Shirva Sri Kashimath: ಶ್ರೀ ಸುಧೀಂದ್ರ ವನಕ್ಕೆ ಚಾಲನೆ
Team Udayavani, Aug 19, 2024, 11:29 AM IST
ಶಿರ್ವ: ಶ್ರೀ ಕಾಶೀಮಠದ ಹಿರಿಯ ಯತಿಗಳಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಮಹೋತ್ಸವದ ಪ್ರಯುಕ್ತ ಶಿರ್ವ ಶ್ರೀ ಕಾಶೀಮಠ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಜಮೀನಿನಲ್ಲಿ ಶ್ರೀ ಸುಧೀಂದ್ರ ಫಲೋಧ್ಯಾನಕ್ಕೆ ರವಿವಾರ ಚಾಲನೆ ನೀಡಲಾಯಿತು.
ದೇಗುಲದಲ್ಲಿ ಪ್ರಾರ್ಥನೆ ನೆರವೇರಿದ ಬಳಿಕ ಶ್ರೀಮದ್ ಸುಧೀಂದ್ರ ತೀರ್ಥರ ಭಾವಚಿತ್ರವನ್ನು ಕುಲಾವಿ ಭಜಕ ಬಾಂಧವರು ಬೆಳ್ಳಿಯ ಪಲ್ಲಕ್ಕಿಯಲಿಟ್ಟು ಮೆರವಣಿಗೆಯಲ್ಲಿ ಕೊಂಡೊಯ್ದ ಬಳಿಕ ಸುಧೀಂದ್ರ ವನದಲ್ಲಿ ವೇ|ಮೂ| ಕೆ.ರವೀಂದ್ರ ಭಟ್ಮತ್ತು ದೇಗುಲದ ಪ್ರಧಾನ ಅರ್ಚಕ ರಘುರಾಮ ಭಟ್ ಅವರ ನೇತೃತ್ವದಲ್ಲಿ ಗುರುಪೂಜೆ ಮತ್ತು ವೃಕ್ಷಪೂಜೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೆರಿಸಲಾಯಿತು. ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ| ದಾಮೋದರ ಪೈ ದೀಪ ಬೆಳಗಿಸಿ ಉದ್ಘಾಟಿಸಿ ಸುಧೀಂದ್ರ ವನಕ್ಕೆ ಚಾಲನೆ ನೀಡಿದರು.
ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ವೇ|ಮೂ| ರವಿ ಭಟ್ ಮಾತನಾಡಿ ಪರಿಸರ ಪ್ರೇಮಿಯಾಗಿದ್ದು, ಪಕ್ಷಿ ಸಂಕುಲದ ಆಹಾರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಶ್ರೀಮದ್ ಸುಧೀಂದ್ರ ತೀರ್ಥರ ಆಶಯದಂತೆ ಅವರ ಜನ್ಮ ಶತಾಬ್ದಿಯ ಪ್ರಯುಕ್ತ ದೇಗುಲಕ್ಕೆ ಸಂಬಂಧ ಪಟ್ಟ ಪ್ರತಿಯೊಂದು ಕುಲಾವಿಗಳು ಪಕ್ಷಿ ಸಂಕುಲದ ಉಳಿವಿಗಾಗಿ ಫಲೋಧ್ಯಾನದಲ್ಲಿ ಹಣ್ಣಿನ ಗಿಡ ನೆಟ್ಟು ಸ್ವಾಮೀಜಿಯವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಹೇಳಿದರು. ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ರಾಮದಾಸ ಶೆಣೈ,ನವೀನ್ ಶೆಣೈ ಮತ್ತು ಭಕ್ತರು ಉಪಸ್ಥಿತರಿದ್ದರು.
ಕೇಂದ್ರೀಯ ಸಮಿತಿಯ ಲೆಕ್ಕಪರಿಶೋಧಕ ಸುರೇಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಚಿದಾನಂದ ಪೈ ಗಿಡ ನೆಡುವ ಬಗ್ಗೆ ಮಾಹಿತಿ ನೀಡಿ ವಂದಿಸಿದರು. ದೇಗುಲದ ಭಕ್ತ ಸಮೂಹಕ್ಕೆ ಫಲ ಬರುವ ಗಿಡಗಳನ್ನು ವಿತರಿಸಿದ ಬಳಿಕ ಸಾಮೂಹಿಕವಾಗಿ ತರಹೇವಾರಿ ಹಣ್ಣಿನಗಿಡ ,ರಕ್ತಚಂದನ ಮತ್ತು ಸಾಗುವಾನಿ ಗಿಡಗಳನ್ನು ನೆಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.