ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳನ್ನು ಉತ್ತೇಜಿಸಲು ರಫ್ತುದಾರರ ಸಮಾವೇಶ, ಪ್ರದರ್ಶನ

Team Udayavani, Oct 15, 2022, 1:16 AM IST

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿ ನಲ್ಲಿ ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಾರು ಕಟ್ಟೆಯಲ್ಲಿ ಮಾರಾಟ ಮಾಡಲು ಅನು ಕೂಲವಾಗುವಂತೆ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕೃಷಿ ಸಹಿತ ಸರಕಾರದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮಲ್ಲಿರುವ ಬುದ್ಧಿ ಶಕ್ತಿಯನ್ನು ಉಪ  ಯೋಗಿಸಿ ಹೊಸತನವನ್ನು ಹುಡುಕಬೇಕು ಎಂದು ಕೇಂದ್ರ ಕೃಷಿ (ರಾಜ್ಯಖಾತೆ) ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿ ಕಾರ, ಲಘು ಉದ್ಯೋಗ ಭಾರತಿ- ಕರ್ನಾಟಕ, ಐಎಂಎಫ್ ಫೌಂಡೇ ಶನ್‌ ವತಿಯಿಂದ ಶುಕ್ರವಾರ ಕಿದಿಯೂರು ಹೊಟೇಲ್‌ನ ಶೇಷಶಯನ ಸಭಾಂ
ಗಣ ದಲ್ಲಿ ಹಮ್ಮಿಕೊಂಡಿದ್ದ ಕರಾವಳಿ ಕರ್ನಾಟಕದ ಕೃಷಿ ಉತ್ಪನ್ನ  ಉತ್ತೇ ಜನಕ್ಕೆ ಹಮ್ಮಿಕೊಂಡಿದ್ದ ರಫ್ತುದಾರರ ಸಮಾವೇಶ ಹಾಗೂ ಪ್ರದರ್ಶನ ಉದ್ಘಾ ಟಿಸಿ ಅವರು ಮಾತನಾಡಿದರು.

ಕರಾವಳಿ ಕರ್ನಾಟಕದಲ್ಲಿ ಕಡಲ ಉತ್ಪನ್ನ (ಮೀನು)ಗಳ ಕೊಯ್ಲು ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತದೆ. ಆದರೆ ಉತ್ಪನ್ನಗಳನ್ನು ಪಕ್ಕದ ಕೇರಳದ ಮೂಲಕ ವಿದೇಶಗಳಿಗೆ ರಫ್ತು ಮಾಡಲಾಗುತ್ತದೆ. ಕರ್ನಾಟಕ ದಿಂದಲೇ ರಫ್ತು ಮಾಡಲು ಪಿಪಿಪಿ ಮಾದರಿಯಲ್ಲಾದರೂ ಕ್ರಮವಾಗ ಬೇಕು. ಅಲ್ಲದೆ ಕಡಲ ಉತ್ಪನ್ನಗಳ ಮೌಲ್ಯವರ್ಧನೆಗೆ ಸಂಬಂಧಿಸಿ ವಿಶೇಷ ಸಮಾವೇಶ ಮಾಡಬೇಕು ಎಂದರು.

ರೈತರ ಆತ್ಮಹತ್ಯೆ ತಡೆ ನಿಟ್ಟಿನಲ್ಲಿ ಕೃಷಿ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್‌, ಸಂಸ್ಕರಣೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಅತೀ ಆವಶ್ಯಕ. ಅನೇಕ ರೈತರಿಗೆ ತಾವು ಬೆಳೆದ ಬೆಳೆಗಳಿಗೆ ಹೇಗೆ ಮಾರುಕಟ್ಟೆ ಸೃಷ್ಟಿಮಾಡಿಕೊಳ್ಳಬೇಕು ಎಂಬುದು ತಿಳಿದಿರುವುದಿಲ್ಲ. ರಫ್ತು ಹೆಚ್ಚಿಸುವ ಮೂಲಕ ಮಾರುಕಟ್ಟೆ ವ್ಯವಸ್ಥೆ ಸಿಗು ವಂತೆ ಮಾಡಬೇಕು. 2023ರನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ವಾಗಿ ಆಚರಿಸಲಾಗುತ್ತದೆ. ಸಿರಿ ದಾನ್ಯದ ಬಗ್ಗೆ ಎಲ್ಲರಲ್ಲೂ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಉತ್ಪಾದನೆಯ ಜತೆಗೆ ಗುಣಮಟ್ಟಕ್ಕೂ ಆದ್ಯತೆ ನೀಡಬೇಕು. ಭಾರತದಿಂದ ಆಹಾರ ದಾನ್ಯಗಳ ರಫ್ತು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಗುಣಮಟ್ಟದ ಉತ್ಪಾದನೆ ಅಗತ್ಯವಿದೆ. ಕೃಷಿ ಉತ್ಪನ್ನ ರಫ್ತಿಗೆ ಅನುಕೂಲ ಆಗುವಂತೆ ಕೈಗಾರಿಕೆ ಇಲಾಖೆಯಲ್ಲಿ ಪ್ರತ್ಯೇಕ ಘಟಕ ಆರಂಭಿಸಲು ಈಗಾಗಲೇ ಮುಖ್ಯಮಂತ್ರಿ ಸಹಿತ ಸಂಬಂಧಪಟ್ಟ ಇಲಾಖೆಯ ಸಚಿವರಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ| ಎಂ.ವಿ.ವೆಂಕಟೇಶ್‌ ಮಾತನಾಡಿ, ರೈತರಿಗೆ ಉತ್ಪನ್ನದ ಮೌಲ್ಯವರ್ಧನೆಯ ಬಗ್ಗೆ ತಿಳಿಸಬೇಕು. ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸುವ ನಿಟ್ಟಿನಲ್ಲಿ ಸರಕಾರದಿಂದಲೇ ಹೊಸ ಬ್ರ್ಯಾಂಡಿಂಗ್‌ ವ್ಯವಸ್ಥೆ ಮಾಡಲಾಗುತ್ತಿದ್ದು ಶೀಘ್ರವೇ ಬಿಡುಗಡೆಯಾಗಲಿದೆ ಎಂದರು.
ರಾಜ್ಯ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ| ಎ.ಬಿ.ಪಾಟೀಲ್‌ ಮಾತನಾಡಿ, ಕೃಷಿ ಉತ್ಪನ್ನಗಳ ರಫ್ತಿ ನಲ್ಲಿ ಭಾರತ ಸಾಕಷ್ಟು ಮುಂದಿದೆ. 2021-22ರಲ್ಲಿ 50 ಬಿಲಿಯನ್‌ ಡಾಲರ್‌ ಮೌಲ್ಯದ ಉತ್ಪನ್ನ ರಫ್ತು ಮಾಡಿ ಜಾಗತಿಕ ಮಟ್ಟದಲ್ಲಿ 8ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ಲಘು ಉದ್ಯೋಗ ಭಾರತಿ- ಕರ್ನಾಟಕದ ಅಧ್ಯಕ್ಷ ಸಚಿನ್‌ ಬಿ. ಸಬಿ°ಸ್‌ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ನಾರಾಯಣ ಪ್ರಸನ್ನ, ಗೌರವ ಕಾರ್ಯದರ್ಶಿ ಭೋಜರಾಜ ಸಿ.ಎನ್‌., ವಾಣಿಜ್ಯ ಇಲಾಖೆಯ ಅಪೇಡ ಅಧ್ಯಕ್ಷ ಡಾ| ಎಂ. ಲಿಂಗ ಮುತ್ತು, ನಬಾರ್ಡ್‌ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕ ಟಿ. ರಮೇಶ್‌, ಕೆಎಪಿಪಿಇಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ಪರ್ವೇಜ್‌ ಬಂಟನಾಳ ಉಪಸ್ಥಿತರಿದ್ದರು.

ವಿವಿಧ ಉತ್ಪನ್ನಗಳ ಪ್ರದರ್ಶನ
ವಿವಿಧ ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಿ ಸಿದ್ಧಪಡಿಸಿರುವ ವಿವಿಧ ಸಂಸ್ಥೆಗಳ, ಸ್ವ-ಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವಿತ್ತು. ಶುದ್ಧ ತೆಂಗಿನ ಎಣ್ಣೆ, ಮೀನಿನ ಚಟ್ನಿ, ಹಪ್ಪಳ, ಸಿಗಡಿ ಉಪ್ಪಿನಕಾಯಿ, ಸಿರಿಧಾನ್ಯಗಳು, ತೆಂಗಿನಕಾಯಿಯ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.