Scholarship ಏಕರೂಪ ವ್ಯವಸ್ಥೆಯಡಿ ಸ್ಕಾಲರ್‌ಶಿಪ್‌: ರಾಜ್ಯ ಸರಕಾರ ನಿರ್ಧಾರ


Team Udayavani, Nov 15, 2023, 11:01 PM IST

Scholarship ಏಕರೂಪ ವ್ಯವಸ್ಥೆಯಡಿ ಸ್ಕಾಲರ್‌ಶಿಪ್‌: ರಾಜ್ಯ ಸರಕಾರ ನಿರ್ಧಾರ

ಉಡುಪಿ: ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಎಲ್ಲ ರೀತಿಯ ವಿದ್ಯಾರ್ಥಿ ವೇತನವನ್ನು 2023-24ನೇ ಸಾಲಿನಿಂದಲೇ ಏಕರೂಪ ವ್ಯವಸ್ಥೆಯಡಿ ತರಲು ರಾಜ್ಯ ಸರಕಾರ ನಿರ್ಧರಿಸಿದೆ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಅನಂತರದ ಶಿಷ್ಯವೇತನ/ ಶುಲ್ಕ ಮರುಪಾವತಿ/ ಪ್ರೋತ್ಸಾಹಧನ ಯೋಜನೆಯನ್ನು ಒಂದೇ ಪೋರ್ಟಲ್‌ ಅಡಿಯಲ್ಲಿ ಆನ್‌ಲೈನ್‌ ಮೂಲಕ ಅನುಷ್ಠಾನಕ್ಕೆ ರೂಪರೇಖೆ ಸಿದ್ಧಪಡಿಸಲಾಗಿದೆ.

ಇಲಾಖೆಯಡಿ ಬರುವ ಅಧೀನ ಇಲಾಖೆಗಳು, ಸಾರ್ವಜನಿಕ ವಿಶ್ವವಿದ್ಯಾನಿಲಯ, ಸರಕಾರದ ಅನುದಾನಿತ, ಅರೆಸರಕಾರಿ, ಸ್ವಂತ ನಿಧಿ, ದತ್ತಿನಿಧಿ, ಎಸ್‌ಸಿಪಿ/ಟಿಎಸ್‌ಪಿ, ಒಬಿಸಿ, ಮೈನಾರಿಟಿ, ಅನುದಾನದಿಂದ ಒದಗಿಸುವ ಎಲ್ಲ ತರಹದ ವಿದ್ಯಾರ್ಥಿವೇತನ/ ಸಹಾಯಧನ/ ನಗದು ಪುರಸ್ಕಾರಗಳನ್ನು 2023-24ನೇ ಸಾಲಿನಿಂದ ಇ- ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿ ನಿರ್ವಹಿಸುತ್ತಿರುವ “ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌'(ಎಸ್‌ಎಸ್‌ಪಿ) ತಂತ್ರಾಂಶದ ಮೂಲಕವೇ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಾವತಿಸಲು ಸರಕಾರ ಆದೇಶ ಹೊರಡಿಸಿದೆ.

ಕಾಲೇಜಿನಲ್ಲಿ ಹೆಲ್ಪ್ ಡೆಸ್ಕ್
ಏಕರೂಪ ವ್ಯವಸ್ಥೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ಅಡಿಯಲ್ಲಿರುವ ಸಂಯೋಜಿತ ಕಾಲೇಜುಗಳು ಕೋರ್ಸ್‌ವಾರು ಮತ್ತು ಕಾಂಬಿನೇಶನ್‌ ವಾರು ಮಾಹಿತಿಯನ್ನು ಸಲ್ಲಿಸುವಂತೆ ಇಲಾಖೆಯಿಂದ ಈಗಾಗಲೇ ಎಲ್ಲ ಕಾಲೇಜು, ಶಿಕ್ಷಣ ಸಂಸ್ಥೆಗಳು ಹಾಗೂ ವಿ.ವಿ.ಗಳಿಗೆ ನಿರ್ದೇಶನ ನೀಡಿದೆ. ಎಸ್‌ಎಸ್‌ಪಿಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಮೆಟ್ರಿಕ್‌ ಅನಂತರದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗಾಗಿ ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಬೇಕು ಮತ್ತು ವಿ.ವಿ., ಕಾಲೇಜುಗಳು ನಿರ್ದಿಷ್ಟ ಮಾಹಿತಿಯನ್ನು ತಂತ್ರಾಂಶದಲ್ಲಿ ನಮೂದಿಸಬೇಕು ಎಂಬ ಸೂಚನೆ ನೀಡಿದೆ.

ವಿವಿಧ ವಿದ್ಯಾರ್ಥಿವೇತನ
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪ್ರತಿಭಾ ಪುರಸ್ಕಾರ, ಶುಲ್ಕ ವಿನಾಯಿತಿ, ಶುಲ್ಕ ಮಂಜೂರಾತಿ, ಮರುಪಾವತಿ, ವಿದ್ಯಾರ್ಥಿವೇತನ, ಶಿಷ್ಯವೇತನ, ಶಿಷ್ಯವೇತನ ಪರಿಷ್ಕರಣೆ, ಉಚಿತ ಶಿಕ್ಷಣ, ಬೋಧನಾ ಶುಲ್ಕ, ಜೀವನೋಪಾಯ ಭತ್ಯೆ ಕಾರ್ಯಕ್ರಮಗಳನ್ನು ಕೆಲವೊಂದು ಷರತ್ತು ವಿಧಿಸಿ ನೀಡುವ ಹಣವನ್ನು ಅರ್ಹ ವಿದ್ಯಾರ್ಥಿಗಳಿಗೆ ತಲುಪಿಸಲು ಈ ತಂತ್ರಾಂಶ ಸಿದ್ಧಪಡಿಸಲಾಗಿದೆ.

https://ssp.postmatric.karnataka.gov.in/ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಮಾಹಿತಿ ಪಡೆಯಬಹುದಾಗಿದೆ. ಇಲ್ಲಿಯವರೆಗೂ ಎಸ್‌ಎಸ್‌ಪಿ ತಂತ್ರಾಂಶದಲ್ಲಿ ಖಾತೆ ಸೃಜಿಸದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಖಾತೆ ಸೃಷ್ಟಿಸಬೇಕು. 2023-24ನೇ ಸಾಲಿನ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಬಗೆಯನ್ನು ವೆಬ್‌ಸೈಟ್‌ ಮೂಲಕವೇ ಪಡೆಯಬಹುದಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್‌ ಅನಂತರದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲು ಆರಂಭವಾಗಿಲ್ಲ. ಅದಾಗ್ಯೂ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಂಬಂಧಿತ ಸರಕಾರದ ಆದೇಶ ಹೊರಬಿದ್ದ ಅನಂತರ ಅರ್ಹತೆಯನುಸಾರ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.