

Team Udayavani, Jan 30, 2025, 6:28 PM IST
ಉಡುಪಿ: ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿದ್ದು,ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಗುರುವಾರ(ಜ30) ಪೆರ್ಣಂಕಿಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ” ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿವೆ, ಜೀರ್ಣೋದ್ಧಾರ ಇಲ್ಲ, ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಇಲ್ಲ. ಭಕ್ತರ ಕಾಣಿಕೆ ಸಧ್ವಿನಿಯೋಗ ಆಗುತ್ತಿಲ್ಲ. ದೇಗುಲದ ಸಂಪತ್ತಿಂದ ಊರಿಗೆ ಶಿಕ್ಷಣ ಆಗಬೇಕು, ಊರ ಜನರ ವೈದ್ಯಕೀಯಕ್ಕೆ ಬಳಕೆಯಾಗಬೇಕು” ಎಂದರು.
ಅಯೋಧ್ಯೆಯಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕಾಮಗಾರಿಗಳೆಲ್ಲ ಪೂರ್ಣವಾಗಲಿದೆ.ಈಗ ಭಕ್ತರ ದರ್ಶನಕ್ಕೆ ಸುಲಲಿತ ವ್ಯವಸ್ಥೆಯಿದೆ. ಅಲ್ಲಿ ತಿರುಪತಿಯಂತೆ ಬದಲಿಸಿದರೆ ವ್ಯವಸ್ಥೆ ಸಂಕೋಚ ಮಾಡಿದಂತಾಗುತ್ತದೆ” ಎಂದರು.
ಪ್ರಯಾಗದಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೆಲ ಅನಾನುಕೂಲತೆ ಆಗಿದ್ದು, ಮುಂದಿನ ಎಲ್ಲಾ ಉತ್ಸವಗಳು ಸಾಂಗವಾಗಿ ನಡೆಯಲಿ ಎಂದು ಆಶಿಸುತ್ತೇವೆ. ಕುಂಭಮೇಳದಲ್ಲಿ ಅಭೂತಪೂರ್ವ ವ್ಯವಸ್ಥೆ ಇದೆ. ಯಾವುದೇ ಅನಾನುಕೂಲತೆಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಬೇಕು. ಕುಂಭಮೇಳಕ್ಕೆ ತೆರಳುವವರು ತಾಳ್ಮೆಯಿಂದ ವರ್ತಿಸಿ ಅಪಾಯಕ್ಕೊಳಗಾಗಬೇಡಿ” ಎಂದು ಸಲಹೆ ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಕುರಿತು ಅಸಮಾಧಾನ ಹೊರ ಹಾಕಿ ”ಯಾರೂ ಕೂಡಾ ಬಹುಮತವನ್ನು ಕಡೆಗಣಿಸಬೇಡಿ.ಖರ್ಗೆಯವರ ಹೇಳಿಕೆ ಅವರ ಆಶಯ ತೆರೆದಿಟ್ಟಿದೆ. ದೇಶ ವಿದೇಶದಿಂದ ಜನ ಬರುತ್ತಿದ್ದಾರೆ. ಬಹುಮತದ ಎಲ್ಲರ ಭಾವನೆಯನ್ನು ನಾವು ಗೌರವಿಸಬೇಕು. ಯಾರನ್ನೂ ನೋಯಿಸಬಾರದು.ಇಂತಹ ಹೇಳಿಕೆ ಅವರ ಘನತೆಗೆ ತಕ್ಕುದಾದುದಲ್ಲ, ಕುಂಭಮೇಳದಲ್ಲಿ ಮಿಂದ ಮಂದಿ ಮೂರ್ಖರಾ? ಕುಂಭಮೇಳಕ್ಕೆ ಬಂದ ಎಲ್ಲರನ್ನ ಖರ್ಗೆ ಅವರು ಮೂರ್ಖರೆಂದು ಹೇಳಿದ ಹಾಗೆ ಆಯಿತು. ರಾಜಕೀಯ ಪಕ್ಷಗಳು ಎಲ್ಲರೂ ಮತಭೇತ ಮರೆತು ಯಶಸ್ಸಿಗೆ ಕೈಜೋಡಿಸಬೇಕು. ಏಕ ಮನಸ್ಸಿನಿಂದ ಒಮ್ಮನಸಿನಿಂದ ಎಲ್ಲರೂ ವರ್ತನೆ ಮಾಡಬೇಕು” ಎಂದರು.
”ಗೋ ಸಂಪತ್ತು ರಕ್ಷಣೆಗೆ ವಿಷ್ಣು ಸಹಸ್ರನಾಮ ಅಭಿಯಾನ ನಡೆಸಲಾಗುತ್ತಿದ್ದು, ಅನೇಕ ಪೀಠಾಧಿಪತಿಗಳು, ಮಠಾಧಿಪತಿಗಳು ಸಂತರು ಸಮಾಜದಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಒಂದು ಹಂತದ ಅಭಿಯಾನ ನಡೆದಿದೆ. ಬಗ್ಗದಿದ್ದರೆ ಮತ್ತೆ ನಮ್ಮ ಚಟುವಟಿಕೆ ಮುಂದುವರಿಯುತ್ತದೆ. ಪೀಠಾಧಿಪತಿಗಳು ಸೌಮ್ಯ ಸ್ವರೂಪದಲ್ಲಿ ಹೋರಾಟ ಮಾಡಲು ಸಾಧ್ಯ. ಅದರಂತೆ ಮುಂದುವರೆಯುತ್ತೇವೆ” ಎಂದರು.
ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್ ಶೆಟ್ಟಿ
Amaravathi Police Station Movie: ಅಮರಾವತಿಯಿಂದ ಟೀಸರ್ ಬಂತು
ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ
Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್
Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ
You seem to have an Ad Blocker on.
To continue reading, please turn it off or whitelist Udayavani.