ಬಂಟಕಲ್ಲು: ರಸ್ತೆ ಸುರಕ್ಷತೆ ಜಾಗೃತಿ ಜಾಥಾ; ಮಾಹಿತಿ ಕರಪತ್ರ ಬಿಡುಗಡೆ


Team Udayavani, Dec 21, 2022, 11:45 AM IST

Untitled-1

ಶಿರ್ವ: ಬಂಟಕಲ್ಲು ನಾಗರಿಕ‌ ಸೇವಾ ಸಮಿತಿ ಮತ್ತು ಬಂಟಕಲ್ಲು ತಾಂತ್ರಿಕ ಕಾಲೇಜಿನ ಎನ್ನೆಸ್ಸೆಸ್‌ ಘಟಕದ ಆಶ್ರಯದಲ್ಲಿ ಶಿರ್ವ ಪೊಲೀಸ್‌ ಠಾಣೆ, ಬಂಟಕಲ್ಲು ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಹಾಗೂ ಬಂಟಕಲ್ಲು ಕಾರು ಚಾಲಕರ ಮತ್ತು ಮಾಲಕರ ಸಂಘದ ಸಹಕಾರದೊಂದಿಗೆ ಅಪರಾಧ ತಡೆ ಮಾಸಾಚರಣೆ, ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮವು ಡಿ. 20 ರಂದು ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಕಳ ವಲಯ ಪೊಲೀಸ್‌ ಉಪಾಧೀಕ್ಷಕ ವಿಜಯ ಪ್ರಸಾದ್‌ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿ ಅಪರಾಧ ತಡೆ, ರಸ್ತೆ ಸುರಕ್ಷತೆ, ಪೋಕೊÕà ಕಾಯಿದೆ,ಮಾದಕ ವ್ಯಸನ, ಅಮಲು ಪದಾರ್ಥ ಸೇವನೆ, ಅತಿಯಾದ ಮೊಬೈಲ್‌ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ವಾಹನ ಚಾಲನೆಯ ವೇಳೆ ಕಡ್ಡಾಯವಾಗಿ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವಂತೆ ಸೂಚಿಸಿ,ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೆ ತಮ್ಮ ವಿದ್ಯಾರ್ಥಿ ಜೀವನದ ಉದ್ದೇಶವನ್ನು ಸಾರ್ಥಕಗೊಳಿಸಲು ಕರೆ ನೀಡಿದರು. ಕಾಲೇಜಿನ ಡೀನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಪು ವೃತ್ತ ನಿರೀಕ್ಷಕ ಪೂವಯ್ಯ,ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ.,ಕಾಲೇಜಿನ ಎನ್ನೆಸ್ಸೆಸ್‌ ಯೋಜನಾಧಿಕಾರಿ ನಾಗರಾಜ ರಾವ್‌ ವೇದಿಕೆಯಲ್ಲಿದ್ದರು. ಕಾರ್ಯಕ್ರಮ ಸಂಯೋಜಕ ಬಂಟಕಲ್ಲು ನಾಗರಿಕ‌ ಸೇವಾ ಸಮಿತಿಯ ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ವಿದೀಶ್‌ ನಿರೂಪಿಸಿ, ಚೈತ್ರಾ ವಂದಿಸಿದರು.

ಬಳಿಕ ಕಾಲೇಜಿನಿಂದ ಬಂಟಕಲ್ಲು ಪೇಟೆಯವರೆಗೆ ನಡೆದ ರಸ್ತೆ ಸುರಕ್ಷತಾ ಜಾಗೃತಿ ಜಾಥಾಕ್ಕೆ ಪೊಲೀಸ್‌ ಉಪಾಧೀಕ್ಷಕ ವಿಜಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿದರು.

ಜಾಥಾದಲ್ಲಿ ಸುಮಾರು 200 ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ, ಶಿರ್ವ ಠಾಣೆಯ ಸಿಬಂದಿ, ಬಂಟಕಲ್ಲು ನಾಗರಿಕ‌ ಸೇವಾ ಸಮಿತಿಯ ಕಾರ್ಯದರ್ಶಿ ದಿನೇಶ್‌ ದೇವಾಡಿಗ, ಕೋಶಾಧಿಕಾರಿ ಜಗದೀಶ್‌ ಆಚಾರ್ಯ, ಜತೆಕಾರ್ಯದರ್ಶಿ ರೋಹಿಣಿ, ಬಂಟಕಲ್ಲು ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಮಂಜುನಾಥ್‌, ಕಾರು ಚಾಲಕರ ಮತ್ತು ಮಾಲಕರ ಸಂಘದ ಉಮೇಶ್‌ ರಾವ್‌, ನಿವೃತ್ತ ಯೋಧ ರಾಜೇಂದ್ರ ಪಾಟ್ಕರ್‌, ವೀರೇಂದ್ರ ಪಾಟ್ಕರ್‌, ಡೆನ್ನಿಸ್‌ ಡಿಸೋಜಾ, ರಾಘವೇಂದ್ರ, ಸುರೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.