ಶಾಂತಿ, ಸೌಹಾರ್ದ, ವಿಶ್ವಕಲ್ಯಾಣ, ರಾಷ್ಟ್ರದ ಪ್ರಗತಿಗೆ ಧಾರ್ಮಿಕ ಮುಖಂಡರ ಸಭೆ ನಿರ್ಣಯ

ತೀರ್ಪಿನ ನಿರೀಕ್ಷೆಯಲ್ಲಿ ಕರೆದ ದಿಲ್ಲಿ ಸಭೆ ಶಾಂತಿಸಭೆಯಾಗಿ ಸಂಪನ್ನ ; ಅಜಿತ್‌ ದೋವಲ್‌ ನೇತೃತ್ವ; ಪೇಜಾವರ ಶ್ರೀ ಭಾಗಿ

Team Udayavani, Nov 10, 2019, 9:49 PM IST

Pejawara-Swamiji–730

ಉಡುಪಿ: ಅಯೋಧ್ಯೆ ಕುರಿತಾದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಬರುವ ಮೊದಲೇ ನಿಗದಿಯಾಗಿದ್ದ ಸಭೆ ಈಗ ತೀರ್ಪು ಬಂದ ಅನಂತರ ನಡೆದಂತಾಯಿತು.
ತೀರ್ಪು ಬಂದ ಬಳಿಕ ಏನೇನು ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಪ್ರಮುಖ ಸಂತರು, ವಿಶ್ವ ಹಿಂದೂ ಪರಿಷದ್‌ ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಈಗ ಅದೇ ಸಭೆಯನ್ನು ಶಾಂತಿ ಸಭೆಯಾಗಿ ನಡೆಸಲಾಯಿತು.

ಪ್ರಧಾನಮಂತ್ರಿ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ದೇಶದಲ್ಲಿ ಶಾಂತಿಯನ್ನು ಕಾಪಾಡಲು ನಿಮ್ಮ ನಿಮ್ಮ ಸಮುದಾಯಗಳಿಗೆ ತಿಳಿವಳಿಕೆ ನೀಡಬೇಕು. ಎಲ್ಲಿಯೂ ಗಲಭೆ, ಘರ್ಷಣೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಭೆ ಕರೆ ನೀಡಿತು. ಮಂದಿರ ನಿರ್ಮಾಣ ಕುರಿತು ಸಮಗ್ರ ಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು.


‘ತೀರ್ಪು ವಿಶ್ವಕಲ್ಯಾಣಕ್ಕೆ ಕಾರಣವಾಗಲಿ’

ವಿವಿಧ ಮತ ಧರ್ಮಗಳಲ್ಲಿ ಭಿನ್ನತೆ ಇದ್ದರೂ ಸಾಮ್ಯಗಳೂ ಇವೆ. ನಾವು ಪರಧರ್ಮ ಸಹಿಷ್ಣುಗಳು. ಏಳು ಶತಮಾನಗಳ ಹಿಂದೆ ಉಡುಪಿಯಿಂದ ಬಂದ ಮಧ್ವಾಚಾರ್ಯರು ಉತ್ತರ ಭಾರತದ ಮುಸ್ಲಿಂ ದೊರೆಯೊಂದಿಗೆ ಸೌಹಾರ್ದ ಮಾತುಕತೆ ಮಾಡಿದ ಉಲ್ಲೇಖಗಳಿವೆ. ಅಯೋಧ್ಯೆ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎಲ್ಲರೂ ಗೌರವಿಸಿದ್ದಾರೆ. ಇದು ವಿಶ್ವ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಗೆ ಕಾರಣವಾಗಬೇಕು. ಮುಂದಿನ ಎಲ್ಲ ಕೆಲಸಗಳಿಗೆ ಸಮನ್ವಯ ಸಮಿತಿ ರಚನೆಯಾಗಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಭೆಯಲ್ಲಿ ತಿಳಿಸಿದರು.

‘ಶಾಂತಿ, ಸಾಮರಸ್ಯ ಕಾಪಾಡಲು ಸಭೆ ನಿರ್ಣಯಿಸಿತು’ ಎಂದು ಸಭೆ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ದಿಲ್ಲಿಯಲ್ಲಿ ಪೇಜಾವರ ಶ್ರೀಗಳು ತಿಳಿಸಿದರು. ಬಳಿಕ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸ್ವಾಮೀಜಿಯವರು, ’40-50 ಹಿಂದೂ ಮುಸ್ಲಿಮ್‌ ಧರ್ಮಗುರುಗಳು ಏಕಕಂಠದಿಂದ ಶಾಂತಿ, ಸೌಹಾರ್ದ ಕಾಪಾಡುವ ಭರವಸೆ ನೀಡಿದರು. ತೀರ್ಪಿನ ಸರ್ವಾನುಮತದ ಸ್ವಾಗತ ಐತಿಹಾಸಿಕವಾದುದು. ಧಾರ್ಮಿಕ ಇತಿಹಾಸದಲ್ಲಿ ಇದೊಂದು ದೊಡ್ಡ ಘಟ್ಟ. ಎಲ್ಲರೂ ಜತೆ ಸೇರಿ ರಾಷ್ಟ್ರದ ಪ್ರಗತಿಗೆ ಕಾರಣವಾಗಬೇಕು ಎಂದು ಸಭೆ ನಿರ್ಧರಿಸಿತು’ ಎಂದರು.

ಈ ಮೊದಲು ಸಭೆ ನಿರ್ಣಯವಾದಾಗ ಸಭೆ ಮುಗಿದ ಬಳಿಕ ಅಪರಾಹ್ನ ಅಸ್ಸಾಂನ ಗುವಾಹಟಿಗೆ ತೆರಳಿ ಬ್ರಹ್ಮಪುತ್ರಾ ನದಿ ಸ್ನಾನ ಮಾಡಲು ಪೇಜಾವರ ಶ್ರೀಗಳು ನಿರ್ಧರಿಸಿದ್ದರು. ಸಭೆ ಮುಗಿದ ಬಳಿಕ ಗುವಾಹಟಿಗೆ ತೆರಳಿ ಬ್ರಹ್ಮಪುತ್ರಾ ನದಿ ಸ್ನಾನ ಮಾಡಲು ನಿರ್ಧರಿಸಿದ್ದ ಶ್ರೀಗಳು ಸಭೆ ಮುಗಿಯುವಾಗ ತಡವಾದ ಕಾರಣ ನೇರವಾಗಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಬಂದಿಳಿದರು.

ರವಿವಾರ ಬೆಳಗ್ಗೆ 6 ಗಂಟೆಯೊಳಗೆ ಉಡುಪಿಯಲ್ಲಿ ಪೂಜೆ ಮುಗಿಸಿ ಒಂದು ಲೋಟ ಹಾಲು ಕುಡಿದು ತೆರಳಿದ್ದ ಸ್ವಾಮೀಜಿ ದಿಲ್ಲಿಯ ಮಠಕ್ಕೆ ತೆರಳಿ ಅಲ್ಲಿ ಆಹಾರ ಸ್ವೀಕರಿಸಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.