ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬಂದಿ ಕೊರತೆ

ದಶಕಗಳಿಂದ ಹುದ್ದೆ ಖಾಲಿ ಇದ್ದರೂ ಇಲಾಖೆಯಿಂದ ಕ್ರಮವಿಲ್ಲ

Team Udayavani, Jul 15, 2019, 5:16 AM IST

palli-health-centre

ಪಳ್ಳಿ : ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಚೆನ್ನಾಗಿದ್ದರೂ ಸಿಬಂದಿ ಕೊರತೆಯಿಂದ ಬಳಲುತ್ತಿದೆ. ಹೀಗಾಗಿ ಆಸ್ಪತ್ರೆಯ ವೈದ್ಯಾಧಿಕಾರಿಯವರೇ ಇತರ ಸಹಾಯಕ ಸಿಬಂದಿಯ ಕಾರ್ಯಗಳನ್ನೂ ಮಾಡ ಬೇಕಾಗಿದೆ. ಪಳ್ಳಿ, ನಿಂಜೂರು, ಕುಂಟಾಡಿ, ಕಣಜಾರು ಆಸುಪಾಸಿನ ಗ್ರಾಮಸ್ಥರು ಬಹುತೇಕವಾಗಿ ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ

ದಶಕದಿಂದ ಹುದ್ದೆ ಖಾಲಿ

20 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಇಲ್ಲಿನ ಪ್ರಾಥಮಿಕ ಕೇಂದ್ರದಲ್ಲಿ ನಿಯಮದಂತೆ ವೈದ್ಯಾಧಿಕಾರಿ ಹೊರತುಪಡಿಸಿ ಒಟ್ಟು 9 ಸಿಬಂದಿ ಇರಬೇಕಿತ್ತು. ತಲಾ ಓರ್ವರಂತೆ ಫಾರ್ಮಾಸಿಸ್ಟ್‌, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞ, ಪ್ರಥಮ ದರ್ಜೆ ಲಿಪಿಕಾ ಸಹಾಯಕ, ಗ್ರೂಪ್‌ ಡಿ ನೌಕರ ಹಾಗೂ ಇಬ್ಬರು ಆರೋಗ್ಯ ಸಹಾಯಕರು ಹಾಗೂ ಮೂವರು ಆರೋಗ್ಯ ಸಹಾಯಕಿಯರನ್ನು ಹೊಂದಿರಬೇಕಿತ್ತು. ಆದರೆ ಪ್ರಸ್ತುತ ಇಲ್ಲಿರುವುದು 3 ಮಂದಿ.

ವೈದ್ಯಾಧಿಕಾರಿಯಿಂದಲೇ ಕೆಲಸ

ಫಾರ್ಮಾಸಿಸ್ಟ್‌ ಹಾಗೂ ಪ್ರಥಮ ದರ್ಜೆ ಲಿಪಿಕಾರ ಸಹಾಯಕ ಹುದ್ದೆಗಳು ಖಾಲಿಯಿರುವುದರಿಂದ ವೈದ್ಯಾಧಿಕಾರಿಯವರೇ ಈ ಎರಡು ಹುದ್ದೆ ನಿಭಾಯಿಸುತ್ತಿದ್ದಾರೆ. ಆನ್‌ ಲೈನ್‌ ಅಪ್‌ಡೇಟ್ ಸೇರಿದಂತೆ ಇನ್ನಿತರ ಕಾರ್ಯಗಳನ್ನು ವೈದ್ಯರೇ ನಿರ್ವಹಿಸಬೇಕಿದೆ.

ಇಬ್ಬರು ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು ಇರಬೇಕಾದಲ್ಲಿ ಓರ್ವರೇ ಇದ್ದು, ಅವರು ಕುಕ್ಕುಂದೂರು ಆರೋಗ್ಯ ಕೇಂದ್ರದಲ್ಲೂ ಕಾರ್ಯನಿರ್ವಹಿಸಬೇಕಿದೆ. ಗ್ರೂಪ್‌ ಡಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗಿದೆ.

ಉಪಕೇಂದ್ರ

ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವು ಪಳ್ಳಿ ಹಾಗೂ ಹಾಳೆಕಟ್ಟೆ ಕಲ್ಯಾದಲ್ಲಿ ಉಪಕೇಂದ್ರವನ್ನು ಹೊಂದಿದೆ. ಪಳ್ಳಿ ಉಪಕೇಂದ್ರ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಶೋಚನೀಯವಾಗಿದೆ. ಅಲ್ಲದೆ ಮೂಲಭೂತ ಸೌಕರ್ಯದಿಂದಲೂ ವಂಚಿತವಾಗಿದೆ. ಪಳ್ಳಿ ಉಪಕೇಂದ್ರಕ್ಕೆ ಹೋಲಿಸಿದಲ್ಲಿ ಹಾಳೆಕಟ್ಟೆ ಉಪಕೇಂದ್ರ ಪರವಾಗಿಲ್ಲ ಎಂಬಂತಿದೆ.

ಸಿಬಂದಿಯನ್ನೇ ಬಳಸಿಕೊಂಡು ಚಿಕಿತ್ಸೆ

ಆರೋಗ್ಯ ಕೇಂದ್ರದಲ್ಲಿ ಇರುವ ಸಿಬಂದಿಯನ್ನೇ ಬಳಸಿಕೊಂಡು ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆಯೂ ಸಾಕಷ್ಟು ಮನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
– ಡಾ| ಅರುಣಾ, ವೈದ್ಯಾಧಿಕಾರಿ, ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.