ದುರಸ್ತಿಯಾಗದ ಶಿರ್ವ-ಗಾಂಧೀನಗರ-ಪದವು ಕಾಲೇಜು ರಸ್ತೆ
Team Udayavani, Feb 13, 2022, 3:30 AM IST
ಶಿರ್ವ: ಆತ್ರಾಡಿ -ಶಿರ್ವ -ಬಜ್ಪೆ ರಾಜ್ಯ ಹೆದ್ದಾರಿಯಿಂದ ಶಿರ್ವ ಪದವು ಹಿಂದೂ ಪ.ಪೂ. ಕಾಲೇಜು, ಎಂಎಸ್ಆರ್ಎಸ್ ಕಾಲೇಜು, ಗಾಂಧೀನಗರ, ತೋಪನಂಗಡಿಯಾಗಿ ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಜಾರಂದಾಯ ದೈವಸ್ಥಾನ ಕ್ರಾಸ್ ಬಳಿ ಹದಗೆಟ್ಟು ದುರಸ್ತಿಯಾಗದೆ ಉಳಿದಿದ್ದು, ಸಂಚಾರ ದುಸ್ತರವಾಗಿದೆ.
ರಾಜ್ಯ ಹೆದ್ದಾರಿಯಿಂದ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಎದುರಿನಿಂದ ಹಾದು ಹೋಗುವ ರಸ್ತೆಯ ಪದವು ಬಬ್ಬುಸ್ವಾಮಿ ದೈವಸ್ಥಾನ ಕ್ರಾಸ್ ಮತ್ತು ಜಾರಂದಾಯ ದೈವಸ್ಥಾನ ಕ್ರಾಸ್ ಬಳಿ ಡಾಮರು ಕಿತ್ತುಹೋಗಿ ಹೊಂಡ ಗುಂಡಿಗಳು ನಿರ್ಮಾಣಗೊಂಡಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ.
ರಸ್ತೆ ದುರವಸ್ಥೆಯ ಬಗ್ಗೆ ಈ ಹಿಂದೆ ಸುದಿನ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದಾಗಿ ಲೋಕೋ ಪಯೋಗಿ ಇಲಾಖೆ ವಿಶೇಷ ಅನು ದಾನ ಕಾದಿರಿಸಿ 25 ಲ. ರೂ. ವೆಚ್ಚದಲ್ಲಿ ತೋಪನಂಗಡಿ ಜಂಕ್ಷನ್ನಿಂದ ಪದವು ನೀರಿನ ಟ್ಯಾಂಕ್ನವರೆಗೆ ರಸ್ತೆ ಕಾಮಗಾರಿ ನಡೆದಿತ್ತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 15 ಲ.ರೂ. ಅನುದಾನದಲ್ಲಿ ನಿರ್ಮಿತಿ ಕೇಂದ್ರದ ಉಸ್ತುವಾರಿಯಲ್ಲಿ ಸುಮಾರು 260 ಮೀ.ಉದ್ದ ಮತ್ತು 4 ಮೀ. ಅಗಲದ ರಸ್ತೆಯನ್ನು ಹೆದ್ದಾರಿ ಮುಖ್ಯದ್ವಾರ ಮತ್ತು ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಬಳಿ ಕಾಂಕ್ರೀಟ್ ಕಾಮ ಗಾರಿ ಮಾಡಲಾಗಿತ್ತು. ಅಲ್ಲದೆ 5 ಲ.ರೂ. ಶಾಸಕರ ಅನುದಾನದಿಂದ ಕಾಲೇಜು ಬಳಿಯ ರಸ್ತೆಯನ್ನು ಕಾಂಕ್ರೀಟ್ ಕಾಮಗಾರಿ ನಡೆಸಲಾಗಿತ್ತು,
ಪದವು ನೀರಿನ ಟ್ಯಾಂಕ್ನ ಬಳಿಯಿಂದ ಕಾಲೇಜು ಗೇಟ್ನವರೆಗಿನ ಸುಮಾರು 400 ಮೀ. ರಸ್ತೆಯ ಕಾಮಗಾರಿ ನಡೆಯದೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಯಾಗಿದೆ. ಪ್ರತಿದಿನ ನೂರಾರು ವಾಹನಗಳು, ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆ ರಸ್ತೆ ಕಾಮಗಾರಿಯ ಬಗ್ಗೆ ಗಮನ ಹರಿಸಬೇಕಿದೆ.
ವಿಶೇಷ ಅನುದಾನದಿಂದ ಒಂದು ಬಾರಿ ಅಭಿವೃದ್ಧಿ ಯೋಜನೆಯಡಿ ರೂ.25ಲಕ್ಷ ವೆಚ್ಚದಲ್ಲಿ ರಸ್ತೆ ಡಾಮರು ಕಾಮಗಾರಿ ನಡೆಸಲಾಗಿದೆ. ಜಿ.ಪಂ. ರಸ್ತೆಯಾದ್ದರಿಂದ ಉಳಿದ ರಸ್ತೆಯ ದುರಸ್ತಿ ಜಿ.ಪಂ. ಎಂಜಿನಿಯರಿಂಗ್ ಇಲಾಖೆ ನಡೆಸಬೇಕಿದೆ.-ಜಗದೀಶ ಭಟ್, ಕಾರ್ಯನಿರ್ವಾಹಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಉಡುಪಿ
ಪದವು ರಸ್ತೆ ದುರಸ್ತಿಗಾಗಿ 5 ಲ. ರೂ. ಅನುದಾನಬಿಡುಗಡೆಯಾಗಿದ್ದು, ದುರಸ್ತಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. -ಸುಭಾಷ್ ರೆಡ್ಡಿ, ಜಿ.ಪಂ. ಸಹಾಯಕ ಎಂಜಿನಿಯರ್, ಉಡುಪಿ
-ಸತೀಶ್ಚಂದ್ರ ಶೆಟ್ಟಿ ಶಿರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.