Road Mishap ಕಾರ್ಕಳ: ಗೂಡ್ಸ್ ಟೆಂಪೋ ಢಿಕ್ಕಿ; ಗಾಯಾಳು ಮಹಿಳೆ ಸಾವು
Team Udayavani, Dec 6, 2023, 12:43 AM IST
ಕಾರ್ಕಳ: ರಸ್ತೆಯ ಡಿವೈಡರ್ ದಾಟಲು ಕಾಯುತ್ತಿದ್ದ ವೇಳೆ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಡಿ. 4ರಂದು ಕಾರ್ಕಳದ ಕುಂಟಲ್ಪಾಡಿಯಲ್ಲಿ ನಡೆದಿದೆ.
ಕಸಬಾದ ಹಿರಿಯಂಗಡಿ ನಿವಾಸಿ ಸ್ವಸ್ತಿ (55) ಅವರು ಬೈಪಾಸ್ ರಸ್ತೆಯಲ್ಲಿ ಶಿವತಿಕೆರೆ ಕಡೆಯಿಂದ ಕುಂಟಲ್ಪಾಡಿ ಕೃಷ್ಣ ಕ್ಷೇತ್ರದ ಕಡೆಗೆ ನಡೆದುಕೊಂಡು ತೆರಳುತ್ತಿದ್ದರು. ಹಿರಿಯಂಗಡಿ ವೆಂಕಟೇಶ ಇಂಡಸ್ಟ್ರೀಸ್ ಎದುರುಗಡೆ ರಸ್ತೆಯ ಮಧ್ಯಭಾಗದಲ್ಲಿರುವ ಡಿವೈಡರ್ ಬಳಿ ರಸ್ತೆ ದಾಟಲು ನಿಂತುಕೊಂಡಿದ್ದಾಗ ಪುಲ್ಕೇರಿ ಕಡೆಯಿಂದ ಬಂಗ್ಲೆಗುಡ್ಡೆ ಕಡೆಗೆ ಸುಧಾಕರ ಅವರು ಚಲಾಯಿಸುತಿದ್ದ 407 ಗೂಡ್ಸ್ ಟೆಂಪೋ ಸ್ವಸ್ತಿ ಅವರಿಗೆ ಢಿಕ್ಕಿ ಹೊಡೆದಿತ್ತು. ಮಹಿಳೆಯ ತಲೆಗೆ ತೀವ್ರತರ ಪೆಟ್ಟಾಗಿತ್ತು. ಅವರನ್ನು ಸ್ಥಳೀಯರು ಟೆಂಪೋ ಚಾಲಕನ ಸಹಾಯದಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಹೆಚ್ಚಿನ ಚಿಕಿತ್ಸೆ ಅವಶ್ಯ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಿಗೆ ಟೆಂಪೋ ಢಿಕ್ಕಿ: ಸವಾರ ಸಾವು
ಕಾರ್ಕಳ: ಈದು ಗ್ರಾಮದ ಮಂಗಳಾ ಫಾರ್ಮ್ ಬಳಿ ಬೈಕಿಗೆ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದು ಬೈಕ್ ಸವಾರ ಮುತ್ತಯ್ಯ ನಲ್ಕೆ (55) ಮೃತಪಟ್ಟ ಘಟನೆ ಡಿ. 4ರ ರಾತ್ರಿ ನಡೆದಿದೆ.
ಈದುವಿನ ಮಂಗಳಾ ನರ್ಸರಿ ಬಳಿ ಮುತ್ತಯ್ಯ ಅವರು ತನ್ನ ಬೈಕಿನಲ್ಲಿ ರಾತ್ರಿ 8.25ರ ವೇಳೆಗೆ ಮನೆಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಸತೀಶ್ ಚಲಾಯಿಸುತ್ತಿದ್ದ ಟೆಂಪೋ ಢಿಕ್ಕಿ ಹೊಡೆದಿದೆ. ಚಾಲಕ ಸತೀಶ್ ಚಲಾಯಿಸುತ್ತಿದ್ದ ವಾಹನವನ್ನು ವೇಗವಾಗಿ ಚಲಾಯಿಸಿ ರಸ್ತೆಯ ತೀರಾ ಬಲಭಾಗದಲ್ಲಿ ಚಲಾಯಿಸಿ ಮುತ್ತಯ್ಯನವರ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಗಾಯ
ಕಾರ್ಕಳ: ಕಾರ್ಕಳ – ಉಡುಪಿ ರಸ್ತೆಯ ಬೈಲೂರು ಗ್ರಾಮದ ಬಸ್ರಿ ಶಾಲೆಯ ಬಳಿ ದ್ವಿಚಕ್ರ ಸವಾರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಡಿ. 3ರಂದು ನಡೆದಿದೆ.
ವಿಶ್ವನಾಥ ಎಂ. (44) ಅವರು ಮೋಟಾರ್ ಸೈಕಲ್ನಲ್ಲಿ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ತೆರಳು ತ್ತಿದ್ದರು. ಅತೀ ವೇಗ ಹಾಗೂ ಅಜಾಗ ರೂಕತೆಯಿಂದ ಸವಾರಿ ಮಾಡಿದ ಪರಿಣಾಮ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅವರಿದ್ದ ವಾಹನ ಢಿಕ್ಕಿ ಹೊಡೆದಿದೆ.
ಪರಿಣಾಮ ಅವರ ತಲೆಗೆ ಹಾಗೂ ಹೊಟ್ಟೆಗೆ ತೀವ್ರ ಸ್ವರೂಪದ ಗಾಯಗಳಾಗಿದೆ. ಸ್ಥಳೀಯ ರಿಕ್ಷಾ ಚಾಲಕ ರಾಜೇಶ ಅವರು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.