![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 16, 2023, 7:12 AM IST
ಉಡುಪಿ: ಪಾಂಗಾಳದಲ್ಲಿ ಫೆ. 5ರಂದು ನಡೆದ ಶರತ್ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬುಧವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಆರೋಪಿಗಳಾದ ಸುರತ್ಕಲ್ನ ಆಕಾಶ್ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇವರ ಪೈಕಿ ಆಕಾಶ್ ಕರ್ಕೇರನನ್ನು ಒಂದು ವಾರಗಳ ಪೊಲೀಸ್ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಫೆ.14ರಂದು ಸುರತ್ಕಲ್ ಕುಳಾಯಿಯ ದಿವೇಶ್ ಶೆಟ್ಟಿ (20) ಮತ್ತು ಲಿಖೀತ್ ಕುಲಾಲ್ (21) ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಪ್ರಸ್ತುತ ಕಸ್ಟಡಿಯಲ್ಲಿರುವವರನ್ನು ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.