![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Feb 23, 2018, 8:58 AM IST
ಶಿರ್ವ: ಕುಡಿತದ ಮತ್ತಿನಲ್ಲಿ ದಂಡೆಯ ಮೇಲೆ ಕುಳಿತಿದ್ದ ವ್ಯಕ್ತಿಯೋರ್ವರು ಬಾವಿಗೆ ಬಿದ್ದಿದ್ದು, ಆತನನ್ನು ಶಿರ್ವ ಪೊಲೀಸರು ಊರವರ ಸಹಕಾರದೊಂದಿಗೆ ಗುರುವಾರ ಬೆಳಗ್ಗೆ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ತೆಂಕ ಎರ್ಮಾಳು ಅದಮಾರು ಮಠದ ಬಳಿಯ ನಿವಾಸಿ ಕೇಶವ (43) ಬಾವಿಗೆ ಬಿದ್ದವರು. ಇವರು ಪತ್ನಿಯೊಂದಿಗೆ ಜಗಳವಾಡಿ ಶಿರ್ವಕ್ಕೆ ಬಂದು ಬಂಗ್ಲೆ ಮೈದಾನ ಕ್ರಾಸ್ ರಸ್ತೆ ಬಳಿಯ ಮನೆಯ ಗೇಟ್ ಹಾರಿ ಬಾವಿಯ ಬಳಿಗೆ ಹೋಗಿದ್ದ. ದಂಡೆಯ ಮೇಲೆ ಕುಳಿತಿದ್ದವ ಆಯತಪ್ಪಿ ಬಾವಿಗೆ ಬಿದ್ದು ರಾತ್ರಿಯಿಡೀ ಪಂಪ್ಸೆಟ್ನ ಹಗ್ಗ ಹಿಡಿದು ಜೀವ ಉಳಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗಿನ ಜಾವ ಅವರ ಬೊಬ್ಬೆ ಕೇಳಿ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಕಳವಿಗೆ ಬಂದಿದ್ದ: ಸ್ಥಳೀಯರ ಶಂಕೆ
ಘಟನೆ ನಡೆದ ಮನೆಮಂದಿ 2 ದಿನಗಳ ಹಿಂದೆ ಮನೆ ಹಾಗೂ ಗೇಟ್ಗೆ ಬೀಗ ಹಾಕಿ ಮುಂಬಯಿಗೆ ತೆರಳಿದ್ದರು. ಈತ ಬುಧವಾರ ಸಂಜೆ ವೇಳೆ ಆ ಪ್ರದೇಶದಲ್ಲಿ ಅಡ್ಡಾಡಿ ಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬಾವಿಯಲ್ಲಿರುವ ಪಂಪ್ಸೆಟ್ ಕದಿಯಲು ಹೋಗಿ ಒಳಗೆ ಬಿದ್ದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.