ಶಾಲಾರಂಭ: ಮಕ್ಕಳಲ್ಲಿ ಉತ್ಸಾಹ, ಇಲಾಖೆ ಸನ್ನದ್ದ


Team Udayavani, May 25, 2018, 6:00 AM IST

school.jpg

ಉಡುಪಿ: ಬೇಸಗೆ ರಜಾ ಮಜಾ ಕಳೆದು ಮತ್ತೆ ಶಾಲೆಯ ಮೆಟ್ಟಿಲೇರಲು ಮಕ್ಕಳು ಉತ್ಸುಕರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ತುದಿಗಾಲಲ್ಲಿ ನಿಂತಿದ್ದರೆ, ಇಲಾಖೆ ಕೂಡ ಮಕ್ಕಳನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.
 
ಈಗ ಹಳ್ಳಿಗಳಲ್ಲೂ ಶಾಲೆಗೆ ಮಕ್ಕಳನ್ನು ಕರೆದೊಯ್ಯಲು ವಾಹನದ ವ್ಯವಸ್ಥೆಗಳು ಸಿಗುವುದರಿಂದ ಶಾಲೆಗೆ ಹೋಗವುದು ಮಕ್ಕಳ ಪಾಲಿಗೆ ಸುಲಭವಾಗಿದೆ. ಜತೆಗೆ ಪೋಷಕರು ಒತ್ತಾಯದಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಸನ್ನಿವೇಶಗಳೂ ಇಲ್ಲ.  

ಶೇ.66ರಷ್ಟು ಪುಸ್ತಕ ಸಿದ್ದ
ಉಡುಪಿ ಜಿಲ್ಲೆಗೆ ಅಗತ್ಯವಿರುವ ಪಠ್ಯ ಪುಸ್ತಕಗಳ ಪೈಕಿ ಶೇ.66ರಷ್ಟು ಪೂರೈಕೆಯಾಗಿದೆ. ಇದನ್ನು ಆಯಾ ಶಾಲೆಗಳಿಗೆ ತಲುಪಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಮೇ 30ರಂದು ಶಾಲೆಗಳಲ್ಲಿ ವಿತರಣೆಯಾಗಲಿದೆ. ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಉಚಿತವಾಗಿ ದೊರೆಯಲಿದೆ. ಖಾಸಗಿ ಶಾಲೆಯವರು ಶಿಕ್ಷಣ ಇಲಾಖೆಯ ಗೋದಾಮಿನಿಂದ ಹಣಪಾವತಿಸಿ ಪಠ್ಯ ಪುಸ್ತಕಗಳನ್ನು ಪಡೆಯಬೇಕಾಗುತ್ತದೆ. ಈ ಪಠ್ಯಪುಸ್ತಕಗಳು ಅಂಗಡಿಗಳಲ್ಲಿ ದೊರೆಯುವುದಿಲ್ಲ. 

ಬಾರದ ಸಮವಸ್ತ್ರ
ಉಡುಪಿ ಜಿಲ್ಲೆಗೆ ಇದುವರೆಗೆ ಸಮ ವಸ್ತ್ರಗಳು ಬಂದಿಲ್ಲ. ಶೀಘ್ರ ಬರುವ ನಿರೀಕ್ಷೆ ಅಧಿಕಾರಿಗಳಿಗೆ ಇದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದು ಬಳಿಕವೇ ಸಮವಸ್ತ್ರ ಶಾಲೆಗಳಿಗೆ ಪೂರೈಕೆಯಾಗಲಿದೆ.

ದಾಖಲಾತಿ ಆಂದೋಲನ
ಉಡುಪಿ ಜಿಲ್ಲೆಯಲ್ಲಿ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಕರೆತರುವ ಪ್ರಯತ್ನವಾಗಿ ಇಲಾಖೆ ದಾಖಲಾತಿ ಆಂದೋಲನ ಆರಂಭಿಸಿದೆ. ಅದರಂತೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಮನೆ ಮನೆಗಳಿಗೆ ತೆರಳಿ ಮಕ್ಕಳ ದಾಖಲಾತಿ, ಅರ್ಧದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವ ಪ್ರಯತ್ನ ನಡೆಸುತ್ತಿದ್ದಾರೆ. ಮೇ 16ರಿಂದ ಈ ಆಂದೋಲನ ಆರಂಭ ಗೊಂಡಿದ್ದು ಮೇ 27ರವರೆಗೆ ಮುಂದು ವರಿಯಲಿದೆ.

ರವಿವಾರ ತರಗತಿಗೆ ಆಕ್ಷೇಪ
ಕೆಲವೊಂದು ಖಾಸಗಿ ಶಾಲೆಗಳು ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ರವಿವಾರ ಕೂಡ ತರಗತಿಗಳನ್ನು ನಡೆಸುವ ಕುರಿತು ಮಾಹಿತಿ ಇದೆ. ಇದು ಸರಿಯಲ್ಲ ಎನ್ನುತ್ತಾರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು. ಅದೇ ರೀತಿ ಮುಂದಿನ ಬೇಸಗೆ ರಜಾಗಳ ಅವಧಿಯಲ್ಲಿ ಕೂಡ ತರಗತಿಗಳನ್ನು ಮಾಡದಂತೆ ಇಲಾಖೆ ಆದೇಶ ಹೊರಡಿಸಿದೆ. ಸರಕಾರಿ ಶಾಲೆ ಗಳಲ್ಲಿ ಶಾಲಾ ಶೈಕ್ಷಣಿಕ ಅವಧಿಯ ಎರಡನೇ ಅವಧಿಯ ಅನಂತರ ಮಾತ್ರವೇ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿ ಗಳಿಗಾಗಿ ವಿಶೇಷ ಕೋಚಿಂಗ್‌ ತರಗತಿ ಗಳನ್ನು ನಡೆಸಲಾಗುವುದು ಎನ್ನುತ್ತಾರೆ ಅಧಿಕಾರಿಗಳು. 

ಮಳೆಗಾಲ: ಹೆತ್ತವರೇ ವಿವೇಚಿಸಿ
ಶಾಲಾರಂಭ ಮತ್ತು ಮಳೆಗಾಲ ಆರಂಭ ಒಂದೇ ಅವಧಿಯಲ್ಲಿ ಆಗುತ್ತದೆ. ಹಾಗಾಗಿ ವಿಶೇಷ ಎಚ್ಚರಿಕೆ ಅಗತ್ಯ. ನೀರು ಮಕ್ಕಳನ್ನು ಆಕರ್ಷಿಸುತ್ತದೆ. ನದಿ, ಹೊಳೆ, ಕಾಲುಸಂಕ ಮೊದಲಾದವುಗಳನ್ನು ದಾಟಿಕೊಂಡು ಹೋಗುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾ ಬೇಕೇ ಬೇಕು. ಹೆಚ್ಚು ಮಳೆ ಬಂದರೆ ಅಂದು ಮುಖ್ಯೋಪಾಧ್ಯಾಯರು ವಿವೇಚನಾ ರಜೆ ನೀಡಬಹುದಾಗಿದೆ. ಇದಕ್ಕೆ ಜಿಲ್ಲಾಡಳಿತದ ಒಪ್ಪಿಗೆ ಬೇಕು. ಶಾಲೆಗೆ ರಜೆ ಇದೆಯೇ ಇಲ್ಲವೇ ಎಂಬುದನ್ನು ಶಾಲಾ ಶಿಕ್ಷಕರಿಗೆ ಕರೆ ಮಾಡಿ ಖಚಿತ ಮಾಡಿಕೊಳ್ಳುವುದು ಉತ್ತಮ. ಒಂದು ವೇಳೆ ರಜೆ ವಿಚಾರ ಖಚಿತವಾಗದಿದ್ದರೂ ಮಕ್ಕಳು ಹೋಗುವ ದಾರಿಯಲ್ಲಿ ಅಪಾಯ ಇದೆ ಎಂದು ಗೊತ್ತಾದರೆ ಅಂದು ಶಾಲೆಗೆ ಕಳುಹಿಸದಿರುವುದೇ ಕ್ಷೇಮ. 

-   ಮೇ 28ರಂದು ಶಾಲಾರಂಭ 
-   ಮೇ 29ರಂದು ಬೋಧನಾ ಪಟ್ಟಿ ಸಿದ್ಧತೆ
-   ಮೇ 30 ಶಾಲಾ ಪ್ರಾರಂಭೋತ್ಸವ 
-   ಜೂ. 1ರಿಂದ ರೆಗ್ಯುಲರ್‌ ಕ್ಲಾಸ್‌ 

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.