ರಸ್ತೆ ಅಪಘಾತ ಇಳಿಮುಖ : ಲಾಕ್‌ಡೌನ್‌, ಪೊಲೀಸ್‌ ಕ್ರಮ, ರಸ್ತೆ ಸುಸ್ಥಿತಿ ಕಾರಣ


Team Udayavani, Jan 18, 2021, 7:00 AM IST

ರಸ್ತೆ ಅಪಘಾತ ಇಳಿಮುಖ : ಲಾಕ್‌ಡೌನ್‌, ಪೊಲೀಸ್‌ ಕ್ರಮ, ರಸ್ತೆ ಸುಸ್ಥಿತಿ ಕಾರಣ

ಸಾಂದರ್ಭಿಕ ಚಿತ್ರ

ಕುಂದಾಪುರ/ ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 2019ಕ್ಕೆ ಹೋಲಿಸಿದರೆ 2020ರಲ್ಲಿ ರಸ್ತೆ ಅಪಘಾತಗಳು ಕಡಿಮೆಯಾಗಿದ್ದು, ಜನರಿಗೆ ನೆಮ್ಮದಿ ತಂದಿದೆ. ಕೊರೊನಾ ಲಾಕ್‌ಡೌನ್‌, ಪೊಲೀಸ್‌ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳು ಮತ್ತು ರಸ್ತೆಗಳ ಸುಸ್ಥಿತಿ ಈ ಸಕಾರಾತ್ಮಕ ಬೆಳವಣಿಗೆಗೆ ಪ್ರಮುಖ ಕಾರಣಗಳು.

2019ರಲ್ಲಿ ಉಭಯ ಜಿಲ್ಲೆ ಗಳಲ್ಲಿ ಒಟ್ಟು 3,162 ರಸ್ತೆ ಅವಘಡಗಳು ನಡೆ ದಿದ್ದರೆ 2020ರಲ್ಲಿ ಇದು 2,335ಕ್ಕೆ ಇಳಿದಿದೆ. ಮೃತಪಟ್ಟವರ ಸಂಖ್ಯೆಯೂ ಕಡಿಮೆಯಿದೆ. ಉಭಯ ಜಿಲ್ಲೆಗಳ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳು ಕಡಿಮೆಯಾಗಿರುವುದು ಅಪಘಾತ ಕಡಿಮೆಯಾಗಿರುವುದನ್ನು ಸಾಬೀತುಪಡಿಸುತ್ತಿವೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ ಹೆದ್ದಾರಿಗಳಲ್ಲೇ ಗರಿಷ್ಠ ರಸ್ತೆ ಅವಘಡಗಳು ಸಂಭವಿಸಿವೆ. ಹೆದ್ದಾರಿಗಳಲ್ಲಿ 2020ರಲ್ಲಿ 429 ಅವಘಡಗಳು ನಡೆದು 108 ಮಂದಿ ಮೃತಪಟ್ಟು, 480 ಮಂದಿ ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿಗಳಲ್ಲಿ 153 ಅಪಘಾತಗಳಾ ಗಿದ್ದು, 27 ಮಂದಿ ಮೃತಪಟ್ಟು, 195 ಮಂದಿ ಗಾಯಗೊಂಡಿದ್ದಾರೆ. ಇತರ ರಸ್ತೆಗಳಲ್ಲಿ 408 ಅಪಘಾತಗಳಾಗಿದ್ದು, 58 ಮಂದಿ ಸಾವನ್ನಪ್ಪಿದ್ದಾರೆ. 420 ಮಂದಿ ಗಾಯಗೊಂಡಿದ್ದಾರೆ.

ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ಹೆಚ್ಚು  :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಹೆಚ್ಚಿನ ರಸ್ತೆ ಅಪಘಾತಗಳು ಘಟಿಸಿವೆ. 2019ರಲ್ಲಿ 1,028 ಅಪಘಾತ ಸಂಭವಿಸಿ, 148 ಮಂದಿ ಮೃತಪಟ್ಟಿದ್ದರು. 2020ರಲ್ಲಿ 692 ಅಪಘಾತಗಳು ನಡೆದು, 115 ಮಂದಿ ಮೃತಪಟ್ಟಿದ್ದರು. ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 2019ರಲ್ಲಿ 920 ಅಪಘಾತ ಸಂಭವಿಸಿ, 154 ಮಂದಿ ಮೃತಪಟ್ಟಿದ್ದರೆ 2020ರಲ್ಲಿ ಸಂಭವಿಸಿದ 653 ರಸ್ತೆ ಅಪಘಾತಗಳಲ್ಲಿ 109 ಮಂದಿ ಮೃತಪಟ್ಟಿದ್ದರು.

ಅಪಘಾತಕ್ಕೆ ಕಾರಣಗಳು :

ಮಿತಿ ಮೀರಿದ ವೇಗ, ಪಾನಮತ್ತರಾಗಿ ವಾಹನ ಚಾಲನೆ, ರಸ್ತೆ ನಿಯಮ ಉಲ್ಲಂಘನೆ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣಗಳು. ಕೆಲವೆಡೆಗಳಲ್ಲಿ ಅವೈಜ್ಞಾನಿಕ – ಅಸಮರ್ಪಕ ಕಾಮಗಾರಿ, ರಸ್ತೆ ಹೊಂಡ -ಗುಂಡಿಗಳು, ರಾತ್ರಿ ವೇಳೆ ಬೀದಿ ದೀಪದ ಸಮಸ್ಯೆಯೂ ಕಾರಣವಾಗುತ್ತಿವೆ.

ಲಾಕ್‌ಡೌನ್‌ ಸಮಯದಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿತ್ತು. ಇದಲ್ಲದೆ ಕಠಿನ ಸಂಚಾರ ನಿಯಮಗಳನ್ನು ಕೂಡ ಜಾರಿಗೆ ತರಲಾಗಿದೆ.– ಕುಮಾರಚಂದ್ರ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ

ಲಾಕ್‌ಡೌನ್‌ನಿಂದ ವಾಹನ ದಟ್ಟಣೆ ಶೇ. 30ರಷ್ಟು ಕಡಿಮೆಯಾಗಿದೆ. ಒಟ್ಟು ಅಪಘಾತ ಪ್ರಕರಣ ಗಳು ಶೇ. 28ರಷ್ಟು ಕಡಿಮೆಯಾಗಿವೆ.  – ಬಿ.ಎಂ. ಲಕ್ಷ್ಮೀಪ್ರಸಾದ್‌, ಎಸ್‌ಪಿ, ದ.ಕ.

 

- ಉದಯವಾಣಿ ಟೀಂ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.