ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಬಾರಕೂರು ಸಮೀಪದ ನಡೂರಿನವರಾದ ಕರುಣಾಕರ್‌ ಶೆಟ್ಟಿ...

Team Udayavani, Jul 5, 2024, 6:05 PM IST

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಮಣಿಪಾಲ: ಮನುಷ್ಯನಿಗೆ ಕರ್ಮಫ‌ಲ ಶಿಕ್ಷಣದಿಂದ ಆತ್ಮೋನ್ನತಿಯ ಜ್ಞಾನೋದಯ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ವಿ.ವಿ.ಯು ಧರ್ಮ ಸಂಸ್ಕಾರದ ಶಿಕ್ಷಣದಲ್ಲಿ ಕರ್ಮಫ‌ಲ ಶಿಕ್ಷಣವನ್ನು ವಿದ್ಯೆಯ ರೂಪದಲ್ಲಿ ಜಗತ್ತಿನಾದ್ಯಂತ ಕಲಿಸುತ್ತಿದೆ ಎಂದು ಮೌಂಟ್‌ ಅಬುವಿನ ಮ್ಯಾನೇಜ್‌ಮೆಂಟ್‌ ಕಮಿಟಿ ಮೆಂಬರ್‌ ಆಫ್ ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯ, ಟ್ರಸ್ಟಿ ಉಡುಪಿ ಜಿಲ್ಲೆಯ ನಡೂರು ಮೂಲದ ಕರುಣಾಕರ್‌ ಶೆಟ್ಟಿ (ಬಿ.ಕೆ.ಕರುಣ)ಹೇಳಿದರು.

ಬುಧವಾರ ಉದಯವಾಣಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮನುಷ್ಯ ಸತ್ತ ಅನಂತರ ಬರಿಗೈನಲ್ಲಿ ತೆರಳಿದ ಎನ್ನುತ್ತಾರೆ. ಆದರೆ ಆತನೊಂದಿಗೆ  ಪಾಪ ಮತ್ತು ಪುಣ್ಯಗಳು ಜತೆಗಿರುವುದು ಸತ್ಯ. ಜಗತ್ತಿನಲ್ಲಿ ಹಣ, ವ್ಯಕ್ತಿತ್ವ ಸಂಪಾದನೆಯನ್ನೇ ದೊಡ್ಡ ವಿಚಾರ ಎಂಬಂತೆ ತಿಳಿದಿದ್ದೇವೆ. ಇದಕ್ಕಿಂತ ಮಹತ್ವದ್ದು ಆತ್ಮೋನ್ನತಿಯಾಗಿದೆ.

ದೇವರು ಒಬ್ಬ ಎಂಬ ಜ್ಞಾನದಲ್ಲಿ ಬದುಕು ಸಾಗಬೇಕು. ಭಗವಂತ ಈಶ್ವರನು ನಮ್ಮೆಲ್ಲರ ಆತ್ಮಗಳ ತಂದೆಯಾಗಿದ್ದಾರೆ ಎಂದು
ವಿಶ್ಲೇಷಿಸಿದರು. ಪ್ರಸ್ತುತ ಬ್ರಹ್ಮಾಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯ 140 ದೇಶಗಳಲ್ಲಿ ಶಾಖೆಗಳನ್ನು ಹೊಂದಿ ಆಧ್ಯಾತ್ಮ ಶಿಕ್ಷಣ ನೀಡುತ್ತಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಇಂದಿನ ಒತ್ತಡ ಜೀವನದಲ್ಲಿ ಅಗತ್ಯವಾಗಿ ಬೇಕಿದೆ. ಆತ್ಮ ಜ್ಞಾನದ ಜತೆಗೆ ಶಾರೀರಿಕ ಆರೋಗ್ಯ ಜಾಗೃತಿಯ ಬಗ್ಗೆಯೂ ಸಂಸ್ಥೆ ಕೆಲಸ ಮಾಡುತ್ತಿದ್ದು, ಶಿಕ್ಷಣ ಮತ್ತು ಉಚಿತ ಆರೋಗ್ಯ ಸೇವೆಗೆ ಸಂಸ್ಥೆ ಶ್ರಮಿಸುತ್ತಿದೆ ಎಂದು ಹೇಳಿದರು.

ಸಂಸ್ಥೆಯಲ್ಲಿ ಜವಾಬ್ದಾರಿ
ಕೋಟ್ಯಂತರ ಮಂದಿ ಅನುಯಾಯಿಗಳನ್ನು ಹೊಂದಿರುವ ಪ್ರಜಾಪಿತ ಬ್ರಹ್ಮಾಕುಮಾರೀಸ್‌ ಸಂಸ್ಥೆಯಲ್ಲಿ ಆರಂಭದಿಂದಲೂ ಇಲ್ಲಿಯವರೆಗೂ ಮಾಧ್ಯಮ ಪ್ರಚಾರ ವಿಭಾಗದಲ್ಲಿ ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಪ್ರಸ್ತುತ ಮೌಂಟ್‌ ಅಬುವಿನ ಮ್ಯಾನೇಜ್‌ಮೆಂಟ್‌ ಕಮಿಟಿ ಮೆಂಬರ್‌ ಹಾಗೂ ಟ್ರಸ್ಟಿಯಾಗಿದ್ದಾರೆ. ಸಂಸ್ಥೆಯ ಜಾಯಿಂಟ್‌ ಸೆಕ್ರೇಟರಿ ಜನರಲ್‌ ಆಗಿದ್ದಾರೆ. ಡೈರೆಕ್ಟರ್‌ ಆಫ್ ಪಬ್ಲಿಕ್‌ ರಿಲೇಶನ್ಸ್‌, ರಾಜಯೋಗ ಎಜುಕೇಶನ್‌ ಆ್ಯಂಡ್‌ ರಿಸರ್ಚ್‌ ಫೌಂಡೇಶನ್‌ನ
ಕಾರ್ಯದರ್ಶಿ, ಹೆಡ್‌ ಪೀಸ್‌ ಆಫ್ ಮೈಂಡ್‌ ಟಿವಿ ಸಂಸ್ಥಾಪಕ, ರೆಡಿಯೋ ಮಧುಬನ್‌ ಕಮ್ಯೂನಿಟಿ ಸೊಸೈಟಿಯ ಕಾರ್ಯದರ್ಶಿಯೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೂಲತಃ ಬಾರಕೂರಿನವರು
ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ನಡೂರಿನವರಾದ ಕರುಣಾಕರ್‌ ಶೆಟ್ಟಿ ನಡೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಬಾರಕೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಬೆಂಗಳೂರಿನಲ್ಲಿರುವ ಎಚ್‌ಎಂಟಿ ಸಂಸ್ಥೆಯಲ್ಲಿ ತಂತ್ರಜ್ಞರಾಗಿ ಕರ್ತವ್ಯಕ್ಕೆ ಸೇರಿದ್ದರು. ಇವರ ತಂದೆ ಮಂಜಯ್ಯ ಶೆಟ್ಟಿ ಶಿಕ್ಷಕರಾಗಿದ್ದರು. 1960ರಿಂದ ಆಧ್ಯಾತ್ಮ ಶಿಕ್ಷಣದ ಸೆಳೆತ ಇವರನ್ನು ಪೂರ್ಣಕಾಲಿಕವಾಗಿ ಪ್ರಜಾಪಿತ ಬ್ರಹ್ಮಾಕುಮಾರೀಸ್‌ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳಲು ಕಾರಣವಾಯಿತು. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಹಲವು ವರ್ಷ ಸೇವೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.