![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 18, 2019, 6:08 AM IST
ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಹಾಗೂ ಕ್ಲಿನಿಕ್ ಬಂದ್ ಹಿನ್ನೆಲೆಯಲ್ಲಿ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆ ರೋಗಿಗಳಿಂದ ತುಂಬಿ ಹೋಗಿತ್ತು. ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದೆವು. ಆದರೆ ಅಲ್ಲಿ ಸೇವೆ ಇಲ್ಲ ಎಂದು ಬೋರ್ಡ್ ಹಾಕಲಾಗಿತ್ತು. ಜಿಲ್ಲಾಸ್ಪತ್ರೆಗೆ ಹೋಗುವಂತೆ ಸೂಚಿಸಿದರು ಎಂದು ತಿಳಿಸುತ್ತಾರೆ ಮಂದಾರ್ತಿಯ ನಿವಾಸಿ.
ಸರತಿ ಸಾಲು
ಜಿಲ್ಲಾಸ್ಪತ್ರೆಯಲ್ಲಿ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯಲು ಆಗಮಿಸಿದ್ದರು. ರೋಗಿಗಳ ಸಂಖ್ಯೆ ಹೆಚ್ಚಳವಾದ ಕಾರಣ ಹೊರ ರೋಗಿಗಳ ವಿಭಾಗ, ಕೌಂಟರ್ನಲ್ಲಿ ಚಿಕಿತ್ಸೆ ಪಡೆಯಲು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂತು.
ರ್ಯಾಂಪ್ ಇಲ್ಲದೆ ಅಂಗವಿಕಲರಿಗೆ ತೊಂದರೆ
ಜಿಲ್ಲಾಸ್ಪತ್ರೆಯಲ್ಲಿ ಕಚೇರಿ, ಬಿಲ್ ಮೊತ್ತದ ಕ್ಲೈಮ್ ಮಾಡಲು ಜಿಲ್ಲಾ ಸರ್ಜನ್ ಅನ್ನು ಭೇಟಿಯಾಗಲು ಮೊದಲ ಅಂತಸ್ತಿಗೆ ತೆರಳಬೇಕಾಗುತ್ತದೆ. ಆದರೆ ಅಂಗವಿಕಲರಿಗೆ ಇಲ್ಲಿಗೆ ತೆರಳಲು ಯಾವುದೇ ಮೂಲಸೌಲಭ್ಯ ಇಲ್ಲದ ಕಾರಣ ತೆವಳಿಕೊಂಡು, ಅಥವಾ ಇನ್ನೊಬ್ಬರ ಸಹಾಯ ಪಡೆದು ಹೋಗಬೇಕಾಗುತ್ತದೆ. ಸೋಮವಾರವೂ ಅಂಗವಿಕಲ ರೋಗಿಗಳು ಮೊದಲ ಅಂತಸ್ತಿಗೆ ಬರಲು ಪ್ರಯಾಸಪಡುವ ದೃಶ್ಯ ಕಂಡುಬಂತು.
ಎಂದಿನಂತೆ ಚಿಕಿತ್ಸೆ
ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಎಂದಿನಂತೆ ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ಸಹಜವಾಗಿಯೇ ರೋಗಿಗಳ ಸಂಖ್ಯೆ ಅಧಿಕವಿರುತ್ತದೆ. ಇಂದು ಕೂಡ ಎಂದಿನಂತೆ ಸೇವೆ ನೀಡುತ್ತಿದ್ದೇವೆ ಎಂದು ತಿಳಿಸುತ್ತಾರೆ ಇಲ್ಲಿನ ಸಿಬಂದಿ.
ಹೆಚ್ಚುವರಿ ಕಾರ್ಯ
ನಿರ್ವಹಿಸಲು ಸೂಚನೆ
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಲಭ್ಯ ಇರದ ಕಾರಣ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ಒದಗಿಸುವಂತೆ ಸರಕಾರ ಶನಿವಾರವೇ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಯ ಯಾವುದೇ ಸಿಬಂದಿಗೂ ರಜೆ ನೀಡಿಲ್ಲ. ಅಗತ್ಯ ಬಿದ್ದರೆ ಹೆಚ್ಚುವರಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.
-ಡಾ| ಮಧುಸೂದನ್ ನಾಯಕ್, ಜಿಲ್ಲಾ ಸರ್ಜನ್
15 ನಿಮಿಷ ಕ್ಯೂ
ಚಿಕಿತ್ಸೆ ಪಡೆಯಲೆಂದು ಬೆಳಗ್ಗೆ 10 ಗಂಟೆಗೆ ಬಂದಿದ್ದೇನೆ. ಆದರೆ ತುಂಬಾ ಸರತಿ ಸಾಲು ಇದ್ದ ಕಾರಣ 15 ನಿಮಿಷ ಕಾಯಬೇಕಾಯಿತು. ಸಿಬಂದಿ ಉತ್ತಮವಾಗಿ ಸಹಕರಿಸಿದರು.
-ಪುಷ್ಪಾ, ಚಿಕಿತ್ಸೆಗೆ ಬಂದವರು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.