ಮುದೂರು-ಗುಂಡಿನಹೊಳೆ ರಿಂಗ್‌ ರಸ್ತೆಗೆ 10 ಕೋ.ರೂ.: ಗೋಪಾಲ ಪೂಜಾರಿ


Team Udayavani, Aug 17, 2017, 8:20 AM IST

gopal-poojari.jpg

ಕೊಲ್ಲೂರು: ಬಹು ವರುಷಗಳ ಹೋರಾಟದ ಬಳಿಕ ಬಸ್ರಿಬೇರು ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, ಸೌಲಭ್ಯದ ಉದ್ಘಾಟನ ಸಮಾರಂಭ ಆ.15ರಂದು ಬಸ್ರಿಬೇರಿನಲ್ಲಿ ನಡೆಯಿತು. ರಾಜ್ಯ ಸರಕಾರದ ವಿಶೇಷ ಅನುದಾನದಡಿ 35 ಲಕ್ಷ ರೂ. ವೆಚ್ಚದಲ್ಲಿ ಒದಗಿಸಲಾದ ವಿದ್ಯುತ್‌ ಸಂಪರ್ಕ ವ್ಯವಸ್ಥೆಯನ್ನು ಉದ್ಘಾಟಿಸಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ, ಅತೀ ಹಿಂದುಳಿದ ಪ್ರದೇಶವಾಗಿರುವ ಬಸ್ರಿಬೇರಿನ ತಾಂತ್ರಿಕ ದೋಷಗಳನ್ನು ನಿವಾರಿಸಲಾಗಿದ್ದು ಈ ಭಾಗದ ಜನರ ಬೇಡಿಕೆ ಈಡೇರಿಸಲಾಗಿದೆ ಎಂದರು.

ಮುದೂರು ಮೈದಾನದಿಂದ ಉದಯ ನಗರ ಹಾಗೂ ಗುಂಡಿನಹೊಳೆ ರಿಂಗ್‌ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್‌ ಕರೆಯಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಜಡ್ಕಲ್‌ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ  1 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಭೋವಿ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಒತ್ತಾಯಕ್ಕೆ ಸರಕಾರ
ಸ್ಪಂದಿಸಿದ್ದು ಅನುಮತಿಯ ಆದೇಶ ನೀಡಿದೆ. ಕೊಲ್ಲೂರು-ಮುದೂರು- ಜಡ್ಕಲ್‌ ಸಹಿತ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಜನರ ಮೂಲ ಸಮಸ್ಯೆಗಳಿಗೆ ಸ್ಪಂದಿಸಲಾಗಿದ್ದು ಮಿಕ್ಕುಳಿದ ಯಾವುದೇ ಸಮಸ್ಯೆ ಇದ್ದಲ್ಲಿ ಖಂಡಿತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಜಿ.ಪಂ. ಸದಸ್ಯ ಶಂಕರ ಪೂಜಾರಿ, ತಾ.ಪಂ. ಸದಸ್ಯೆ ಗ್ರೀಷ್ಮ ಭಿಡೆ, ಜಡ್ಕಲ್‌ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ, ಮಾಜಿ ಅಧ್ಯಕ್ಷ ದೇವದಾಸ್‌, ವಿಎಸ್‌ಎಸ್‌ ಬ್ಯಾಂಕ್‌ ಅಧ್ಯಕ್ಷ ಪಿ.ಎಲ್‌.ಜೋಸ್‌, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ ಗಾಣಿಗ ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾ ದಿನೇಶ ಸ್ವಾಗತಿಸಿದರು. ಉದಯ ಕಾರ್ಯಕ್ರಮ ನಿರೂಪಿಸಿ, ವಸಂತಿ ಮರಾಠಿ ವಂದಿಸಿದರು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.