ಮಣಿಪಾಲದಲ್ಲಿ ಸರಣಿ ಅಪಘಾತ: ಕಾರು, ಬೈಕ್ ಸೇರಿ ಮೂರು ವಾಹನಗಳಿಗೆ ಹಾನಿ


Team Udayavani, Apr 10, 2022, 1:37 PM IST

ಮಣಿಪಾಲದಲ್ಲಿ ಸರಣಿ ಅಪಘಾತ: ಕಾರು, ಬೈಕ್ ಸೇರಿ ಮೂರು ವಾಹನಗಳಿಗೆ ಹಾನಿ

ಉಡುಪಿ: ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಶನಿವಾರ ತಡರಾತ್ರಿ ಸಮಯಕ್ಕೆ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಒಂದು ಇನ್ನೋವಾ, ಒಂದು ಹುಂಡೈ ವೆರ್ನಾ, ಒಂದು ಎಕ್ಸ್ಯು ವಿ ಕಾರು ಮತ್ತು ಒಂದು ಮೋಟಾರ್ ಬೈಕ್ ನಜ್ಜುಗುಜ್ಜಾಗಿದೆ.

ಮೂಲಗಳ ಪ್ರಕಾರ ಇನ್ನೋವಾ ಕಾರು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಡಿಸಿ ಆಫೀಸ್ ಕಡೆಗೆ ಸಂಚರಿಸುತಿತ್ತು ಮಣಿಪಾಲದ ಪೋಲಾರ್ ಬೇರ್ ಬಳಿ ಇರುವ ಡಿವೈಡರ್ ನಲ್ಲಿ ಓರ್ವ ಬುಲೆಟ್ ಬೈಕ್ ಸವಾರ ಒಮ್ಮೆಲೇ ಯೂ ಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇನ್ನೋವಾ ಕಾರು ರಸ್ತೆ ಬದಿಯಲ್ಲಿರುವ ಮನೆಯ ಎದುರಿನ ಚರಂಡಿಗೆ ಉರುಳಿ ಬಿದ್ದಿದೆ. ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರ ಸಹಪಾಠಿಗಳು ಮತ್ತೊಂದು ಎಕ್ಸ ಯು ವಿ ಕಾರು ಮತ್ತು ಬೈಕ್ ನಲ್ಲಿ ಸ್ಥಳಕ್ಕೆ ಆಗಮಿಸಿ ತಮ್ಮ ಕಾರು ಹಾಗೂ ಬೈಕ್ ಅನ್ನು ರಸ್ತೆ ಪಕ್ಕ ನಿಲ್ಲಿಸಿದ್ದರು. ಇದೇ ಸಂಧರ್ಭದಲ್ಲಿ ಅತಿವೇಗದಿಂದ ಆಗಮಿಸಿದ ಹುಂಡೈ ವೆರ್ನಾ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ತಡೆಗೋಡೆಗೆ ಹೊಡೆದು, ರಸ್ತೆ ಪಕ್ಕ ನಿಲ್ಲಿಸಿದ್ದ ಎಕ್ಸ್ ಯು ವಿ ಕಾರು ಮತ್ತು ಬೈಕ್ ನ ಮೇಲೇರಿ ನಿಂತಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ಕಾರ್ಯಪ್ರವರ್ತರಾಗಿ ತಕ್ಷಣವೇ ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗಿನ ವರೆಗೂ ಎಲ್ಲಾ ವಾಹನಗಳು ರಸ್ತೆ ಬದಿಯಲ್ಲಿಯೇ ಇದ್ದು ಅಪಾರ ಸಂಖ್ಯೆಯ ಸಾರ್ವಜನಿಕರು ವೀಕ್ಷಣೆ ಮಾಡುತಿದ್ದಾರೆ. ಘಟನೆಯಿಂದಾಗಿ ರಸ್ತೆ ಬದಿಯಲ್ಲಿರುವ ಮೂರು ಮನೆಗಳ ತಡೆಗೋಡೆಗಳಿಗೆ ಕೂಡಾ ಹಾನಿಯಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.