನೇ ತರಗತಿಗಳಿಗೆ ಆನ್‌ಲೈನ್‌ ಮೂಲಕ ಕಲಿಕೆಯನ್ನು ಮಾಡುವ ವಿಧಾನವನ್ನು ವಿಷಯವಾರು ಆನ್‌ಲೈನ್‌ ವಿಧಾನದ ಬೋಧನೆಗೆ ಆನ್‌ಲೈನ್‌ ಚಟುವಟಿಕೆಗಳ ಮೂಲಕ ಕಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೂ.15ರಿಂದ ಶಾಲಾ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಶಿಕ್ಷಕರು ಬೋಧನೆಗೆ ಸಿದ್ಧತೆ ಮಾಡುತ್ತಿದ್ದಾರೆ. ಜು.1ರಿಂದ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಬೋಧನಾ ಕಾರ್ಯ ಆರಂಭವಾಗಲಿದೆ.

ಜಿಲ್ಲೆಯಲ್ಲಿನ ಹೊಸ ಪರೀಕ್ಷಾ ಕೇಂದ್ರಗಳು :

ಬ್ರಹ್ಮಾವರ :

ನಿರ್ಮಲಾ ಪ್ರೌಢ ಶಾಲೆ, ಬ್ರಹ್ಮಾವರ

ಮೌಂಟ್‌ ರೋಸರಿ ಆಂಗ್ಲ ಮಾಧ್ಯಮ ಶಾಲೆ, ಕಲ್ಯಾಣಪುರ

ಕರ್ನಾಟಕ ಪಬ್ಲಿಕ್‌ ಶಾಲೆ, ಕೊಕ್ಕರ್ಣೆ

ಬೈಂದೂರು :

ಎಚ್‌.ಎಂ.ಎಂ.ಎಂ.ಎಸ್‌. ಆಂಗ್ಲ ಮಾಧ್ಯಮ ಶಾಲೆ, ಬೈಂದೂರು

ತೌಹೀದ ಆಂಗ್ಲ ಮಾಧ್ಯಮ ಶಾಲೆ, ಶಿರೂರು

ಸಂದೀಪನ್‌ ಅಂಗ್ಲ ಮಾಧ್ಯಮ ಶಾಲೆ, ಕಂಬದಕೋಣೆ

ಶ್ರೀ ಮೂಕಾಂಬಿಕಾ ಪ್ರೌಢ ಶಾಲೆ, ಮಾವಿನಕಟ್ಟೆ

ಗ್ರೆಗರಿ ಪ್ರೌಢ ಶಾಲೆ, ನಾಡ

ಕಾರ್ಕಳ :

ಜೇಸಿಸ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕಾರ್ಕಳ

ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ, ಗಣಿತನಗರ ಕುಕ್ಕುಂದೂರು

ಕರ್ನಾಟಕ ಪಬ್ಲಿಕ್‌ ಶಾಲೆ, ಹೊಸಮಾರು

ಸಂತ ಜೋಸೆಫ್ ಪ್ರೌಢ ಶಾಲೆ, ಬೆಳ್ಮಣ್‌

ಜ್ಯೋತಿ ಪ್ರೌಢ ಶಾಲೆ, ಅಜೆಕಾರು

ಸರಕಾರಿ ಪದವಿ ಕಾಲೇಜು ಹೆಬ್ರಿ

ಕುಂದಾಪುರ :

ಸರಕಾರಿ ಪದವಿಪೂರ್ವ

ಕಾಲೇಜು ತೆಕ್ಕಟ್ಟೆ

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಸಿದ್ದಾಪುರ

ಮದರ್‌ತೆರೆಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಶಂಕರನಾರಾಯಣ

ಶಾರದಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬಸ್ರೂರು

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಂದಾಪುರ (ಖಾಸಗಿ ಅಭ್ಯರ್ಥಿ ಕೇಂದ್ರ)

ಉಡುಪಿ :

ಸರಕಾರಿ ಪ.ಪೂ.ಕಾಲೇಜು, ಉಡುಪಿ

ಮಹಿಳೆಯರ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು

ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಂಜಿಬೆಟ್ಟು

ಅಲ್‌ ಇಹ್ಸಾನ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಮೂಳೂರು

ದಂಡತೀರ್ಥ ಆಂಗ್ಲ ಮಾಧ್ಯಯ ಪ್ರೌಢ ಶಾಲೆ, ಉಳಿಯಾರಗೋಳಿ, ಕಾಪು

ಸೈಂಟ್‌ ಫ್ರಾನ್ಸಿಸ್‌ ಕ್ಸೇವಿಯರ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಉದ್ಯಾವರ

ಸೈಂಟ್‌ ಜೋನ್ಸ್‌ ಪ್ರೌಢ ಶಾಲೆ, ಶಂಕರಪುರ

ಜುಲೈ 3ನೇ ವಾರದಿಂದ ಪರೀಕ್ಷೆ ಆರಂಭ ವಾಗುವ ಸಾಧ್ಯತೆ ಇದೆ. ಈಗಾಗಲೇ ಪ್ರತೀ ಶಾಲಾವಾರು ಗೂಗಲ್‌ ಮೀಟ್‌ ಮಾಡಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮಾಹಿತಿ ನೀಡಲಾಗುತ್ತಿದೆ. ಕೋವಿಡ್‌ ಕಾರಣ ದಿಂದಾಗಿ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ 26 ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಕಳೆದ ಬಾರಿ 51 ಪರೀಕ್ಷಾ ಕೇಂದ್ರಗಳಿತ್ತು. ಈ ಬಾರಿ 77 ಪರೀಕ್ಷಾ ಕೇಂದ್ರಗಳಿವೆ. -ಎನ್‌.ಎಚ್‌. ನಾಗೂರ,  ಡಿಡಿಪಿಐ ಉಡುಪಿ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.