![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 21, 2022, 11:45 AM IST
ಶಿರ್ವ: ಬಂಟಕಲ್ಲು ನಾಗರಿಕ ಸೇವಾ ಸಮಿತಿ ಮತ್ತು ಬಂಟಕಲ್ಲು ತಾಂತ್ರಿಕ ಕಾಲೇಜಿನ ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ ಶಿರ್ವ ಪೊಲೀಸ್ ಠಾಣೆ, ಬಂಟಕಲ್ಲು ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಹಾಗೂ ಬಂಟಕಲ್ಲು ಕಾರು ಚಾಲಕರ ಮತ್ತು ಮಾಲಕರ ಸಂಘದ ಸಹಕಾರದೊಂದಿಗೆ ಅಪರಾಧ ತಡೆ ಮಾಸಾಚರಣೆ, ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮವು ಡಿ. 20 ರಂದು ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಕಳ ವಲಯ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿ ಅಪರಾಧ ತಡೆ, ರಸ್ತೆ ಸುರಕ್ಷತೆ, ಪೋಕೊÕà ಕಾಯಿದೆ,ಮಾದಕ ವ್ಯಸನ, ಅಮಲು ಪದಾರ್ಥ ಸೇವನೆ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ವಾಹನ ಚಾಲನೆಯ ವೇಳೆ ಕಡ್ಡಾಯವಾಗಿ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವಂತೆ ಸೂಚಿಸಿ,ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೆ ತಮ್ಮ ವಿದ್ಯಾರ್ಥಿ ಜೀವನದ ಉದ್ದೇಶವನ್ನು ಸಾರ್ಥಕಗೊಳಿಸಲು ಕರೆ ನೀಡಿದರು. ಕಾಲೇಜಿನ ಡೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಪು ವೃತ್ತ ನಿರೀಕ್ಷಕ ಪೂವಯ್ಯ,ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ.,ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ನಾಗರಾಜ ರಾವ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮ ಸಂಯೋಜಕ ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಆರ್. ಪಾಟ್ಕರ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ವಿದೀಶ್ ನಿರೂಪಿಸಿ, ಚೈತ್ರಾ ವಂದಿಸಿದರು.
ಬಳಿಕ ಕಾಲೇಜಿನಿಂದ ಬಂಟಕಲ್ಲು ಪೇಟೆಯವರೆಗೆ ನಡೆದ ರಸ್ತೆ ಸುರಕ್ಷತಾ ಜಾಗೃತಿ ಜಾಥಾಕ್ಕೆ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಸಿರು ನಿಶಾನೆ ತೋರಿಸಿದರು.
ಜಾಥಾದಲ್ಲಿ ಸುಮಾರು 200 ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ, ಶಿರ್ವ ಠಾಣೆಯ ಸಿಬಂದಿ, ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೋಶಾಧಿಕಾರಿ ಜಗದೀಶ್ ಆಚಾರ್ಯ, ಜತೆಕಾರ್ಯದರ್ಶಿ ರೋಹಿಣಿ, ಬಂಟಕಲ್ಲು ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಮಂಜುನಾಥ್, ಕಾರು ಚಾಲಕರ ಮತ್ತು ಮಾಲಕರ ಸಂಘದ ಉಮೇಶ್ ರಾವ್, ನಿವೃತ್ತ ಯೋಧ ರಾಜೇಂದ್ರ ಪಾಟ್ಕರ್, ವೀರೇಂದ್ರ ಪಾಟ್ಕರ್, ಡೆನ್ನಿಸ್ ಡಿಸೋಜಾ, ರಾಘವೇಂದ್ರ, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.