ಕುಂದಾಪುರ: ಸ್ಪಂದಿಸುವ ಮಾನವೀಯ ಮನೋಭಾವವೇ ಸೌಹಾರ್ದ


Team Udayavani, Dec 12, 2018, 2:25 AM IST

kemaru-shree-11-12.jpg

ಕುಂದಾಪುರ: ಸಮಾಜದಲ್ಲಿ ಇನ್ನೊಬ್ಬರ ನೋವು, ನಲಿವುಗಳಿಗೆ ಸ್ಪಂದಿಸುವ ಮಾನವೀಯ ಮನೋಭಾವವೇ ಸೌಹಾರ್ದ. ಭಾವನೆಗಳ ಭಾವೈಕ್ಯತೆ ತುಂಬಿರುವ ದೇಶದಲ್ಲಿ ಮದರ್‌ ಥೇರೆಸಾ, ಅಬ್ದುಲ್‌ ಕಲಾಂ ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದರು. ಅವರು ಕೆಥೋಲಿಕ್‌ ಸಭೆ ಉಡುಪಿ ಪ್ರದೇಶ ಕುಂದಾಪುರ ವಲಯ ಸಮಿತಿ ಆಶ್ರಯದಲ್ಲಿ ಪ.ಪೂ. ಕಾಲೇಜಿನ ಆವರಣದಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಕ್ರಿಸ್ಮಸ್‌ ಉದ್ಘಾಟಿಸಿ ಮಾತನಾಡಿದರು.

ಎಲ್ಲವೂ ಯಾಂತ್ರಿಕವಾಗಿರುವ ಇಂದಿನ ಕಾಲದಲ್ಲಿ ನಾವು ಯಾವುದೇ ಮಾನವೀಯ ಮೌಲ್ಯವಿಲ್ಲದ ಜಗತ್ತಿನಲ್ಲಿ ಜೀವಿಸುತ್ತಿದ್ದೇವೆ. ಭಾವನೆಯಿಂದ ಹೊರಬರಲು ಒಗ್ಗಟ್ಟಿನ ಮಂತ್ರ ಪಠಿಸುವ ಅಗತ್ಯವಿದೆ. ಪ್ರೀತಿ, ಪ್ರೇಮ ಮರೆತು ಇಂದಿನ ಯಾಂತ್ರಿಕ ಪ್ರಪಂಚದಲ್ಲಿ ಕಳೆದು ಹೋಗುತ್ತಿರುವ ನಮ್ಮಲ್ಲಿ, ಸಹೋದರತೆ ಅರಿವು ಮೂಡಿ ಸಮಾಜ ಕಟ್ಟುವ ಕಾರ್ಯಗಳು ನಡೆಯಬೇಕು ಎಂದು  ಹೇಳಿದರು.

ಉಡುಪಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಕ್ರಿಸ್‌ಮಸ್‌  ಸಂದೇಶ ನೀಡಿ, ಹರಿವ ನದಿಗಳು ಕೊನೆಗೆ ಒಟ್ಟಾಗಿ ಸಮುದ್ರ ಸೇರುವಂತೆ ವಿವಿಧ ಧರ್ಮದ ದಾರಿಗಳು ಕೊನೆಗೊಳ್ಳುವುದು ಭಗವಂತನ ಮಡಿಲಲ್ಲಿ. ಶ್ರೇಷ್ಠವಾದ ಹಾಗೂ ಶಾಂತಿಯುತವಾದ ಸಮಾಜ ಕಟ್ಟಬೇಕು ಎನ್ನುವುದು ಧರ್ಮವು ನಮಗೆ ಹೇಳಿಕೊಡುತ್ತದೆ ಎಂದರು. ಹೃದಯವೆಂಬ ದೇವ ಮಂದಿರದಲ್ಲಿ ಸರ್ವರನ್ನು ಪೂಜಿಸುವುದು ನೈಜ ಸೌಹಾರ್ದತೆ. ಬಹು ತತ್ವದಲ್ಲಿ ನಂಬಿಕೆ ಇರುವ ಭಾರತದಲ್ಲಿ ರಾಜಕೀಯ ಕಾರಣಕ್ಕಾಗಿ ಕಲುಷಿತ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ದಿಕ್ಸೂಚಿ ಭಾಷಣದಲ್ಲಿ ಸದ್ಭಾವನಾ ವೇದಿಕೆ ರಾಜ್ಯ ಕಾರ್ಯದರ್ಶಿ ಅಕ್ಬರ್‌ ಅಲಿ ಹೇಳಿದರು.

ಕುಂದಾಪುರ ವಲಯ ಪ್ರಧಾನ ಧರ್ಮಗುರು ಸ್ಟ್ಯಾನ್ಲಿ ತಾವ್ರೊ, ಸಿಎಸ್‌ಐ ಇಗರ್ಜಿ ಧರ್ಮಗುರು ಕಿಶೋರ ಕುಮಾರ, ಜಡ್ಕಲ್‌ನ ಸೈಂಟ್‌ ಜಾರ್ಜ್‌ ಇಗರ್ಜಿ ಧರ್ಮಗುರು ವರ್ಗಿàಸ್‌ ಪುದಿಯಡತ್ತ್, ಸಾಸ್ತಾನ ಸೈಂಟ್‌ ಥೋಮಸ್‌ ಆರ್ಥೋಡಕ್ಸ್‌ ಇಗರ್ಜಿ ಧರ್ಮಗುರು ನೋಯಲ್‌ ಲೂವಿಸ್‌, ಕೆಥೊಲಿಕ್‌ ಸಭಾ ಅಧ್ಯಕ್ಷ ಮೈಕಲ್‌ ಪಿಂಟೊ, ಕಾರ್ಯದರ್ಶಿ ಲೀನಾ ತಾವ್ರೊ, ಕಾರ್ಯಕ್ರಮ ಸಂಚಾಲಕ ಎಲ್ರಾಯ್‌ ಕಿರಣ್‌ ಕ್ರಾಸ್ತಾ ಉಪಸ್ಥಿತರಿದ್ದರು. ಸಮಾಜ ಸೇವಕ ವಾಸುದೇವ ಹಂದೆ, ಸೀರಾಜ್‌ ಅಹಮ್ಮದ್‌ ಹಾಗೂ ಲಿಫ್ಟ್‌ನ್‌ ಒಲಿವೇರಾ ಅವರನ್ನು ಗೌರವಿಸಲಾಯಿತು.  ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಆಲ್ವಿನ್‌ ಕ್ವಾಡ್ರಸ್‌ ಸ್ವಾಗತಿಸಿದರು. ವಿನೋದ್‌ ಕ್ರಾಸ್ತಾ, ಜಾನ್ಸ್‌ ಡಿ’ಆಲ್ಮೇಡಾ, ನ್ಯಾನ್ಸಿ ಡಿ’ಸೋಜಾ ಸಮ್ಮಾನ ಪತ್ರ ವಾಚಿಸಿದರು. ಮೇಬಲ್‌ ಡಿಸೋಜಾ ಹಾಗೂ ಫೈವನ್‌ ಡಿಸೋಜಾ ನಿರೂಪಿಸಿದರು.

ಏಕತೆಯ ಸಂಕೇತ
ಶಾಂತಿ, ಪ್ರೀತಿ ಮತ್ತು ದಯೆಯ ಸಂದೇಶವನ್ನು ಪ್ರತೀ ಧರ್ಮ ಪ್ರತಿಪಾದಿಸುತ್ತದೆ. ಎಲ್ಲಧರ್ಮಗಳು ಕೂಡ ಇತರ ಧರ್ಮಗಳನ್ನು ಗೌರವಿಸಬೇಕೆಂದು ಹೇಳುತ್ತದೆ. ಎಲ್ಲರೂ ಒಂದೇ ಮಾನವ ಕುಲದವರಾಗಿದ್ದಾರೆಂದು ಅದು ಪ್ರತಿಪಾದಿಸುತ್ತದೆ.
– ಡಾ| ಜೆರಾಲ್ಡ್‌ ಐಸಾಕ್‌ ಲೊಬೊ, ಧರ್ಮಾಧ್ಯಕ್ಷ, ಉಡುಪಿ ಧರ್ಮ ಪ್ರಾಂತ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.