ಬುರ್ಖಾ ಧರಿಸಿ ಪರಾರಿಯಾಗಲು ಯತ್ನ:ರಮ್ಯಾ ಶೆಟ್ಟಿ ಪೊಲೀಸ್ ವಶಕ್ಕೆ!
Team Udayavani, Jul 24, 2018, 10:44 AM IST
ಬೆಳ್ತಂಗಡಿ: ಶೀರೂರು ಮಠದ ಲಕ್ಷ್ಮೀ ವರ ತೀರ್ಥ ಶ್ರೀಪಾದರ ಅನುಮಾನಾಸ್ಪದ ಸಾವಿನಲ್ಲಿ ಸಂಶಯಕ್ಕೆ ಗುರಿಯಾಗಿರುವ ರಮ್ಯಾ ಶೆಟ್ಟಿ ಪರಾರಿಯಾಗಲು ಯತ್ನಿಸಿ ವಿಫಲವಾಗಿದ್ದು,ಪೊಲೀಸರು ಸೋಮವಾರ ಸಂಜೆ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಇತರ ಮೂವರು ಮಹಿಳೆಯರೊಂದಿಗೆ ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ರಮ್ಯಾ ಶೆಟ್ಟಿ ಕಾರು ವೇಣೂರಿನ ಅಳದಂಗಡಿ ಬಳಿ ಪಂಕ್ಚರ್ ಆಗಿದೆ. ಅನುಮಾನಾಸ್ಪವಾಗಿ ಗ್ಯಾರೇಜ್ ಬಳಿ ಕಾರು ಕಂಡು ಬಂದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಕೂಡಲೇ ತೆರಳಿದ ವೇಣೂರು ಪೊಲೀಸರು ಪರಿಶೀಲನೆ ನಡೆಸಿದಾಗ ರಮ್ಯಾ ಶೆಟ್ಟಿ, ಜೊತೆಗಿದ್ದ ಮೂವರು ಮಹಿಳೆಯರನ್ನು ಮತ್ತು ಕಾರು ಚಾಲಕನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಉಡುಪಿ ಪೊಲೀಸರ ವಶಕ್ಕೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಇಲಾಖೆಯಿಂದ ಈ ಕುರಿತಾಗಿ ಅಧಿಕೃತ ಪ್ರಕಟಣೆ ಇನ್ನಷ್ಟೇ ಬರಬೇಕಾಗಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.