“ಶಿವಾಜಿ ಮಹಾರಾಜ್‌-ಅಖಂಡ ಹಿಂದೂ ಸಮಾಜಕ್ಕೆ ಆದರ್ಶಪ್ರಾಯ’


Team Udayavani, Mar 16, 2017, 4:11 PM IST

150317uce2.jpg

ಉಡುಪಿ: ಶಿವಾಜಿ ಮಹಾರಾಜ್‌ ಯಾವುದೋ ಒಂದು ಜಾತಿ, ಸಂಪ್ರದಾಯಕ್ಕೆ ಸೀಮಿತವಾಗದೆ ಅಖಂಡ ಹಿಂದೂ ಸಮಾಜಕ್ಕೆ ಆದರ್ಶಪ್ರಾಯವಾಗಿರುವ ವ್ಯಕ್ತಿ. ಶಿವಾಜಿಯ ಗುಣ, ಆದರ್ಶಗಳನ್ನು ಪಾಲಿಸಬೇಕು ಎಂದು ಉಡುಪಿ ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ವಿಜಯಕುಮಾರ್‌ ಅವರು ಹೇಳಿದರು.

ಛತ್ರಪತಿ ಶಿವಾಜಿ ವಿವಿಧೋದ್ಧೇಶ ಸಹಕಾರ ಸಂಘ ಹಾಗೂ ರಾಜೇ ಛತ್ರಪತಿ ಗೋಲ್ಡ್‌ ಆ್ಯಂಡ್‌ ಸಿಲ್ವರ್‌ ರಿಫೈನರಿ ಅಸೋಸಿಯೇಶನ್‌ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ನೈವೇದ್ಯ ಹೊಟೇಲ್‌ ಸಭಾಂಗಣದಲ್ಲಿ ಬುಧವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ 390ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೂಗಳು ಇವತ್ತು ಇದ್ದಾರೆಂದರೆ ಅದಕ್ಕೆ ಕಾರಣ ಶಿವಾಜಿಯ ಅಂದಿನ ಹೋರಾಟ. ಮೊಘಲರ ಕಾಲದಲ್ಲಿ ಗೋಹತ್ಯೆ, ಅತ್ಯಾಚಾರ, ಅನ್ಯಾಯಗಳು ಮಿತಿಮೀರಿದಾಗ ಜನ್ಮ ತಾಳಿದ ಶಿವಾಜಿಯು ಸಂತರೀರ್ವರ ಮಾರ್ಗದರ್ಶನ, ಕುಲದೇವರು ಅಂಬಾಭವಾನಿಯ ಆಶೀರ್ವಾದದಲ್ಲಿ ಹಿಂದ್‌ ಸ್ವರಾಜ್ಯ ಸ್ಥಾಪನೆ ಮಾಡಿ ಹೋರಾಟ ನಡೆಸಿದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರ ಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಹರಿದಾಸ ಬಿ.ಸಿ. ರಾವ್‌ ಶಿವಪುರ ಅವರು ಛತ್ರಪತಿ ಶಿವಾಜಿ ಮಹಾರಾಜರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ಛತ್ರಪತಿ ಶಿವಾಜಿ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ದಿನೇಶ್‌ ಸಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ರಾಜೇ ಛತ್ರಪತಿ ಗೋಲ್ಡ್‌ ಆ್ಯಂಡ್‌ ಸಿಲ್ವರ್‌ ರಿಫೈನರಿ ಅಸೋಸಿ ಯೇಶನ್‌ ಅಧ್ಯಕ್ಷ ಮಹಾದೇವ್‌ ಭಗವಾನ್‌ ಜಾಂಕರ್‌, ನ್ಯಾಯವಾದಿಗಳ ವಿವಿಧೋದ್ಧೇಶ ಸಹಕಾರ ಸಂಘದ ಉಪಾಧ್ಯಕ್ಷ ಮಂಜುನಾಥ ಎಸ್‌.ಕೆ., ಕ್ಷತ್ರಿಯ ಮರಾಠ ಪರಿಷತ್‌ ಕಾರ್ಕಳ ತಾಲೂಕು ಪ್ರ.ಕಾರ್ಯದರ್ಶಿ ಸಂತೋಷ್‌ ರಾವ್‌ ಕವಡೆ, ಹಿರಿಯಡಕ ವಲಯ ಬಜರಂಗದಳ ಸಂಚಾಲಕ ಉದಯ ನಾಯ್ಕ, ತಾ.ಪಂ. ಸದಸ್ಯ ಸುಭಾಷ್‌ ನಾಯ್ಕ, ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಅಧ್ಯಕ್ಷ ಆರ್‌.ಸಿ. ನಾಯ್ಕ, ಮರಾಠ ಸ್ವಾಭಿಮಾನ ಜಾಗೃತಿ ಪ್ರತಿಷ್ಠಾನದ ಪ್ರ.ಕಾರ್ಯದರ್ಶಿ ಅಜಿತ್‌ ಕುಮಾರ್‌ ನಾಯ್ಕ ಉಪಸ್ಥಿತರಿದ್ದರು.ಗಣೇಶ್‌ ಸ್ವಾಗತಿಸಿದರು. ಯಶಸ್ವಿನಿ ಅಮೀನ್‌ ಕಾರ್ಯಕ್ರಮ ನಿರೂಪಿಸಿದರು.

“ಹಿಂದೂ ರಾಷ್ಟ್ರಕ್ಕಾಗಿ ಹೋರಾಟ’
 ಮೊಘಲರ ಕಾಲದಲ್ಲಿದ್ದ ಸನ್ನಿವೇಶವೇ ಇಂದು ನಿರ್ಮಾಣಗೊಂಡಿದೆ. ಭಯೋತ್ಪಾದನೆ, ಮತಾಂತರ, ಲವ್‌ಜಿಹಾದ್‌, ಅತ್ಯಾಚಾರ ಹೆಚ್ಚುತ್ತಲಿದೆ. ಅಂದು ಶಿವಾಜಿ ಹಿಂದ್‌ ವೇ ಸ್ವರಾಜ್ಯ ನಿರ್ಮಾಣ ಮಾಡಿದಂತೆ ಇಂದು ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹೋರಾಟ ಮಾಡುವ ಸಮಯ ಬಂದೊದಗಿದೆ. ತಮ್ಮ ವಾಹನಗಳಲ್ಲಿ ಶಿವಾಜಿಯ ಚಿತ್ರಗಳನ್ನು ಹಾಕಿಕೊಂಡು ಹೋಗುವುದು ಮಾತ್ರವಲ್ಲದೆ ಶಿವಾಜಿಯ ನೈಜ ಗುಣಾದರ್ಶಗಳನ್ನು ಪಾಲನೆ ಮಾಡಿಕೊಂಡು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದು ವಿಜಯ ಕುಮಾರ್‌ ಹೇಳಿದರು.
 

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.