ಇಂದು ಉಡುಪಿಗೆ ಪ್ರಧಾನಿ ಮೋದಿ


Team Udayavani, May 1, 2018, 5:40 AM IST

Modi—Udupi-30-4.jpg

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಮಂಗಳವಾರ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ನಗರ ಸಜ್ಜಾಗಿ ನಿಂತಿದೆ. ಬಿಜೆಪಿ ಜಿಲ್ಲಾ ಘಟಕ ಸಿದ್ಧತೆ ಪೂರ್ಣಗೊಳಿಸಿದೆ. ಪ್ರಧಾನಿ ಆದ ಬಳಿಕ ನಗರಕ್ಕೆ ಇದೇ ಮೊದಲ ಬಾರಿಗೆ ಬರುತ್ತಿರುವುದು ವಿಶೇಷ. ಹಾಗಾಗಿ ಬಿಜೆಪಿ ಕಾರ್ಯಕರ್ತರಲ್ಲದೆ, ಜನಸಾಮಾನ್ಯರಲ್ಲೂ ಈ ಭೇಟಿ ಕುತೂಹಲ ಮೂಡಿಸಿದೆ.

ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಅಪರಾಹ್ನ 1 ಗಂಟೆಗೆ ಸಭೆ ಆರಂಭವಾಗಲಿದ್ದು, ಸುಮಾರು 1 ಲಕ್ಷ ಮಂದಿ ಸಾರ್ವಜನಿಕರು,  ಬಿಜೆಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಅಪರಾಹ್ನ 3ಕ್ಕೆ ಮೋದಿಯವರು ಭಾಷಣ ಮಾಡಲಿರುವರು. ಹಾಗಾಗಿ ಸಾರ್ವಜನಿಕರು, ಕಾರ್ಯಕರ್ತರು 1 ಗಂಟೆಯ ಮೊದಲು ಮೈದಾನದೊಳಗೆ ಪ್ರವೇಶಿಸಬೇಕಿದೆ. ಉಡುಪಿಯಲ್ಲದೆ, ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ ಜನರೂ ಪಾಲ್ಗೊಳ್ಳುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರು, ಬಿಜೆಪಿ ಅಭ್ಯರ್ಥಿಗಳು ಪಾಲ್ಗೊಳ್ಳುವರು ಎಂದು ಜಿಲ್ಲಾ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಸಭೆಗೆ ಜನರನ್ನು ಸೇರಿಸಿ ಯಶಸ್ವಿಗೊಳಿಸುವ ಸಂಬಂಧ ಜಿಲ್ಲೆಯಾದ್ಯಂತ ಬಿಜೆಪಿ ಮೋದಿ ರಥ ಸಂಚರಿಸಿದೆ. ನೀತಿಸಂಹಿತೆಯ ಕಾರಣದಿಂದ ನಗರವನ್ನು ಬಿಜೆಪಿ ಧ್ವಜಗಳಿಂದ ಸಿಂಗರಿಸಿಲ್ಲ. ಆದರೆ ಮೈದಾನ ಪರಿಸರವನ್ನು ಕಾರ್ಯಕ್ರಮ ಆರಂಭವಾಗುವ ಮೊದಲು ರಾರಾಜಿಸುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಕಾರ್ಯನಿರತರಾಗಿದ್ದಾರೆ.


ಪ್ರಧಾನಿ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಸಿದ್ಧತಾ ಸಭೆ ನಡೆಸಿದರು.

ಎಸ್‌.ಪಿ.ಜಿ. ಸರ್ಪಗಾವಲು
ಒಂದು ವಾರದಿಂದಲೇ ನಗರದಲ್ಲಿ ಠಿಕಾಣಿ ಹೂಡಿರುವ ಎಸ್‌.ಪಿ.ಜಿ. ತಂಡಗಳು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಂಡಿವೆ. ಎ. 30ರಂದು ಹೆಲಿಪ್ಯಾಡ್‌ ನಿಂದ ಎಂಜಿಎಂ ಕಾಲೇಜು ಮೈದಾನದವರೆಗೆ ಪ್ರಧಾನಿಯವರನ್ನು ಬೆಂಗಾವಲಿನೊಂದಿಗೆ ಕರೆತರುವ ರಿಹರ್ಸಲ್‌ ಸಹ ನಡೆಸಲಾಗಿದೆ.


ಪ್ರಧಾನಿ ಮೋದಿ ಭಾಷಣ ಮಾಡಲಿರುವ ಎಂ.ಜಿ.ಎಂ. ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಸಿದ್ಧವಾಗಿದೆ.​​​​​​

ಬಿಗಿ ಬಂದೋಬಸ್ತ್
ಐಜಿಪಿ, ಜಿಲ್ಲಾ ಎಸ್‌ಪಿ ಸಹಿತ ಉನ್ನತ ಪೊಲೀಸ್‌ ಅಧಿಕಾರಿಗಳು ಈಗಾಗಲೇ ಬಿಗಿ ಬಂದೋಬಸ್ತ್ ಗೂ ಕ್ರಮ ಕೈಗೊಂಡಿದ್ದಾರೆ. ಅಗತ್ಯದಷ್ಟು ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿದೆ. ಪ್ರಧಾನಿ ಆಗಮನದ ಹಾದಿಯಲ್ಲಿ ಯಾವುದೇ ಭದ್ರತಾ ಲೋಪವಾಗಬಾರದೆಂದು ವಾಹನ ಸಂಚಾರವನ್ನು ಕೆಲವೆಡೆ ನಿಷೇಧಿಸಿ, ಇನ್ನು ಕೆಲವೆಡೆ ಪರ್ಯಾಯ ಮಾರ್ಗಗಳಿಗೆ ಬದಲಿಸಲಾಗಿದೆ.

ನಗರ ಸ್ವಚ್ಛ
ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಸೋಮವಾರ ನಗರಸಭೆಯ ಸಿಬಂದಿ ನಗರದ ಪ್ರಮುಖ ರಸ್ತೆಗಳ ಬದಿಯ ಕಳೆಗಿಡಗಳನ್ನು ಸವರಿ ಸ್ವಚ್ಛಗೊಳಿಸಿದರು. ಜತೆಗೆ ಕೆಲವೆಡೆ ರಸ್ತೆಯಲ್ಲಿದ್ದ ಗುಂಡಿಗಳಿಗೆ ಡಾಮರು ಹಾಕಿ ದುರಸ್ತಿಗೊಳಿಸಲಾಯಿತು.

ಇಂದು ಡಿಡಿಪಿಯು ಕಚೇರಿ ನಗರಕ್ಕೆ ಶಿಫ್ಟ್
ಉಡುಪಿ:
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ ಬದಲಾಯಿಸಲಾಗುತ್ತದೆ. ಇದರ ಪರಿಣಾಮ ದ್ವಿತೀಯ ಪಿಯುಸಿ ಫ‌ಲಿತಾಂಶ ನೋಡುವುದಕ್ಕಾಗಿ ನಗರದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ಸಾಧ್ಯತೆ ಇದೆ. ಪ.ಪೂ. ಶಿಕ್ಷಣ ಇಲಾಖೆಯ ಅಧಿಕಾರಿ ಕಚೇರಿಯನ್ನು ಮೇ 1ರಂದು ತಾತ್ಕಾಲಿಕವಾಗಿ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಿಂದ ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣ ಬಳಿ ಇರುವ ಬೋರ್ಡ್‌ ಹೈಸ್ಕೂಲ್‌ಗೆ ಸ್ಥಳಾಂತರಿಸಲಾಗಿದೆ. ಅಲ್ಲಿಯೇ ಎಲ್ಲ ಕಾಲೇಜುಗಳ ಫ‌ಲಿತಾಂಶ ಪಟ್ಟಿಯನ್ನು ಕಾಲೇಜು ಪ್ರಾಂಶುಪಾಲರು/ಉಪನ್ಯಾಸಕರಿಗೆ ನೀಡಲಾಗುವುದು.

ಮೇ 5ರಂದು ಮಂಗಳೂರಿಗೆ ಮೋದಿ
ಮಂಗಳೂರು:
ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೇ 5ರಂದು ದ. ಕನ್ನಡ ಜಿಲ್ಲೆಗೆ ಆಗಮಿಸಿ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮೇ 8ರಂದು ಸಭೆಯನ್ನು ಉದ್ದೇಶಿಸಿ ಮಾತನಾಡುವ ಬಗ್ಗೆ ಈ ಮೊದಲು ತೀರ್ಮಾನವಾಗಿತ್ತು. ಆದರೆ ಸದ್ಯ ಬದಲಾವಣೆ ಆಗಿದ್ದು, ಮೇ 8ರ ಬದಲು ಮೇ 5ರಂದೇ ಸಂಜೆ 6ಕ್ಕೆ ನಗರದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುವ ಬಗ್ಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಬಹುತೇಕ ನೆಹರೂ ಮೈದಾನದಲ್ಲೇ ಸಭೆ ಆಯೋಜಿಸಲು ಯೋಚಿಸಲಾಗಿದೆ. ಆದರೆ ಸಭೆಯ ಸ್ಥಳದ ಬಗ್ಗೆ ಇನ್ನೂ ಅಂತಿಮವಾಗಿಲ್ಲ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.