![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 25, 2018, 7:20 AM IST
ಬೈಂದೂರು: ಒತ್ತಿನೆಣೆ ಗುಡ್ಡ ಕುಸಿತ ತಡೆಯಲ್ಲಿ ನಿರ್ಮಿಸಿದ ಸ್ಲೋಪ್ ಪ್ರೊಟೆಕ್ಷನ್ ವಾಲ್ ಕುಸಿಯುವ ಭೀತಿಯಲ್ಲಿರುವ ಒತ್ತಿನೆಣೆ ಪ್ರದೇಶಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ಭೂಬಾಲನ್ ಬೇಟಿ ನೀಡಿದರು.
ಐ.ಆರ್.ಬಿ ಕಂಪೆನಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಮಳೆಗಾಲದಲ್ಲಿ ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸಲು ತಿಳಿಸಿದರು ಹಾಗೂ ಸಂಪೂರ್ಣ ಮುಂಜಾರೂಕತೆ ವಹಿಸಲು ಆದೇಶಿಸಿದರು.
ಮಳೆಗಾಲದ ಒಳಗೆ ಸಂಪೂರ್ಣ ಪ್ರೊಟೆಕ್ಷನ್ ವಾಲ್ ನಿರ್ಮಾಣ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಉದಯವಾಣಿ ವರದಿಗೆ ಸ್ಪಂದಿಸಿದ ಕಂಪೆನಿ ಅಧಿಕಾರಿಗಳು ಬುಧವಾರದಿಂದ ಕಾಮಗಾರಿಯನ್ನು ಇನ್ನಷ್ಟು ವೇಗದಿಂದ ನಡೆಸುತ್ತಿದ್ದಾರೆ. ಹಾಗೂ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಲಾಗಿದೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಐ.ಆರ್.ಬಿ. ಪ್ರಾಜೆಕ್ಟ್ ಮ್ಯಾನೇಜರ್ ಯೋಗೇಂದ್ರಪ್ಪ ಯಾವುದೇ ರೀತಿ ಯಲ್ಲೂ ಗುಡ್ಡ ಕುಸಿಯದಂತೆ ಸೂಕ್ತ ಎಚ್ಚರಿಕೆ ವಹಿಸಿ ಕಾಮಗಾರಿ ನಡೆಸಲಾಗಿದೆ. ಅಕಾಲಿಕ ಮಳೆಯಿಂದ ರಸ್ತೆ ಪಕ್ಕದಲ್ಲಿ ಶೇಖರಿಸಿದ ಜೇಡಿಮಣ್ಣು ಚರಂಡಿ ಮೂಲಕ ಕೃಷಿ ಭೂಮಿಗೆ ನುಗ್ಗಿದೆ. ಒತ್ತಿನೆಣೆಯಲ್ಲಿ ಮಣ್ಣು ತೆರವು ಕಾರ್ಯ ಭರದಿಂದ ನಡೆಯುತ್ತಿದೆ. ಮಳೆಗಾಲದ ಒಳಗೆ ಎರಡು ಭಾಗಗಳು ಸ್ಲೋಪ್ ಪ್ರೊಟೆಕ್ಷನ್ ವಾಲ್ ಕಾಮಗಾರಿ ಪೂರ್ಣಗೊಳ್ಳಲಿದೆ ಮತ್ತು ಎರಡು ರಸ್ತೆಗಳು ಸಹ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.