ಸಂಜೀವಿನಿ: ವೇತನ ಏರಿಕೆಗೆ ಸರಕಾರ ಸಮ್ಮತಿ


Team Udayavani, Feb 7, 2024, 6:50 AM IST

ಸಂಜೀವಿನಿ: ವೇತನ ಏರಿಕೆಗೆ ಸಮ್ಮತಿ

ಕುಂದಾಪುರ: ರಾಜ್ಯದ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಣೆ ಮಾಡುತ್ತಿರುವ ಸಿಬಂದಿಯ ವೇತನ ಪರಿಷ್ಕರಣೆಗೆ ಸರಕಾರ ಒಪ್ಪಿಗೆ ನೀಡಿದೆ.

ಕರ್ನಾಟಕ ರಾಜ್ಯ ಸಂಜೀವಿನಿ ನೌಕರರ ಹಾಗೂ ಫಲಾನುಭವಿಗಳ ಸಂಘ ಸಚಿವ ಶರಣಪ್ರಕಾಶ ಪಾಟೀಲ್‌, ಹಿರಿಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹಾದೇವನ್‌, ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ನಡೆಸಿದ ಮಾತುಕತೆ ಕೊನೆಗೂ ಫಲಪ್ರದವಾಗಿದೆ.

ವೇತನ ಹೆಚ್ಚಳ ಕುರಿತಂತೆ ಎಂಬಿಕೆಗಳು ಅವರ ವ್ಯಾಪ್ತಿಯಲ್ಲಿ ಬರುವ ಸ್ವ ಸಹಾಯ ಸಂಘಗಳ ಸಂಖ್ಯೆಯ ಆಧಾರದಲ್ಲಿ 40 ಸ್ವಸಹಾಯ ಸಂಘಗಳಿದ್ದರೆ 5 ಸಾವಿರ ರೂ., 45 ಸಂಘಗಳಿದ್ದರೆ 6 ಸಾವಿರ ರೂ., 90 ಸಂಘಗಳಿದ್ದರೆ 9 ಸಾವಿರ ರೂ.ಗಳಂತೆ ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 9 ಸಾವಿರ ರೂ.ವರೆಗೆ ವೇತನ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಸಚಿವರು, ಎಪ್ರಿಲ್‌ನಿಂದ ವೇತನ ಏರಿಕೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು. ಎಂಬಿಕೆಗಳಿಗೆ ವೇತನ ಹೆಚ್ಚಳ ಜತೆಗೆ ಕೇಂದ್ರ ಸರಕಾರದ ಅಭಿಪ್ರಾಯ ಪಡೆದು ಎಲ್‌ಸಿಆರ್‌ಪಿಗಳಿಗೆ ಮಾಸಿಕ 4 ಸಾವಿರ ರೂ. ವೇತನ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

2021ರಿಂದ 2023ರ ವರೆಗೆ 6 ಬಾರಿ ಗಣತಿ ಕಾರ್ಯ ಮಾಡಿದ್ದು, ಗಣತಿಯಲ್ಲಿ ಭಾಗಿಯಾದವರಿಗೆ ನೀಡಬೇಕಾದ ಬಾಕಿ ವೇತನವನ್ನು ಕೊಡಲು ಒಪ್ಪಿದರು. ಪಂಚಾಯತ್‌ಗಳಲ್ಲಿ ಸಂಜೀವಿನಿ ಸಿಬಂದಿಗೆ ವ್ಯವಸ್ಥೆ, ಪ್ರತ್ಯೇಕ ಕಚೇರಿಗೆ ಸ್ಥಳವಿದ್ದಲ್ಲಿ ನರೇಗಾ ಮೂಲಕ ಕಟ್ಟಡ, ನೌಕರರಿಗೆ ಐಡಿ ಕಾರ್ಡ್‌ ಮತ್ತು ನೇಮಕಾತಿ ಆದೇಶ ಪತ್ರ, ಯುನಿಫಾರಂ ಹಾಗೂ ಸೇವಾ ನಿಯಮಾವಳಿಗಳಿಗೆ ಕ್ರಮ ಕೈಗೊಳ್ಳುವುದು, ಎಂಬಿಕೆಗಳಿಗೆ ಚೆಕ್‌ ಸಹಿ ಮಾಡುವ ಅಧಿಕಾರ ನೀಡುವ ಅವಕಾಶಗಳನ್ನು ಪರಿಶೀಲಿಸಿ ನಿರ್ಧರಿಸುವುದಾಗಿ ತಿಳಿಸಿದರು.

ಸಂಘವು ಬೆಳಗಾವಿ ಅಧಿವೇಶನ ಸಂದರ್ಭ ಪ್ರತಿಭಟನೆ ನಡೆಸಿತ್ತು.ರಾಜ್ಯ ಸಂಚಾಲಕರಾದ ಜಿ. ನಾಗರಾಜ, ಬಿ. ಮಾಳಮ್ಮ, ಯು. ಬಸವರಾಜ, ರುದ್ರಮ್ಮ,ಗೌಸ್‌ ಸಾಬ್‌, ಜೆ.ಎಂ.ವೀರ ಸಂಗಯ್ಯ, ವಿಜಯ ನಗರ, ಧಾರವಾಡ, ಕಲಬುರಗಿ, ಕೊಪ್ಪಳ, ಮಂಡ್ಯ, ಉಡುಪಿ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಮುಂತಾದ ಜಿಲ್ಲೆಗಳ ಮುಖಂಡರು ಉಪಸ್ಥಿತರಿದ್ದರು.

“ಉದಯವಾಣಿ’ 2023ರ ಡಿ.6ರಂದು ಸಂಜೀವಿನಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಕುರಿತು “ರಾಜ್ಯಾದ್ಯಂತ ಕೆಲಸ ನಿಲ್ಲಿಸಿದ ಸಂಜೀವಿನಿ ಮೇಲ್ವಿಚಾರಕರು’ ಎಂಬ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

tomato

Temperature: ಟೊಮೇಟೊ, ಈರುಳ್ಳಿ ಬೆಲೆ ಭಾರೀ ಏರಿಕೆ!

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

kejriwal 2

High Court; ಕೇಜ್ರಿವಾಲ್‌ಗೆ ಜಾಮೀನು ಕೊಡಬಹುದೇ?

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.