![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 15, 2024, 11:58 PM IST
ಉಡುಪಿ: ಕಾಂಗ್ರೆಸ್ನ ಹಿರಿಯ ಮುಖಂಡ ಅಬ್ದುಲ್ ರೆಹಮಾನ್ ಮಣಿಪಾಲ (77) ಅವರು ಜ. 15ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ವಿದೇಶದಲ್ಲಿರುವ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಸಹಿತ ನಾಲ್ವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಸಿಂಡಿಕೇಟ್ ಬ್ಯಾಂಕ್ ಸಿಬಂದಿ, ಮಹಾರಾಷ್ಟ್ರ ಅಪೆಕ್ಸ್ ಮ್ಯಾನೇಜರ್ ಹಾಗೂ ಮಣಿಪಾಲ ಗ್ರೂಪ್ನಲ್ಲಿ ಡೆವಲಪ್ಮೆಂಟ್ ಮ್ಯಾನೇಜರ್ ಆಗಿ ನಿವೃತ್ತಿಯಾಗಿದ್ದ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ರೋಟರಿ ಕ್ಲಬ್ ಉಡುಪಿ- ಮಣಿಪಾಲ ಅಧ್ಯಕ್ಷರಾಗಿ, ಬ್ಯಾರಿ ಸಾಹಿತ್ಯ ಅಕಾಡೆಮಿ, ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ನಲ್ಲಿ ಸೇವೆ ಸಲ್ಲಿಸಿದ್ದರು.
ಸಂತೋಷ್ ನಗರ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿದ್ದ ಅವರು, ಶಿವಮೊಗ್ಗದಲ್ಲಿ ಗಣಿತ ಶಿಕ್ಷಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.