ಸುಲಭ ದರದಲ್ಲಿ ಮರಳು; ತಪ್ಪಿದರೆ ಕ್ರಮ: ಜಿಲ್ಲಾಡಳಿತ


Team Udayavani, Nov 12, 2019, 5:55 AM IST

Udupi-DC-New-G-Jagadeesha

ಉಡುಪಿ: ಸಾರ್ವಜನಿಕರಿಗೆ ಸುಲಭ ದರದಲ್ಲಿ ಸಾಕಷ್ಟು ಮರಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ ವ್ಯಾಪ್ತಿಯ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ನೀಡಲಾಗಿದೆ. ಹಾಗಿದ್ದೂ ಕೆಲವು ಪರವಾನಿಗೆದಾರರು ಹಾಗೂ ಸಾಗಾಟ ವಾಹನದವರು ಹೆಚ್ಚಿನ ದರವನ್ನು ಪಡೆಯುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮರಳು ಗ್ರಾಹಕರು ಸಾಗಾಟ ಪರವಾನಿಗೆಯನ್ನು (MDP) ಸಾಗಾಣಿಕೆದಾರರಿಂದ ಕಡ್ಡಾಯವಾಗಿ ಪಡೆದು ತಮ್ಮ ಬಳಿ ಇಟ್ಟುಕೊಳ್ಳತಕ್ಕದ್ದು. ಇಲ್ಲದಿದ್ದಲ್ಲಿ ಅನಧಿಕೃತ ಮರಳು ಎಂದು ಪರಿಗಣಿಸಿ ಮುಂದಿನ ಕ್ರಮ ಜರಗಿಸಲಾಗುತ್ತದೆ. ಪಿಡಬ್ಲೂ$Âಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗೆ ಅಗತ್ಯಕ್ಕನುಸಾರ ಮರಳನ್ನು ಪಡೆಯಬಹುದು. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಟ/ ದಾಸ್ತಾನು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಉಲ್ಲಂಘಿಸಿದರೆ ಗೂಂಡಾ ಕಾಯಿದೆ
ಪ್ರಕರಣಗಳು ಪುನರಾವರ್ತನೆಯಾದರೆ ನಿಯಮಾ ನುಸಾರ ಗೂಂಡಾ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮರಳಿನ, ಸಾಗಾಟ ದರ ವೆಚ್ಚದ ವಿವರ
ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿನ (ಪ್ರದೇಶದ ಸ್ವರ್ಣಾ, ಸೀತಾ ಪಾಪನಾಶಿನಿ ನದಿ ವ್ಯಾಪ್ತಿಗಳಲ್ಲಿ) ಮರಳು ದಿಬ್ಬಗಳಿಂದ ತೆರವುಗೊಳಿಸಿದ ಮರಳಿನ ದರ ಪ್ರತಿ ಮೆ.ಟನ್‌ಗೆ (ಸಾಗಾಟ ಪರವಾನಿಗೆಯೊಂದಿಗೆ): 550 ರೂ., 3 ಯುನಿಟ್‌ಗೆ (10 ಮೆ.ಟನ್‌) 5,500 ರೂ.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ ಪ್ರದೇಶದಲ್ಲಿ ಕುಂದಾಪುರ ತಾಲೂಕಿನ ಮರಳು ಬ್ಲಾಕ್‌ ಸಂಖ್ಯೆ: 4 ರ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಮತ್ತು 6 ರ ಜಪ್ತಿ- ಹಳ್ನಾಡು ಗ್ರಾಮದ ವ್ಯಾಪ್ತಿಯಲ್ಲಿ) ಮರಳುಗಾರಿಕೆ ನಡೆಸಿ ತೆಗೆದ ಮರಳಿನ ದಾಸ್ತಾನು/ ಶೇಖರಣೆ ಸ್ಥಳದಿಂದ ದರ ಪ್ರತಿ ಮೆ.ಟನ್‌ಗೆ (ಸಾಗಾಟ ಪರವಾನಿಗೆಯೊಂದಿಗೆ): 650 ರೂ. 3 ಯುನಿಟ್‌ಗೆ: 6,500 ರೂ..

ಜಿಲ್ಲಾ ವ್ಯಾಪ್ತಿಯಲ್ಲಿ ಮರಳು ಸಾಗಾಟ ದರ (10 ಮೆ.ಟನ್‌ ಗೆ): ದೊಡ್ಡ ಲಾರಿಗೆ 3,000 ರೂ. (20 ಕಿ.ಮೀ. ವರೆಗೆ), ಅನಂತರದ ಪ್ರತಿ ಕಿ.ಮೀಗೆ 50 ರೂ. ಗಳು. ಮಧ್ಯಮ ಗಾತ್ರದ ವಾಹನಗಳಿಗೆ 2,000 ರೂ. (20 ಕಿ.ಮೀ. ವರೆಗೆ), ಅನಂತರದ ಪ್ರತಿ ಕಿ.ಮೀ.ಗೆ 40 ರೂ.ಗಳು. ಸಣ್ಣ ವಾಹನಗಳಿಗೆ 1,500 ರೂ. (20 ಕಿ.ಮೀ. ವರೆಗೆ), ಅನಂತರದ ಪ್ರತಿ ಕಿ.ಮೀ.ಗೆ 35 ರೂ.

ಹೆಚ್ಚಿನ ದರ ವಿಧಿಸಿದಲ್ಲಿ ಮಾಹಿತಿ ನೀಡಿ
ನಿಗದಿಗಿಂತ ಹೆಚ್ಚಿನ ದರ ವಿಧಿಸಿದಲ್ಲಿ ಹಿರಿಯ ಭೂಜ್ಞಾನಿಯವರ ಕಚೇರಿ, ಗಣಿ ಮತ್ತು ಭೂಜ್ಞಾನ ಇಲಾಖೆ ಉಡುಪಿ: 0820-2572333, ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0820-2574802, 1077 (ಟೋಲ್‌ ಫ್ರೀ), ಮಹೇಶ ಭೂವಿಜ್ಞಾನಿ : 9632742629, ಡಾ| ಮಹದೇಶ್ವರ ಎಚ್‌. ಎಸ್‌., ಭೂವಿಜ್ಞಾನಿ : 9483096118, ಗೌತಮ್‌ ಶಾಸಿŒ ಎಚ್‌., ಭೂವಿಜ್ಞಾನಿ : 9008917890, ಸಂಧ್ಯಾಕುಮಾರಿ, ಭೂವಿಜ್ಞಾನಿ: 9901370559, ಹಾಜಿರಾ ಸಜಿನಿ ಎಸ್‌., ಭೂಜ್ಞಾನಿ : 9663836959 ಅವರನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.