Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು


Team Udayavani, Dec 5, 2023, 8:46 PM IST

Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು

ಶಿರ್ವ: ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಾರು ಕುಂಜಿಗುಡ್ಡೆಯಲ್ಲಿ ಡಿ. 5ರಂದು ಮಧ್ಯರಾತ್ರಿ ಮನೆಯಂಗಳಕ್ಕೆ ಮೂವರು ವ್ಯಕ್ತಿಗಳು ಅಕ್ರಮ ಪ್ರವೇಶ ಮಾಡಿ ಮನೆಯ ಗಾಜನ್ನು ಪುಡಿ ಮಾಡಿ ಜಾತಿ ನಿಂದನೆಗೈದು ಹಲ್ಲೆ ನಡೆಸಿದ್ದಾರೆ ಎಂದು ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಿಲಾರು ಗ್ರಾಮದ ಕುಂಜಿಗುಡ್ಡೆ ನಿವಾಸಿ ನ‌ಳಿನಿ (31) ಮತ್ತವರ ಮನೆಯವರು ಡಿ. 4ರ ರಾತ್ರಿ 11 ಗಂಟೆಗೆ ಊಟ ಮಾಡಿ ಮಲಗಿದ್ದರು. ಮಧ್ಯರಾತ್ರಿ ಮನೆಯ ಹಿಂಬದಿ ರಸ್ತೆಯಲ್ಲಿ ಗಲಾಟೆ ಕೇಳಿ ಬಂದಿದ್ದು, ಹಿಂಬದಿ ಕಿಟಿಕಿಯಲ್ಲಿ ನೋಡಿದಾಗ ಪರಿಚಯದ ಪಲಿಮಾರಿನ ಮಯ್ಯದ್ದಿ ಮತ್ತು ಇಬ್ಬರು ಯವಕರು ನಳಿನಿಯವರ ಅಣ್ಣ ಸುರೇಶ್‌ ಅವರಿಗೆ ಜಾತಿ ನಿಂದನೆಗೈದು ಅವಾಚ್ಯ ಶಬ್ದಗಳಿಂದ ಬೈದು ನಿನಗೆ ದಮ್‌ ಇದ್ದರೆ ಮನೆಯಿಂದ ಹೊರಗೆ ಬಾ ಎಂದು ಬೊಬ್ಬೆ ಹಾಕಿದ್ದಾರೆ. ಮಯ್ಯದ್ದಿ ತಾನು ಲವೀನಾಳನ್ನು ಪ್ರೀತಿಸುತ್ತಿದ್ದು, ನೀವೆಲ್ಲರೂ ಸೇರಿ ಆಕೆಯನ್ನು ಹೊರದೇಶಕ್ಕೆ ಕಳುಹಿಸಿ ನನ್ನಿಂದ ದೂರ ಮಾಡಿದ್ದೀರಿ. ಇದಕ್ಕೆಲ್ಲಾ ನೀವೇ ಕಾರಣ ಎಂದು ಮನೆಯ ಹಿಂಬದಿಯ ಕಿಟಿಕಿಯ ಗ್ಲಾಸ್‌ ಒಡೆದು ಹೆಂಚನ್ನು ಪುಡಿ ಮಾಡಿದ್ದಾರೆ. ಬಳಿಕ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ಬಾಗಿಲಿಗೆ ತುಳಿದು ಮನೆಯೊಳಗೆ ಬರಲು ಪ್ರಯತ್ನಿಸಿದ್ದಾರೆ. ಈ ಘಟನೆ ನೋಡಿದ ಮನೆಮಂದಿ ಬೊಬ್ಬೆ ಹಾಕಿದ್ದು, ಅಕ್ಕ ಪಕ್ಕದ ಮನೆಯವರು ಬಂದಾಗ ಮನೆಯವರು ಹೊರಗೆ ಬಂದಿದ್ದಾರೆ. ಆಗ ಮಯ್ಯದ್ದಿ ನಳಿನಿಯವರ ಮೈಗೆ ಕೈ ಹಾಕಿ ದೂಡಿದ್ದು, ಅಣ್ಣ ಸುರೇಶನಿಗೆ 3 ಜನರು ಕೈಯಿಂದ ಹೊಡೆದು ಕಾಲಿನಿಂದ ತುಳಿದಿದ್ದಾರೆ. ಅಲ್ಲಿಗೆ ಬಂದಿದ್ದ ಅಕ್ಕಪಕ್ಕದವರು ಸುರೇಶನನ್ನು ರಕ್ಷಿಸಿದ್ದು, ಆರೋಪಿತ ಮೂವರು ತಾವು ಬಂದ ಬೈಕ್‌ನಲ್ಲಿ ತೆರಳಿದ್ದಾರೆ ಎಂದು ದೂರಿನಲ್ಲಿ ನಳಿನಿ ಅವರು ಉಲ್ಲೇಖಿಸಿದ್ದಾರೆ.

ಪ್ರತಿ ದೂರು
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲಿಮಾರು ನಿವಾಸಿ ಪ್ರಜ್ಞೇಶ್ (19) ಪ್ರತಿ ದೂರು ನೀಡಿದ್ದಾರೆ. ಪ್ರಜ್ಞೇಶ್ ತನ್ನ ಸ್ನೇಹಿತರಾದ ಗಿರೀಶ್‌ ಮತ್ತು ಮಯ್ಯದ್ದಿ ಜತೆ ಪಿಲಾರುಖಾನ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗಿ ಬರುವಾಗ ಮಯ್ಯದ್ದಿ ತಾನು ಪ್ರೀತಿಸುವ ಹುಡುಗಿಯ ಮನೆ ಇದೇ ದಾರಿಯಲ್ಲಿ ಇದೆ ಎಂದಿದ್ದ. ಆಕೆ ವಿದೇಶದಲ್ಲಿದ್ದು ಊರಿಗೆ ಬಂದಾಗ ಮದುವೆ ಮಾಡಿಕೊಡಬೇಕೆಂದು ಆಕೆಯ ಅಣ್ಣ ಸುರೇಶನಲ್ಲಿ ಕೇಳುವ ಸಲುವಾಗಿ ರಾತ್ರಿ 1 ಗಂಟೆಗೆ ಪಿಲಾರು ಕುಂಜಿಗುಡ್ಡೆ ಅಂಬೇಡ್ಕರ್‌ ಭವನದ ಎದುರು ಮನೆ ಬಳಿ ಆತನನ್ನು ಕೂಗಿದ್ದಾರೆ. ಆಗ ನೆರೆಕರೆಯವರಾದ ಸಂಜೀವ, ಸಂದೇಶ ಮತ್ತು ಇತರ 5-6 ಮಂದಿ ಬಂದು ಪ್ರಜ್ನೆàಶ್‌ ಮತ್ತಿಬ್ಬರಿಗೆ ದೊಣ್ಣೆ, ಸೋಂಟೆಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದವರು 108 ವಾಹನದಲ್ಲಿ ಚಿಕಿತ್ಸೆ ಬಗ್ಗೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಜ್ಞೇಶ್ ಮತ್ತು ಗಿರೀಶ್‌ ಒಳರೋಗಿಯಾಗಿ ಮತ್ತು ಮಯ್ಯದ್ದಿ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳಾದ ಸುರೇಶ್‌, ಸಂಜೀವ, ಸಂದೇಶ್‌ ಮತ್ತು ಇತರ 5-6 ಮಂದಿ ಸೇರಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಲ್ಲದೆ, ಅವರು ಬಂದ ಬೈಕನ್ನು ದೊಣ್ಣೆಯಿಂದ ಜಖಂಗೊಳಿಸಿ ಗಿರೀಶ್‌ ಅವರ ಮೊಬೈಲ್‌ ಹೊಡೆದಿದ್ದಾರೆ ಎಂದು ಪ್ರಜ್ಞೇಶ್ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.