ಭತ್ತಕ್ಕೆ ಬೆಂಬಲ ಬೆಲೆ ಮರೀಚಿಕೆ? ಇದೀಗ ನೀತಿಸಂಹಿತೆ ಗುಮ್ಮ

ತಡವಾದರೆ ಪ್ರಯೋಜನ ಶೂನ್ಯ

Team Udayavani, Nov 12, 2021, 5:50 AM IST

ಭತ್ತಕ್ಕೆ ಬೆಂಬಲ ಬೆಲೆ ಮರೀಚಿಕೆ? ಇದೀಗ ನೀತಿಸಂಹಿತೆ ಗುಮ್ಮ

ಕೋಟ: ಸರಕಾರದ ವಿಳಂಬ ನೀತಿಯ ಜತೆಗೆ ಪ್ರಸ್ತುತ ವಿಧಾನ ಪರಿಷತ್‌ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕರಾವಳಿಯ ಭತ್ತಕ್ಕೆ ಬೆಂಬಲ ಬೆಲೆ ಈ ಬಾರಿ ಕೂಡ ಮರೀಚಿಕೆಯಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

ಚುನಾವಣೆ ನೀತಿಸಂಹಿತೆಯ ಕಾರಣಕ್ಕೆ ಹೊಸ ಘೋಷಣೆಗಳಿಗೆ ಅವಕಾಶವಿಲ್ಲವಾದ್ದರಿಂದ ಡಿ. 14ಕ್ಕೆ ಚುನಾವಣೆ ಪ್ರಕ್ರಿಯೆ ಪೂರ್ಣ ಗೊಳ್ಳುವ ತನಕ ಬೆಂಬಲ ಬೆಲೆ ಕೇಂದ್ರ ತೆರೆಯುವುದು ಅನುಮಾನ ಎನ್ನಲಾ ಗಿದೆ ಹಾಗೂ ಡಿಸೆಂಬರ್‌ ಆರಂಭದಲ್ಲೇ ಜಿಲ್ಲೆಯ ಭತ್ತದ ಬೆಳೆ ಸಂಪೂರ್ಣ ಕಟಾವುಗೊಂಡು ಖಾಸಗಿ ಮಿಲ್‌ ಸೇರುವುದರಿಂದ ಅನಂತರ ಕೇಂದ್ರ ಆರಂಭಿಸಿದರೂ ಪ್ರಯೋಜನವಿಲ್ಲ.

ಆಡಳಿತ ವ್ಯವಸ್ಥೆಯ
ನಿರ್ಲಕ್ಷ್ಯಕ್ಕೆ ರೈತ ಹೈರಾಣು
ವಿಧಾನ ಪರಿಷತ್‌ ಚುನಾವಣೆ ಘೋಷಣೆ  ಯಾಗುವ ವಿಚಾರ ಸರಕಾರಕ್ಕೆ ಮೊದಲೇ ತಿಳಿದಿದ್ದರೂ ಬೆಂಬಲ ಬೆಲೆ ಘೋಷಣೆ ಬಗ್ಗೆ ನಿರ್ಲಕ್ಷ್ಯ ತೋರಿತ್ತು. ಈ ಬಗ್ಗೆ ಉದಯವಾಣಿ ಕಳೆದ ಒಂದು ತಿಂಗಳಿಂದ ಹಲವು ಬಾರಿ ಗಮನ ಸೆಳೆದರೂ ಜಿಲ್ಲೆಯ ಜನಪ್ರತಿನಿಧಿಗಳು, ಸರಕಾರ ಎಚ್ಚೆತ್ತುಕೊಂಡಿರಲಿಲ್ಲ.

ವಿಶೇಷ ಅನುಮತಿ ಸಾಧ್ಯ
ಕೇಂದ್ರ ಸರಕಾರದಿಂದ ಈ ಹಿಂದೆ ಬೆಂಬಲ ಬೆಲೆ ಘೋಷಣೆಯಾಗಿರು ವುದರಿಂದ ಬೆಂಬಲ ಬೆಲೆ ಕೇಂದ್ರ ತೆರೆಯಲು ನೀತಿ ಸಂಹಿತೆ ಅಡ್ಡಿಯಾಗು
ವುದಿಲ್ಲ ಎನ್ನುವುದು ಹಿರಿಯ ಅಧಿಕಾರಿ ಯೋರ್ವರ ಅಭಿಪ್ರಾಯವಾಗಿದೆ. ಆದರೆ ಇದಕ್ಕೆ ಚುನಾವಣಾ ಆಯೋಗದ ವಿಶೇಷ ಅನುಮತಿ ಅಗತ್ಯ ಮತ್ತು ಕೇಂದ್ರದ ಬೆಂಬಲ ಬೆಲೆಗೆ ಹೆಚ್ಚುವರಿಯಾಗಿ ರಾಜ್ಯದ ಪಾಲಿನ ಮೊತ್ತವನ್ನು ಘೋಷಿಸು ವಂತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:ನ.18ರಂದು ಈ ಶತಮಾನದ ಅತಿದೀರ್ಘಾವಧಿಯ ಭಾಗಶಃ ಚಂದ್ರಗ್ರಹಣ

ಹೇಳಿದರೂ ಕೇಳುವವರಿಲ್ಲ
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭೌಗೋಳಿಕವಾಗಿ ಮತ್ತು ಕೃಷಿ ಋತುವಿನಲ್ಲಿ ವ್ಯತ್ಯಾಸವಿರುತ್ತದೆ. ಇಲ್ಲಿ ನಾಟಿ, ಕಟಾವು ಬೇಗ ನಡೆಯುತ್ತದೆ. ಆದ್ದರಿಂದ ಈ ಮೂರ್‍ನಾಲ್ಕು ಜಿಲ್ಲೆಗಳಿಗೆ ಪ್ರಾದೇಶಿಕತೆಗೆ ಅನುಗುಣವಾಗಿ ಪ್ರತ್ಯೇಕ ನೀತಿ ಅಗತ್ಯವಿದೆ ಎನ್ನುವುದನ್ನು ಪ್ರಥಮ ಬಾರಿ ಶಾಸಕನಾದಾಗಿನಿಂದ ಪ್ರತಿಪಾದಿಸುತ್ತಿದ್ದೇನೆ. ಮಂತ್ರಿಗಳಿಗೂ ತಿಳಿಸಿದ್ದೇನೆ. ಆದರೆ ಯಾರೂ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.
ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕುಂದಾಪುರ ಶಾಸಕ

ಸ್ವತಃ ಸಮಸ್ಯೆ ಎದುರಿಸಿದ್ದೇನೆ
ನಾನು ಇಂದಿಗೂ ಸ್ವತಃ 40-45 ಎಕ್ರೆ ಭತ್ತದ ಕೃಷಿ ಮಾಡುತ್ತೇನೆ. ಈ ಬಾರಿ ಮಳೆ ಇರುವುದರಿಂದ ಕಟಾವು ತಡವಾಯಿತು. ಇಲ್ಲವಾದರೆ ಇಷ್ಟರೊಳಗೆ ನಮ್ಮಲ್ಲಿ ಕಟಾವು ನಡೆದು ಭತ್ತ ಮಿಲ್‌ ಸೇರುತ್ತಿತ್ತು. ಬೆಂಬಲ ಬೆಲೆ ಘೋಷಣೆ, ಖರೀದಿ ಕೇಂದ್ರ ಸ್ಥಾಪನೆ ತಡವಾಗುತ್ತಿರುವುದರಿಂದ ಕರಾವಳಿಯ ರೈತರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೃಷಿ ಮಂತ್ರಿಗಳನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ಅಗತ್ಯವಿದ್ದರೆ ಸದನದಲ್ಲಿ ಕೂಡ ಚರ್ಚೆ ನಡೆಸುತ್ತೇನೆ. ಮುಂದಿನ ದಿನಗಳಲ್ಲಿ ಕರಾವಳಿಗೆ ಪ್ರತ್ಯೇಕ ಕೃಷಿ ನೀತಿ ಅಗತ್ಯವಾಗಿ ಬೇಕಿದೆ.
– ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.