ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಆಕಾರ ಬಂದ್‌, ಪಹಣಿ, ಸರ್ವೇ ನಂಬರ್‌ ವ್ಯತ್ಯಾಸ

Team Udayavani, Oct 29, 2020, 4:22 AM IST

ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಸಾಂದರ್ಭಿಕ ಚಿತ್ರ

ಉಡುಪಿ: ಭೂಮಿ ಮಾರಾಟ ಹಾಗೂ ಸಾಲ ಪಡೆಯಲು ಸಂಬಂಧಿಸಿದ ಪ್ರಮುಖ ದಾಖಲೆಯಾದ 11 -ಇ ನಕ್ಷೆ ಪಡೆಯಲು ಭೂ ಮಾಲಕರು ಪರದಾಡುತ್ತಿದ್ದಾರೆ.

ಸಾರ್ವಜನಿಕರ ಅಲೆದಾಟ
ಸಾರ್ವಜನಿಕರು 11 -ಇ ನಕ್ಷೆ ಕೋರಿ ಸಹಾಯಕ ಭೂ ದಾಖಲೆ ಉಪ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದಾಗ, ದಾಖಲೆಯಲ್ಲಿ ಆಕಾರ ಬಂದ್‌ ಮತ್ತು ಪಹಣಿ ದಾಖಲೆ ವ್ಯತ್ಯಾಸವಿದ್ದಲ್ಲಿ ಅಥವಾ ಪಹಣಿ ಲೋಪ-ದೋಷ ಇರುವ ಪ್ರಕರಣಗಳಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರ್‌ಗೆ
ಕಡತವನ್ನು ವರ್ಗಾಯಿಸಲಾಗುತ್ತದೆ. ಇಂತಹ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ತ್ವರಿತ ಅರ್ಜಿ ವಿಲೇವಾರಿ ಮಾಡದ ಪರಿಣಾಮ ಜನರು 4-5 ವರ್ಷ ಗಳಿಂದ ತಾಲೂಕು ಕಚೇರಿಗಳಿಗೆ ಅಲೆದಾಡುವಂತಾಗಿದೆ.

ಸಮಸ್ಯೆ ಏನು?
ಸರ್ವೇ ನಂಬರ್‌, ಆಕಾರ ಬಂದ್‌, ಪಹಣಿ ವಿಸ್ತೀರ್ಣ ಈ ಮೂರು ದಾಖಲೆಗಳಲ್ಲಿ ಒಂದಕ್ಕೊಂದು ವ್ಯತ್ಯಾಸ ಕಂಡುಬಂದಂತೆ ಅರ್ಜಿಗಳ ವಿಲೇ ವಾರಿಗೆ ತೊಡಕುಂಟಾಗುತ್ತದೆ. ಸಾರ್ವ ಜನಿಕರು “ಇ’ ನಕ್ಷೆಗೂ ಮೊದಲೇ ದಸ್ತಾವೇಜು ಮೂಲಕ ಜಮೀನುಗಳು ವಹಿವಾಟುಗೊಂಡಿರುವಂತಹ ಪ್ರಕರಣದಲ್ಲಿ ಅರ್ಜಿ ವಿಲೇವಾರಿಗೆ ಸಮಸ್ಯೆಯಾಗಿದೆ. “ಇ’ ನಕ್ಷೆಗೆ ಸಲ್ಲಿಕೆಯಾದ ಅರ್ಜಿಗಳಲ್ಲಿ ಆಕಾರ ಬಂದ್‌ ವಿಸ್ತೀರ್ಣ, ಪಹಣಿ ವಿಸ್ತೀರ್ಣ ಹೆಚ್ಚಾಗಿರುತ್ತದೆ. ಈ ಸಂದರ್ಭ ಪಹಣಿಯ ವಿಸ್ತೀರ್ಣ ಕಡಿತಗೊಳಿಸಲು ಇಲಾಖೆಯಿಂದ ನೋಟಿಸ್‌ ನೀಡಲಾಗುತ್ತದೆ. ಇದಕ್ಕೆ ಒಪ್ಪದ ಪಹಣಿದಾರರು ಆಕ್ಷೇಪಣೆ ಸಲ್ಲಿಸುತ್ತಿರುವುದ ರಿಂದ ಇತ್ಯರ್ಥ ಮಾಡುವುದು ಇಲಾ ಖೆಗೂ ತಲೆನೋವಾಗಿದೆ. ಕಂದಾಯ ಸಂಬಂಧಿತ ಸೇವೆಯಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆದರೆ ಕಂದಾಯ ವಿಭಾಗದಲ್ಲಿ ಭೂಮಿ, ಕೃಷಿ ಜಮೀನು ಮಾರಾಟಕ್ಕೆ ಸಂಬಂಧಿಸಿ ಪ್ರಮುಖ ದಾಖಲೆಯಾದ 11-ಇ ನಕ್ಷೆ ಪಡೆ ಯಲು ಸಾರ್ವಜನಿಕರಿಗೆ ಸಾಕಷ್ಟು ತೊಡಕುಂಟಾಗಿದೆ.

324 ಅರ್ಜಿ ಮಾತ್ರ ವಿಲೇವಾರಿ
ಜಿಲ್ಲೆಯಲ್ಲಿ 11 – ಇ ನಕ್ಷೆಗೆ ಸಂಬಂಧಿಸಿ ಸೆಪ್ಟಂಬರ್‌ನಲ್ಲಿ ಹೊಸದಾಗಿ 356 ಅರ್ಜಿಗಳು ಸ್ವೀಕೃತವಾಗಿವೆ. ಅದರಲ್ಲಿ ಕಳೆದ ತಿಂಗಳವರೆಗೆ 324 ಅರ್ಜಿಗಳು ವಿಲೇವಾರಿಯಾಗಿ 5,953 ಅರ್ಜಿಗಳು ಬಾಕಿಯಿವೆ. ಆಕಾರ ಬಂದ್‌,  ಪಹಣಿ, ಸರ್ವೇ ನಂಬರ್‌ ವ್ಯತ್ಯಾಸಗಳಿಂದಾಗಿ ಅರ್ಜಿಗಳು ಬಾಕಿ ಇವೆ. ಕುಂದಾಪುರ 1,250, ಉಡುಪಿ 824, ಕಾರ್ಕಳ 710, ಬೈಂದೂರು 1,381, ಬ್ರಹ್ಮಾವರ 717, ಕಾಪು 699, ಹೆಬ್ರಿಯಲ್ಲಿ 372 ಅರ್ಜಿಗಳು ಬಾಕಿ ಇವೆ.

ಆದ್ಯತೆ ಮೇರೆಗೆ ವಿಲೇವಾರಿ
ಸರ್ವೇ ನಂಬರ್‌, ಆಕಾರ ಬಂದ್‌, ಪಹಣಿ ವಿಸ್ತೀರ್ಣ ದಾಖಲೆಗಳಲ್ಲಿ ಒಂದಕ್ಕೊಂದು ವ್ಯತ್ಯಾಸ ಕಂಡುಬಂದಂತಹ ಅರ್ಜಿಗಳ ವಿಲೇವಾರಿಗೆ ಮಾತ್ರ ತೊಡಕುಂಟಾಗಿದೆ. ಆದ್ಯತೆ ಮೇರೆಗೆ ಪ್ರಕರಣ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ
ಸೂಚನೆ ನೀಡಲಾಗಿದೆ.
-ಜಿ.ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ.

ಟಾಪ್ ನ್ಯೂಸ್

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.